ಬಿಜೆಪಿಯಲ್ಲಿ ಅಸಮಾಧಾನ; ಲೋಕಸಭಾ ಚುನಾವಣಾ ಹೊತ್ತಿದೆ ದೊಡ್ಡ ಬದಲಾವಣೆ-ಎಂಬಿ ಪಾಟೀಲ್​

ಬಿಜೆಪಿಯಲ್ಲಿ ಅಸಮಾಧಾನ ಹಿನ್ನಲೆ ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕ ವಿಚಾರ ‘ಸಿಎಂ, ಡಿಸಿಎಂ, ಸತೀಶ್, ನನ್ನನ್ನು ಸಾಕಷ್ಟು ನಾಯಕರು ಸಂಪರ್ಕಿಸಿದ್ದಾರೆ. ಕಾದುನೋಡಿ ಲೋಕಸಭಾ ಚುನಾವಣೆ ಹೊತ್ತಿಗೆ ಅಥವಾ ನಂತರ ದೇಶ, ರಾಜ್ಯದಲ್ಲಿ ಬಹಳಷ್ಟು ಬದಲಾವಣೆ ಆಗುತ್ತವೆ ಎಂದು ಸಚಿವ ಎಂಬಿ ಪಾಟೀಲ್​ ಹೇಳಿದ್ದಾರೆ.

ಬಿಜೆಪಿಯಲ್ಲಿ ಅಸಮಾಧಾನ; ಲೋಕಸಭಾ ಚುನಾವಣಾ ಹೊತ್ತಿದೆ ದೊಡ್ಡ ಬದಲಾವಣೆ-ಎಂಬಿ ಪಾಟೀಲ್​
ಎಂಬಿ ಪಾಟೀಲ್​
Edited By: ಕಿರಣ್ ಹನುಮಂತ್​ ಮಾದಾರ್

Updated on: Nov 26, 2023 | 4:13 PM

ವಿಜಯಪುರ, ನ.26: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ(BY Vijayendra) ಅವರ ನೇಮಕ ಬಳಿಕ ಅಸಮಾಧಾನ ವಿಚಾರಕ್ಕೆ ಸಂಬಂಧಪಟ್ಟಂತೆ ‘ಸೋಮಣ್ಣ, ಸಿ.ಟಿ.ರವಿ, ಯತ್ನಾಳ್ ಸೇರಿ ಹಲವರು ಅಸಮಾಧಾನಗೊಂಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಎರಡು ಕಡೆ ವಿ.ಸೋಮಣ್ಣರನ್ನ ನಿಲ್ಲಿಸಿ ಬಲಿಪಶು ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್‌, ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್(MB Patil) ಹೇಳಿದ್ದಾರೆ.

ಬಿಜೆಪಿಯಲ್ಲಿ ಅಸಮಾಧಾನ ಹಿನ್ನಲೆ ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕ ವಿಚಾರ ‘ಸಿಎಂ, ಡಿಸಿಎಂ, ಸತೀಶ್, ನನ್ನನ್ನು ಸಾಕಷ್ಟು ನಾಯಕರು ಸಂಪರ್ಕಿಸಿದ್ದಾರೆ. ಕಾದುನೋಡಿ ಲೋಕಸಭಾ ಚುನಾವಣೆ ಹೊತ್ತಿಗೆ ಅಥವಾ ನಂತರ ದೇಶ, ರಾಜ್ಯದಲ್ಲಿ ಬಹಳಷ್ಟು ಬದಲಾವಣೆ ಆಗುತ್ತವೆ. ಇನ್ನು ಇದೇ ವೇಳೆ ಲಿಂಗಾಯತ, ಒಕ್ಕಲಿಗರಿಂದ ಜಾತಿಗಣತಿ ವರದಿ ಮಂಡನೆಗೆ ವಿರೋಧ ‘ಈ ಬಗ್ಗೆ ಸಿಎಂ ಜೊತೆ ಚರ್ಚಿಸಿದ ಬಳಿಕ ನನ್ನ ಅಧಿಕೃತ ನಿಲುವು ಸ್ಪಷ್ಟಪಡಿಸುತ್ತೇನೆ.ಇನ್ನುಳಿದಂತೆ ಜಾತಿಗಣತಿ ವರದಿ ಮಂಡನೆಯಿಂದ ಜಾತಿ‌ಗಳ ನಡುವೆ ಸಂಘರ್ಷ ವಿಚಾರ ‘ಅದು ಏನೇ ಇದ್ದರೂ ಪಕ್ಷ ಹಾಗೂ ಸರ್ಕಾರದ ಚೌಕಟ್ಟಿನಲ್ಲಿ ಮಾತನಾಡುತ್ತೇವೆ ಎಂದರು.

ಇದನ್ನೂ ಓದಿ:ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟದ ನಡುವೆ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಶಿವರಾಮ್ ಹೆಬ್ಬಾರ್

ಡಿಕೆ ಶಿವಕುಮಾರ್​ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್​ ವಿಚಾರ ‘ ಕಾನೂನಿನ ಪ್ರಕಾರವೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಅಡ್ವೊಕೇಟ್​ ಜನರಲ್ ಸಲಹೆ ಪಡೆದು ಅನುಮತಿ ಹಿಂಪಡೆಯಲಾಗಿದೆ. ಹಿಂದಿನ ಬಿಜೆಪಿ ಸಂಪುಟದಲ್ಲಿ ಈ ಬಗ್ಗೆ ಮೊದಲು ಅನುಮೋದನೆ ಪಡೆದಿತ್ತು. ಸಂಪುಟ ಒಪ್ಪಿಗೆ ಬಳಿಕ ಎಜಿ ಅಭಿಪ್ರಾಯ ಪಡೆದಿತ್ತು ಎಂಬ ಆರೋಪವಿದೆ. ಡಿ.ಕೆ ಶಿವಕುಮಾರ್​​ ವಿರುದ್ಧ ಷಡ್ಯಂತ್ರ ಹಣೆಯಲಾಗಿದೆ ಎಂಬ ಶಂಕೆ ಕೂಡ ಇದೆ. ಹೀಗಾಗಿ ಸಂಪುಟದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯಲಾಗಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:08 pm, Sun, 26 November 23

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us