AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ಉಳುಮೆ ಮಾಡುವ ವೇಳೆ ಅವಘಡ; ರೋಟೋವೇಟರ್ ಕಟರ್ ಬಡಿದು ಯುವಕ ಸಾವು

ರೋಟೋವೇಟರ್ ಕಟರ್ ಬಡಿದು ಗೊಳಸಂಗಿ ಗ್ರಾಮದ ನಿವಾಸಿ ಮೆಹಿಬೂಬ್ ಮನಗೂಳಿ(32) ಮೃತಪಟ್ಟಿದ್ದಾರೆ. ಕೂಡಗಿ ಎನ್​ಟಿಪಿಸಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಜಮೀನು ಉಳುಮೆ ಮಾಡುವ ವೇಳೆ ಅವಘಡ; ರೋಟೋವೇಟರ್ ಕಟರ್ ಬಡಿದು ಯುವಕ ಸಾವು
ರೊಟೋವೇಟರ್ ಕಟರ್
TV9 Web
| Edited By: |

Updated on:Jan 28, 2022 | 12:16 PM

Share

ವಿಜಯಪುರ: ಟ್ರ್ಯಾಕ್ಟರ್​ನಿಂದ ರೋಟೋವೇಟರ್ ಮೂಲಕ ಜಮೀನು ಉಳುಮೆ ಮಾಡುವ ವೇಳೆ ಯುವಕ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಡೆದಿದೆ. ರೋಟೋವೇಟರ್ ಕಟರ್ (Rotavator cutter) ಬಡಿದು ಗೊಳಸಂಗಿ ಗ್ರಾಮದ ನಿವಾಸಿ ಮೆಹಿಬೂಬ್ ಮನಗೂಳಿ(32) ಮೃತಪಟ್ಟಿದ್ದಾರೆ(Death). ಕೂಡಗಿ ಎನ್​ಟಿಪಿಸಿ(NTPC) ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕಲಬುರಗಿ: ನೀರಾವರಿ ಪಂಪಸೆಟ್​ನಲ್ಲಿನ ತಾಮ್ರ ಕಳ್ಳತನ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಟಾಕಳಿ ಗ್ರಾಮದಲ್ಲಿ ನೀರಾವರಿ ಪಂಪಸೆಟ್​ನಲ್ಲಿನ ತಾಮ್ರ ಕಳ್ಳತನ ಮಾಡಿದ್ದಾರೆ. ಭೀಮಾ ನದಿ ದಡದಲ್ಲಿನ ಪಂಪ್​ಸೆಟ್​ನಲ್ಲಿನ ತಾಮ್ರ ಕಳ್ಳತನ ಮಾಡಿದ್ದಾರೆ. ಹದಿನೈದು  ಪಂಪ್​ಸೆಟ್​ನಲ್ಲಿನ ತಾಮ್ರ ಕಳ್ಳತನವಾಗಿದ್ದು, ಕಳೆದ ಒಂದು ವಾರದಲ್ಲಿ ನೂರಕ್ಕೂ ಹೆಚ್ಚು ಪಂಪ್​ಸೆಟ್​ನಲ್ಲಿನ ತಾಮ್ರ ಕಳ್ಳತನವಾಗಿದೆ. ಅಫಜಲಪುರ, ಜೇವರ್ಗಿ ತಾಲೂಕಿನ ಅನೇಕ ಗ್ರಾಮಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದೆ. ಕಳ್ಳತನದಿಂದ ರೈತರು ಕಂಗಾಲಾಗಿದ್ದಾರೆ. ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಗದಗ: ಕ್ರಷರ್ ಧೂಳಿಗೆ, ಕಲ್ಲು ಗಣಿಗಾರಿಕೆಗೆ ರೈತರ ಬೆಳೆ ನಾಶ

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೊಳೆಇಟಗಿ ಗ್ರಾಮದ ಬಳಿ ಇರುವ ಗಣಿಗಾರಿಕೆಯಿಂದ ರೈತರ ಬೆಳೆ ನಾಶವಾಗಿದೆ. ಅವೈಜ್ಞಾನಿಕ ಬ್ಲಾಸ್ಟಿಂಗ್​ಗೆ ದೊಡ್ಡ ಪ್ರಮಾಣದ ಕಲ್ಲುಗಳು ಬೋರ್ ವೆಲ್​ಗಳು ಬ್ಲಾಸ್ಟಿಂಗ್​ಗೆ ಕುಸಿಯುತ್ತಿವೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಹಶಿಲ್ದಾರ, ಪೊಲೀಸ್, ಗಣಿ ಅಧಿಕಾರಿಗಳ ಗಮನಕ್ಕೆ ತಂದ್ದರು ಯಾವುದೇ ಕ್ರಮ ಕೈಗೊಂಡಿಲ್ಲ. ರೈತರ ನೆರವಿಗೆ ಬಾರದ ಜಿಲ್ಲಾಡಳಿತದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗದಗ-ಹೊನ್ನಾಳಿ ರಾಜ್ಯ ಹೆದ್ದಾರಿ ಕಾಮಗಾರಿ ಗುತ್ತಿಗೆ ಪಡೆದ ಸಧ್ಬವ್ ಕನ್​ಸ್ಟ್ರಕ್ಷನ್ ಕಂಪನಿ ಸದ್ಯ ಆರ್​ಎಸ್​ಎಎಸ್​ ಕಂಪನಿಯಿಂದ ‌ಕಾಮಗಾರಿ ನಡೆಸುತ್ತಿದೆ. ಅವೈಜ್ಞಾನಿಕ ಕಲ್ಲು ಕ್ವಾರಿ ಬ್ಲಾಸ್ಟಿಂಗ್ ನಡೆಯುತ್ತಿದ್ದು, ರೈತರ ಜಮೀನಿನಲ್ಲಿ ಕಲ್ಲು ರಾಶಿ ಹಾಕಲಾಗಿದೆ. ತಲೆ ಮೇಲೆ ಕಲ್ಲು ಹೊತ್ತುನಿಂತು ರೈತರು ರೋಷಾವೇಶ ವ್ಯಕ್ತಪಡಿಸಿದ್ದಾರೆ. ಬ್ಲಾಸ್ಟಿಂಗ್​ಗೆ ಹೆದರಿ ಜಮೀನಿನ ಕಡೆ ಕೂಲಿ ಕಾರ್ಮಿಕರು ಬರುತ್ತಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕುವಂತೆ ಆಗಿದೆ.

ಇದನ್ನೂ ಓದಿ: ಆಂಬ್ಯುಲೆನ್ಸ್ ವಾಹನ ತೊಳೆಯಲು ನೀರಿಗಿಳಿದಿದ್ದ ಯುವಕ ಜಲ ಸಮಾಧಿ – ಟ್ರಾಕ್ಟರ್​ಗೆ ಬೈಕ್​ ಡಿಕ್ಕಿ; ಇಬ್ಬರು ಸವಾರರ ಸಾವು

ಟ್ರಾಕ್ಟರ್​ಗೆ ಸಿಲುಕಿ ಗಾಯಗೊಂಡಿದ್ದ ನಾಗರ ಹಾವು ರಕ್ಷಣೆ: ಮಾನವೀಯತೆ ಮೆರೆದ ಉರಗ ತಜ್ಞ Photos

Published On - 12:05 pm, Fri, 28 January 22

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ