AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲಿ ಕಿಡ್ನಿ ಕಸಿ ದುಬಾರಿ ಅಲ್ಲ: ಊರು ಯಾವುದು, ಆಸ್ಪತ್ರೆ ಯಾವುದು? ವಿವರ ಇಲ್ಲಿದೆ

ವೈದ್ಯಕೀಯ ಚಿಕಿತ್ಸೆ ವ್ಯಾಪಾರೀಕರಣವಾಗಿರುವ ದಿನಗಳಲ್ಲಿ ವಿಜಯಪುರಲ್ಲಿ ಕಡಿಮೆ ವೆಚ್ಚದಲ್ಲಿ ಕಿಡ್ನಿ ಕಸಿ ಚಿಕಿತ್ಸೆ ಮಾಡುತ್ತಿರೋದು ಶ್ಲಾಘನೀಯ ಕಾರ್ಯವಾಗಿದೆ. ಬಡವರಿಗೆ, ಮಧ್ಯಮ ವರ್ಗದವರಿಗೆ, ಸ್ಥಳೀಯರಿಗೆ ಇದರಿಂದ ಅನುಕೂಲವಾಗಿದೆ. ಕಡಿಮೆ ಶುಲ್ಕ ಹಾಗೂ ಸ್ವಂತ ಊರಿನಲ್ಲೇ ಚಿಕಿತ್ಸೆ ಸಿಗುತ್ತಿರೋದು ಸಮಾಧಾನಕರ ಸಂಗತಿಯಾಗಿದೆ.

ಇಲ್ಲಿ ಕಿಡ್ನಿ ಕಸಿ ದುಬಾರಿ ಅಲ್ಲ: ಊರು ಯಾವುದು, ಆಸ್ಪತ್ರೆ ಯಾವುದು? ವಿವರ ಇಲ್ಲಿದೆ
ಇಲ್ಲಿ ಕಿಡ್ನಿ ಕಸಿ ದುಬಾರಿ ಅಲ್ಲ: ಆಸ್ಪತ್ರೆ ಯಾವುದು? ವಿವರ ಇಲ್ಲಿದೆ
ಅಶೋಕ ಯಡಳ್ಳಿ, ವಿಜಯಪುರ
| Edited By: ಸಾಧು ಶ್ರೀನಾಥ್​|

Updated on: Jan 20, 2024 | 10:50 AM

Share

ವೈಜ್ಞಾನಿಕವಾಗಿ ನಾವು ಬಹಳಷ್ಟು ಮುಂದುವರೆದಿದ್ದೇವೆ. ಮಾನವನ ಅಂಗಾಂಗ ಕೃಷಿ ಮಾಡುವ ವಿಧಾನ ಇಂದು ಸಲೀಸಾಗಿದೆ. ಇದರಿಂದ ಅದೆಷ್ಟೋ ರೋಗಿಗಳು ಬದುಕುಳಿದಿದ್ದಾರೆ. ಆದರೆ ಅಂಗಾಂಗ ಕೃಷಿ ಚಿಕಿತ್ಸೆ ಮಾತ್ರ ದುಬಾರಿಯೇ ಎನ್ನಬಹುದು. ಇಂದಿನ ದಿನಗಳಲ್ಲಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವವರ ಸಂಖ್ಯೆ ದೊಡ್ಡದಾಗುತ್ತಾ ಸಾಗಿದೆ. ಕಿಡ್ನಿ ಕಸಿ ಚಿಕಿತ್ಸೆ ಸುಲಭವಾಗಿದ್ದರೂ ದುಬಾರಿಯಾಗಿದೆ. ಮಧ್ಯಮ ವರ್ಗದ ಬಡವರಿಗೆ ಕಷ್ಟದ ಚಿಕಿತ್ಸೆಯಾಗಿದೆ. ಇದಕ್ಕೆ ಅಪವಾದವೆಂಬಂತೆ ಅತೀ ಕಡಿಮೆ ದರದಲ್ಲಿ ಕಿಡ್ನಿ ಕಸಿ ಮಾಡುತ್ತಿದ್ದಾರೆ ವಿಜಯಪುರ ನಗರದ ಖಾಸಗಿ ಆಸ್ಪತ್ರೆ ವೈದ್ಯರು. ಬಡವರಿಗೆ, ಮಧ್ಯಮ ವರ್ಗದವರಿಗೆ ಅನಕೂಲವಾಗಲಿ, ಎಲ್ಲರಿಗೂ ಸಮರ್ಪಕ ಚಿಕಿತ್ಸೆ ಸಿಗಲಿ ಎಂಬ ಉದ್ದೇಶದಿಂದ ಅತೀ ಕಡಿಮೆ ವೆಚ್ಚದಲ್ಲಿ ಇಲ್ಲಿ ಕಿಡ್ನಿ ಕಸಿ ಮಾಡಲಾಗುತ್ತಿದೆ. ಈ ಕುರಿತ ವರದಿ ಇಲ್ಲಿದೆ ನೋಡಿ.

ವಿಜಯಪುರ ನಗರದ ಬಿಎಲ್ಡಿಇ ಸಂಸ್ಥೆಯ ಬಿ ಎಂ ಪಾಟೀಲ್ ಮೆಡಿಕಲ್ ಕಾಲೇಜ್ ಹಾಗೂ ಹಾಸ್ಪಿಟಲ್ ನಲ್ಲಿ ಇದೇ ಮೊದಲ ಬಾರಿಗೆ ಕಿಡ್ನಿ ಕಸಿ ಚಿಕಿತ್ಸೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಬಿಹಾರ ಮೂಲಕ 17 ವರ್ಷದ ಯುವಕನಿಗೆ ಉಚಿತವಾಗಿ ಕಿಡ್ನಿ ಕಸಿ ಮಾಡಲಾಗಿದೆ. ಶಸ್ತ್ರಚಿಕಿತ್ಸೆ ನಂತರ ರೋಗಿಯು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಆತನನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಬಿಎಲ್ಡಿಇ ಆಸ್ಪತ್ರೆಯಲ್ಲಿ ಬಿಹಾರದ ಬಡ ಕುಟುಂಬದ ಯುವಕನಿಗೆ ಯಾವುದೇ ವೈದ್ಯ ಶುಲ್ಕ, ಹಾಸಿಗೆ ಶುಲ್ಕ, ಆಪರೇಷನ್ ಥಿಯೇಟರ್ ಶುಲ್ಕಗಳನ್ನು ಪಡೆಯದೇ ಆದಷ್ಟು ಆಸ್ಪತ್ರೆಯ ಔಷಧಿಗಳನ್ನೇ ನೀಡಿ ಉಚಿತವಾಗಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈ ಮೊದಲೇ ಆಸ್ಪತ್ರೆ ವತಿಯಿಂದ ರಿಯಾಯಿತಿ ದರದಲ್ಲಿ ಐದು ಮಂದಿಗೆ ಕಿಡ್ನಿ‌ ಕಸಿಗಳನ್ನು ಯಾವುದೇ ಖರ್ಚುಗಳಿಲ್ಲದೇ ಮಾಡುವುದಾಗಿ ನಾವು ಹೇಳಿದ್ದೆವು. ಅದರಂತೆ ಮೊದಲ ಮೂತ್ರಪಿಂಡ ಕಸಿ ಯಶಸ್ವಿಯಾಗಿ ಮಾಡಿದ್ದೇವೆಂದು ಡಾ ಎಸ್ ಬಿ ಪಾಟೀಲ್, ಯುರೋಲಾಜಿ ವಿಭಾಗದ ಮುಖ್ಯ ವೈದ್ಯರು ಮಾಹಿತಿ ನೀಡಿದ್ದಾರೆ.

ಬಿಹಾರ ಮೂಲದ 17 ವರ್ಷದ ಬಾಲಕ ಕಿಡ್ನಿ ಸಮಸ್ಯೆಯಿಂದ ಬಳುತ್ತಿದ್ದ. ಬಿಹಾರ ದೆಹಲಿ ಸೇರಿದಂತೆ ಇತರೆ ಹತ್ತಾರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದ. ಆದರೆ ಕಿಡ್ನಿ ಬದಲಾವಣೆ ಮಾಡಬೇಕೆಂದು ಎಲ್ಲಾ ವೈದ್ಯರು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಯುವಕನಿಗೆ ಕಿಡ್ನಿ ಕಸಿಗೆ ಮುಂದಾದಾಗ 10 ರಿಂದ 15 ಲಕ್ಷ ರೂಪಾಯಿ ಚಿಕಿತ್ಸಾ ವೆಚ್ಚವಾಗುತ್ತದೆ ಎಂದು ಹೇಳಿದ್ದರಂತೆ.

ಇಷ್ಟು ಹಣ ಯುವಕನ ಕುಟುಂಬದವರ ಬಳಿ ಇರಲಿಲ್ಲ. ಅವರು ಬಡವರಾಗಿದ್ದು ಕಿಡ್ನಿ ಕಸಿ ಮಾಡಿಸಲು ಸಾಧ್ಯವಾಗದೇ ಡಯಾಲಿಸಿಸ್ ಚಿಕಿತ್ಸೆ ಮೊರೆ ಹೋಗಿದ್ದರು. ಈ ವಿಚಾರ ಬಿಹಾರದ ಪೊಲೀಸ್ ಆಧಿಕಾರಿಗಳಿಗೆ ತಿಳಿದಿದ್ದು ಅವರ ಸೂಚನೆಯಂತೆ ಯುವಕ ವಿಜಯಪುರ ನಗರದ ಬಿಎಲ್ಡಿಇ ಹಾಸ್ಪಿಟಲ್ ಗೆ ದಾಖಲಾಗಿದ್ದಾನೆ.

ಆತನಿಗೆ ಆತನ ತಾಯಿಯ ಕಿಡ್ನಿಯನ್ನೇ ತೆಗೆದು ಕಸಿ ಮಾಡುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಇಲ್ಲಿ ಯುವಕನಿಗೆ ಕೆಲ ತಪಾಸಣೆಗಳ ಶುಲ್ಕ ಮಾತ್ರ ಪಡೆದಿದ್ದು ಇನ್ನುಳಿದ ಶಸ್ತ್ರಚಿಕಿತ್ಸೆ, ಆಸ್ಪತ್ರೆ ಶುಲ್ಕ, ವೈದ್ಯರ ಶುಲ್ಕ, ಬೆಡ್ ಚಾರ್ಜಸ್ ಸೇರಿದಂತೆ ಇತರೆ ಯಾವುದೇ ಶುಲ್ಕಗಳನ್ನು ಪಡೆದಿಲ್ಲ. ಬಿಎಲ್ಡಿಇ ಸಂಸ್ಥೆಯ ಆಧ್ಯಕ್ಷ ಹಾಗೂ ಸಚಿವ ಎಂ ಬಿ ಪಾಟೀಲ್ ಸೂಚನೆ ಮೇರೆಗೆ ಸರ್ಕಾರದ ಆರೋಗ್ಯ ಸೇವೆ ಯೋಜನೆಗಳಿಂದ ಸಿಗುವ ಹಣದಲ್ಲೇ ಕಿಡ್ನಿ ಕಸಿ ಚಿಕಿತ್ಸೆ ನೀಡಲು ತೀರ್ಮಾನ ಮಾಡಲಾಗಿದೆ. ಸುಮಾರು 3 ಲಕ್ಷ ರೂಪಾಯಿಗಳಲ್ಲೇ ಕಿಡ್ನಿ ಕಸಿ ಚಿಕಿತ್ಸೆ ಇಲ್ಲಿ ಸಿಗಲಿದೆ. ಇನ್ನು ಕಿಡ್ನಿ ಕಸಿಗೆ ಒಳಗಾಗಿ ಗುಣಮುಖವಾಗಿರುವ ಬಿಹಾರ ಮೂಲದ ಯುವಕನ ಕುಟುಂಬದವರು ಇಲ್ಲಿನ ಚಿಕಿತ್ಸೆ ಬಗ್ಗೆ ಮೆಚ್ಚುಗೆ ಸೂಚಿಸಿದ್ಧಾರೆ. ಉಚಿತವಾಗಿ ಕಿಡ್ನಿ ಕಸಿ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಡಾ ವಿಜಯಕುಮಾರ ಕಲ್ಯಾಣಪ್ಪಗೋಳ, ಬಿಎಲ್ಡಿಇ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ತಿಳಿಸಿದ್ದಾರೆ.

ವೈದ್ಯಕೀಯ ಚಿಕಿತ್ಸೆ ಒಂದು ರೀತಿಯ ವ್ಯಾಪಾರೀಕರಣವಾದ ದಿನಗಳಲ್ಲಿ ವಿಜಯಪುರಲ್ಲಿ ಕಡಿಮೆ ವೆಚ್ಚದಲ್ಲಿ ಕಿಡ್ನಿ ಕಸಿ ಚಿಕಿತ್ಸೆ ಮಾಡುತ್ತಿರೋದು ಶ್ಲಾಘನೀಯ ಕಾರ್ಯವಾಗಿದೆ. ಬಡವರಿಗೆ, ಮಧ್ಯಮ ವರ್ಗದವರಿಗೆ ಇದು ಅನಕೂಲವಾಗಿದೆ. ಕಿಡ್ನಿ ಕಸಿಗಾಗಿ ಇಲ್ಲಿಂದ ಇತರೆ ನಗರಗಳ ಆಸ್ಪತ್ರೆಗಳಿಗೆ ತೆರಳುತ್ತಿದ್ದವರಿಗೆ ಇಲ್ಲಿ ಮತ್ತಷ್ಟು ಅನುಕೂಲವಾಗಲಿದೆ. ಕಡಿಮೆ ಶುಲ್ಕ ಹಾಗೂ ಸ್ವಂತ ಊರಿನಲ್ಲೇ ಚಿಕಿತ್ಸೆ ಸಿಗುತ್ತಿರೋದು ಸಮಾಧಾನಕರ ಸಂಗತಿಯಾಗಿದೆ.

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!