AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ಉಳುಮೆ ಮಾಡುವ ವೇಳೆ ಅವಘಡ; ರೋಟೋವೇಟರ್ ಕಟರ್ ಬಡಿದು ಯುವಕ ಸಾವು

ರೋಟೋವೇಟರ್ ಕಟರ್ ಬಡಿದು ಗೊಳಸಂಗಿ ಗ್ರಾಮದ ನಿವಾಸಿ ಮೆಹಿಬೂಬ್ ಮನಗೂಳಿ(32) ಮೃತಪಟ್ಟಿದ್ದಾರೆ. ಕೂಡಗಿ ಎನ್​ಟಿಪಿಸಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಜಮೀನು ಉಳುಮೆ ಮಾಡುವ ವೇಳೆ ಅವಘಡ; ರೋಟೋವೇಟರ್ ಕಟರ್ ಬಡಿದು ಯುವಕ ಸಾವು
ರೊಟೋವೇಟರ್ ಕಟರ್
TV9 Web
| Edited By: |

Updated on:Jan 28, 2022 | 12:16 PM

Share

ವಿಜಯಪುರ: ಟ್ರ್ಯಾಕ್ಟರ್​ನಿಂದ ರೋಟೋವೇಟರ್ ಮೂಲಕ ಜಮೀನು ಉಳುಮೆ ಮಾಡುವ ವೇಳೆ ಯುವಕ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಡೆದಿದೆ. ರೋಟೋವೇಟರ್ ಕಟರ್ (Rotavator cutter) ಬಡಿದು ಗೊಳಸಂಗಿ ಗ್ರಾಮದ ನಿವಾಸಿ ಮೆಹಿಬೂಬ್ ಮನಗೂಳಿ(32) ಮೃತಪಟ್ಟಿದ್ದಾರೆ(Death). ಕೂಡಗಿ ಎನ್​ಟಿಪಿಸಿ(NTPC) ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕಲಬುರಗಿ: ನೀರಾವರಿ ಪಂಪಸೆಟ್​ನಲ್ಲಿನ ತಾಮ್ರ ಕಳ್ಳತನ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಟಾಕಳಿ ಗ್ರಾಮದಲ್ಲಿ ನೀರಾವರಿ ಪಂಪಸೆಟ್​ನಲ್ಲಿನ ತಾಮ್ರ ಕಳ್ಳತನ ಮಾಡಿದ್ದಾರೆ. ಭೀಮಾ ನದಿ ದಡದಲ್ಲಿನ ಪಂಪ್​ಸೆಟ್​ನಲ್ಲಿನ ತಾಮ್ರ ಕಳ್ಳತನ ಮಾಡಿದ್ದಾರೆ. ಹದಿನೈದು  ಪಂಪ್​ಸೆಟ್​ನಲ್ಲಿನ ತಾಮ್ರ ಕಳ್ಳತನವಾಗಿದ್ದು, ಕಳೆದ ಒಂದು ವಾರದಲ್ಲಿ ನೂರಕ್ಕೂ ಹೆಚ್ಚು ಪಂಪ್​ಸೆಟ್​ನಲ್ಲಿನ ತಾಮ್ರ ಕಳ್ಳತನವಾಗಿದೆ. ಅಫಜಲಪುರ, ಜೇವರ್ಗಿ ತಾಲೂಕಿನ ಅನೇಕ ಗ್ರಾಮಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದೆ. ಕಳ್ಳತನದಿಂದ ರೈತರು ಕಂಗಾಲಾಗಿದ್ದಾರೆ. ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಗದಗ: ಕ್ರಷರ್ ಧೂಳಿಗೆ, ಕಲ್ಲು ಗಣಿಗಾರಿಕೆಗೆ ರೈತರ ಬೆಳೆ ನಾಶ

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೊಳೆಇಟಗಿ ಗ್ರಾಮದ ಬಳಿ ಇರುವ ಗಣಿಗಾರಿಕೆಯಿಂದ ರೈತರ ಬೆಳೆ ನಾಶವಾಗಿದೆ. ಅವೈಜ್ಞಾನಿಕ ಬ್ಲಾಸ್ಟಿಂಗ್​ಗೆ ದೊಡ್ಡ ಪ್ರಮಾಣದ ಕಲ್ಲುಗಳು ಬೋರ್ ವೆಲ್​ಗಳು ಬ್ಲಾಸ್ಟಿಂಗ್​ಗೆ ಕುಸಿಯುತ್ತಿವೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಹಶಿಲ್ದಾರ, ಪೊಲೀಸ್, ಗಣಿ ಅಧಿಕಾರಿಗಳ ಗಮನಕ್ಕೆ ತಂದ್ದರು ಯಾವುದೇ ಕ್ರಮ ಕೈಗೊಂಡಿಲ್ಲ. ರೈತರ ನೆರವಿಗೆ ಬಾರದ ಜಿಲ್ಲಾಡಳಿತದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗದಗ-ಹೊನ್ನಾಳಿ ರಾಜ್ಯ ಹೆದ್ದಾರಿ ಕಾಮಗಾರಿ ಗುತ್ತಿಗೆ ಪಡೆದ ಸಧ್ಬವ್ ಕನ್​ಸ್ಟ್ರಕ್ಷನ್ ಕಂಪನಿ ಸದ್ಯ ಆರ್​ಎಸ್​ಎಎಸ್​ ಕಂಪನಿಯಿಂದ ‌ಕಾಮಗಾರಿ ನಡೆಸುತ್ತಿದೆ. ಅವೈಜ್ಞಾನಿಕ ಕಲ್ಲು ಕ್ವಾರಿ ಬ್ಲಾಸ್ಟಿಂಗ್ ನಡೆಯುತ್ತಿದ್ದು, ರೈತರ ಜಮೀನಿನಲ್ಲಿ ಕಲ್ಲು ರಾಶಿ ಹಾಕಲಾಗಿದೆ. ತಲೆ ಮೇಲೆ ಕಲ್ಲು ಹೊತ್ತುನಿಂತು ರೈತರು ರೋಷಾವೇಶ ವ್ಯಕ್ತಪಡಿಸಿದ್ದಾರೆ. ಬ್ಲಾಸ್ಟಿಂಗ್​ಗೆ ಹೆದರಿ ಜಮೀನಿನ ಕಡೆ ಕೂಲಿ ಕಾರ್ಮಿಕರು ಬರುತ್ತಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕುವಂತೆ ಆಗಿದೆ.

ಇದನ್ನೂ ಓದಿ: ಆಂಬ್ಯುಲೆನ್ಸ್ ವಾಹನ ತೊಳೆಯಲು ನೀರಿಗಿಳಿದಿದ್ದ ಯುವಕ ಜಲ ಸಮಾಧಿ – ಟ್ರಾಕ್ಟರ್​ಗೆ ಬೈಕ್​ ಡಿಕ್ಕಿ; ಇಬ್ಬರು ಸವಾರರ ಸಾವು

ಟ್ರಾಕ್ಟರ್​ಗೆ ಸಿಲುಕಿ ಗಾಯಗೊಂಡಿದ್ದ ನಾಗರ ಹಾವು ರಕ್ಷಣೆ: ಮಾನವೀಯತೆ ಮೆರೆದ ಉರಗ ತಜ್ಞ Photos

Published On - 12:05 pm, Fri, 28 January 22

Follow Us
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ