AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ಉಳುಮೆ ಮಾಡುವ ವೇಳೆ ಅವಘಡ; ರೋಟೋವೇಟರ್ ಕಟರ್ ಬಡಿದು ಯುವಕ ಸಾವು

ರೋಟೋವೇಟರ್ ಕಟರ್ ಬಡಿದು ಗೊಳಸಂಗಿ ಗ್ರಾಮದ ನಿವಾಸಿ ಮೆಹಿಬೂಬ್ ಮನಗೂಳಿ(32) ಮೃತಪಟ್ಟಿದ್ದಾರೆ. ಕೂಡಗಿ ಎನ್​ಟಿಪಿಸಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಜಮೀನು ಉಳುಮೆ ಮಾಡುವ ವೇಳೆ ಅವಘಡ; ರೋಟೋವೇಟರ್ ಕಟರ್ ಬಡಿದು ಯುವಕ ಸಾವು
ರೊಟೋವೇಟರ್ ಕಟರ್
TV9 Web
| Edited By: |

Updated on:Jan 28, 2022 | 12:16 PM

Share

ವಿಜಯಪುರ: ಟ್ರ್ಯಾಕ್ಟರ್​ನಿಂದ ರೋಟೋವೇಟರ್ ಮೂಲಕ ಜಮೀನು ಉಳುಮೆ ಮಾಡುವ ವೇಳೆ ಯುವಕ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಡೆದಿದೆ. ರೋಟೋವೇಟರ್ ಕಟರ್ (Rotavator cutter) ಬಡಿದು ಗೊಳಸಂಗಿ ಗ್ರಾಮದ ನಿವಾಸಿ ಮೆಹಿಬೂಬ್ ಮನಗೂಳಿ(32) ಮೃತಪಟ್ಟಿದ್ದಾರೆ(Death). ಕೂಡಗಿ ಎನ್​ಟಿಪಿಸಿ(NTPC) ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕಲಬುರಗಿ: ನೀರಾವರಿ ಪಂಪಸೆಟ್​ನಲ್ಲಿನ ತಾಮ್ರ ಕಳ್ಳತನ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಟಾಕಳಿ ಗ್ರಾಮದಲ್ಲಿ ನೀರಾವರಿ ಪಂಪಸೆಟ್​ನಲ್ಲಿನ ತಾಮ್ರ ಕಳ್ಳತನ ಮಾಡಿದ್ದಾರೆ. ಭೀಮಾ ನದಿ ದಡದಲ್ಲಿನ ಪಂಪ್​ಸೆಟ್​ನಲ್ಲಿನ ತಾಮ್ರ ಕಳ್ಳತನ ಮಾಡಿದ್ದಾರೆ. ಹದಿನೈದು  ಪಂಪ್​ಸೆಟ್​ನಲ್ಲಿನ ತಾಮ್ರ ಕಳ್ಳತನವಾಗಿದ್ದು, ಕಳೆದ ಒಂದು ವಾರದಲ್ಲಿ ನೂರಕ್ಕೂ ಹೆಚ್ಚು ಪಂಪ್​ಸೆಟ್​ನಲ್ಲಿನ ತಾಮ್ರ ಕಳ್ಳತನವಾಗಿದೆ. ಅಫಜಲಪುರ, ಜೇವರ್ಗಿ ತಾಲೂಕಿನ ಅನೇಕ ಗ್ರಾಮಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದೆ. ಕಳ್ಳತನದಿಂದ ರೈತರು ಕಂಗಾಲಾಗಿದ್ದಾರೆ. ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಗದಗ: ಕ್ರಷರ್ ಧೂಳಿಗೆ, ಕಲ್ಲು ಗಣಿಗಾರಿಕೆಗೆ ರೈತರ ಬೆಳೆ ನಾಶ

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೊಳೆಇಟಗಿ ಗ್ರಾಮದ ಬಳಿ ಇರುವ ಗಣಿಗಾರಿಕೆಯಿಂದ ರೈತರ ಬೆಳೆ ನಾಶವಾಗಿದೆ. ಅವೈಜ್ಞಾನಿಕ ಬ್ಲಾಸ್ಟಿಂಗ್​ಗೆ ದೊಡ್ಡ ಪ್ರಮಾಣದ ಕಲ್ಲುಗಳು ಬೋರ್ ವೆಲ್​ಗಳು ಬ್ಲಾಸ್ಟಿಂಗ್​ಗೆ ಕುಸಿಯುತ್ತಿವೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಹಶಿಲ್ದಾರ, ಪೊಲೀಸ್, ಗಣಿ ಅಧಿಕಾರಿಗಳ ಗಮನಕ್ಕೆ ತಂದ್ದರು ಯಾವುದೇ ಕ್ರಮ ಕೈಗೊಂಡಿಲ್ಲ. ರೈತರ ನೆರವಿಗೆ ಬಾರದ ಜಿಲ್ಲಾಡಳಿತದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗದಗ-ಹೊನ್ನಾಳಿ ರಾಜ್ಯ ಹೆದ್ದಾರಿ ಕಾಮಗಾರಿ ಗುತ್ತಿಗೆ ಪಡೆದ ಸಧ್ಬವ್ ಕನ್​ಸ್ಟ್ರಕ್ಷನ್ ಕಂಪನಿ ಸದ್ಯ ಆರ್​ಎಸ್​ಎಎಸ್​ ಕಂಪನಿಯಿಂದ ‌ಕಾಮಗಾರಿ ನಡೆಸುತ್ತಿದೆ. ಅವೈಜ್ಞಾನಿಕ ಕಲ್ಲು ಕ್ವಾರಿ ಬ್ಲಾಸ್ಟಿಂಗ್ ನಡೆಯುತ್ತಿದ್ದು, ರೈತರ ಜಮೀನಿನಲ್ಲಿ ಕಲ್ಲು ರಾಶಿ ಹಾಕಲಾಗಿದೆ. ತಲೆ ಮೇಲೆ ಕಲ್ಲು ಹೊತ್ತುನಿಂತು ರೈತರು ರೋಷಾವೇಶ ವ್ಯಕ್ತಪಡಿಸಿದ್ದಾರೆ. ಬ್ಲಾಸ್ಟಿಂಗ್​ಗೆ ಹೆದರಿ ಜಮೀನಿನ ಕಡೆ ಕೂಲಿ ಕಾರ್ಮಿಕರು ಬರುತ್ತಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕುವಂತೆ ಆಗಿದೆ.

ಇದನ್ನೂ ಓದಿ: ಆಂಬ್ಯುಲೆನ್ಸ್ ವಾಹನ ತೊಳೆಯಲು ನೀರಿಗಿಳಿದಿದ್ದ ಯುವಕ ಜಲ ಸಮಾಧಿ – ಟ್ರಾಕ್ಟರ್​ಗೆ ಬೈಕ್​ ಡಿಕ್ಕಿ; ಇಬ್ಬರು ಸವಾರರ ಸಾವು

ಟ್ರಾಕ್ಟರ್​ಗೆ ಸಿಲುಕಿ ಗಾಯಗೊಂಡಿದ್ದ ನಾಗರ ಹಾವು ರಕ್ಷಣೆ: ಮಾನವೀಯತೆ ಮೆರೆದ ಉರಗ ತಜ್ಞ Photos

Published On - 12:05 pm, Fri, 28 January 22

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು