ವಿಜಯಪುರ: ಹಳ್ಳಗಳ ಒತ್ತುವರಿ ಸಮೀಕ್ಷೆಗೆ ಸೂಚನೆ ನೀಡಿದ ಸಚಿವ ಎಂಬಿ ಪಾಟೀಲ್​​​

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕನಮಡಿ ಗ್ರಾಮದಲ್ಲಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಹಮ್ಮಿಕೊಂಡಿದ್ದ 1.25 ಕೋಟಿ ರೂಪಾಯಿ ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವ ಎಂ ಬಿ ಪಾಟೀಲ್ ‘ತುಬಚಿ-ಬಬಲೇಶ್ವರ ಏತನೀರಾವರಿ ಹೊಲಗಾಲುವೆಗಳ ಕಾಮಗಾರಿ ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂದರು.

ವಿಜಯಪುರ: ಹಳ್ಳಗಳ ಒತ್ತುವರಿ ಸಮೀಕ್ಷೆಗೆ ಸೂಚನೆ ನೀಡಿದ ಸಚಿವ ಎಂಬಿ ಪಾಟೀಲ್​​​
ಸಚಿವ ಎಂ ಬಿ ಪಾಟೀಲ್​
Edited By: ಕಿರಣ್ ಹನುಮಂತ್​ ಮಾದಾರ್

Updated on: Aug 24, 2023 | 7:04 PM

ವಿಜಯಪುರ, ಆ.24: ತುಬಚಿ-ಬಬಲೇಶ್ವರ ಏತನೀರಾವರಿ ಹೊಲಗಾಲುವೆಗಳ ಕಾಮಗಾರಿ ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್​ ಭರವಸೆ ನೀಡಿದ್ದಾರೆ. ವಿಜಯಪುರ (Vijayapura) ಜಿಲ್ಲೆಯ ತಿಕೋಟಾ ತಾಲೂಕಿನ ಕನಮಡಿ ಗ್ರಾಮದಲ್ಲಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಹಮ್ಮಿಕೊಂಡಿದ್ದ 1.25 ಕೋಟಿ ರೂಪಾಯಿ ವೆಚ್ಚದ 3 ಕಿ. ಮೀಟರ್ ರಸ್ತೆ ಸುಧಾರಣೆ ಕಾಮಗಾರಿ ಮತ್ತು 1.50 ಕೋಟಿ ರೂಪಾಯಿ ವೆಚ್ಚದ ಕನಮಡಿ-ತೆಲಸಂಗ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಸಚಿವ ಎಂ ಬಿ ಪಾಟೀಲ್ ಮಾತನಾಡಿದರು.

ನೀರಾವರಿ ಕಾಮಗಾರಿ ಕಾಂಗ್ರೆಸ್ ಕೊಡುಗೆ

ತಿಕೋಟಾ ಹೋಬಳಿ ಕುಡಿಯಲು ನೀರು ಕೊಡಲೂ ಕಷ್ಟಸಾಧ್ಯ ಎಂದು ಕೆಲವರು ಹೇಳಿದ್ದರು. ಆದರೆ, 2013ರಿಂದ18ರವರೆಗೆ ಜಲಸಂಪನ್ಮೂಲ ಸಚಿವನಾಗಿದ್ದಾಗ ಅಸಾಧ್ಯ ಎಂಬುದನ್ನು ಸಾಧ್ಯ ಮಾಡಿ ತೋರಿಸಿದ್ದೇನೆ. ಧರಿದೇವರು, ಸಿದ್ಧೇಶ್ವರ ಸ್ವಾಮಿ, ನಮ್ಮ ತಂದೆ ಮತ್ತು ತಮ್ಮೆಲ್ಲರ ಆಶೀರ್ವಾದದಿಂದ ಇಡೀ ದೇಶದಲ್ಲಿಯೇ ಹೋಬಳಿಯೊಂದಕ್ಕೆ ಅತೀ ಹೆಚ್ಚು ಅಂದರೆ 3600 ಕೋಟಿ ರೂಪಾಯಿ ವೆಚ್ಚದಲ್ಲಿ ನೀರಾವರಿ ಮಾಡಿದ್ದೇನೆ. ಹಾಗೂ ಜಲಸಂಪನ್ಮೂಲ ಸಚಿವನಾಗಿದ್ದಾಗ ಒಂಬತ್ತು ಮುಖ್ಯ ಸ್ಥಾವರ ನಿರ್ಮಿಸಿ 1000 ಕಿಲೊ ಮೀಟರ್ ಮುಖ್ಯ ಕಾಲುವೆ ನಿರ್ಮಾಣ ಮಾಡಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ:Video: ಭೂಮಿಯಿಂದ 80 ಅಡಿಯಷ್ಟು ಆಕಾಶದೆತ್ತರಕ್ಕೆ ಚಿಮ್ಮಿದ ನೀರು

ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ ಎಂಬಿ ಪಾಟೀಲ್​

ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ತುಬಚಿ- ಬಬಲೇಶ್ವರ ಏತನೀರಾವರಿಗೆ ಸಂಬಂಧಿಸಿದಂತೆ ಹೊಲಗಾಲುವೆ ನಿರ್ಮಿಸದೇ ರೈತರಿಗೆ ಅನ್ಯಾಯ ಮಾಡಿದೆ. 40 ಪರ್ಸೆಂಟ್ ಕಮೀಷನ್ ಆಸೆಗಾಗಿ ಪ್ಯಾಕೆಜ್ ಮಾಡಿ, ಕಾಮಗಾರಿ ನನೆಗುದಿಗೆ ಬೀಳುವಂತೆ ಮಾಡಿದೆ. ಈಗ ಮತ್ತೆ ನಮ್ಮ ಸರಕಾರ ಅಧಿಕಾರದಲ್ಲಿದ್ದು, ನಾವು ಪ್ರಾರಂಭಿಸಿರುವ ಈ ಯೋಜನೆಯ ಹೊಲಗಾಲುವೆಗಳ ಕಾಮಗಾರಿ ಅತೀ ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂದು ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ನಮ್ಮ ಅವಧಿಯಲ್ಲಾದ ನೀರಾವರಿ ಯೋಜನೆಗಳಿಂದಾಗಿ ನೆರೆಯ ಮಹಾರಾಷ್ಟ್ರದ ಹಲವಾರು ಗ್ರಾಮಗಳಿಗೂ ಉಪಯೋಗವಾಗಿದೆ. ಅಲ್ಲಿರುವ ಕನ್ನಡಿಗರು ನಮ್ಮ ಉಪಕಾರವನ್ನು ಸ್ಮರಿಸುತ್ತಿದ್ದಾರೆ. ಹಲವಾರು ಜನ ಯುವಕರು ಈಗಲೂ ಬೆಂಗಳೂರಿಗೆ ಬಂದು ಕೃತಜ್ಞತೆ ಸಲ್ಲಿಸುತ್ತಿದ್ದಾರೆ ಎಂದರು.

ಹಳ್ಳಗಳ ಒತ್ತುವರಿ ಸಮೀಕ್ಷೆಗೆ ಸೂಚನೆ

ಇದೇ ವೇಳೆ ‘ಹಳ್ಳಗಳನ್ನು ಕೆಲ ರೈತರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಒತ್ತೂವರಿಯಿಂದಾಗಿ ಜಮೀನುಗಳಿಗೆ ಮತ್ತು ಜಾನುವಾರುಗಳಿಗೆ ಸಮರ್ಪಕವಾಗಿ ನೀರು ಸಿಗುತ್ತಿಲ್ಲ ಎಂದು ಹಲವಾರು ರೈತರು ಅಳಲು ತೋಡಿಕೊಂಡು, ಈ ನಿಟ್ಟಿನಲ್ಲಿ ಪರಿಶೀಲನೆ ಮಾಡಬೇಕು. ಅಲ್ಲದೇ, ಸೂಕ್ತ ಕ್ರಮ ಕೈಗೊಳ್ಳುವಂತೆ ರೈತರು ಸಚಿವರಿಗೆ ಒತ್ತಾಯಿಸಿದರು. ರೈತರ ಮನವಿಗೆ ಸ್ಪಂಧಿಸಿದ ಸಚಿವರು, ‘ತಿಕೋಟಾ ತಹಶೀಲ್ದಾರ್​ ಪ್ರಶಾಂತ್​ ಚನಗೊಂಡ ಅವರಿಗೆ ಹಳ್ಳಗಳ ಒತ್ತುವರಿ ಸಮೀಕ್ಷೆ ನಡೆಸುವಂತೆ ಸೂಚನೆ ನೀಡಿದರು. ಹಳ್ಳಗಳಲ್ಲಿ ನೀರಿದ್ದರೆ ಪ್ರಾಣಿ ಪಕ್ಷಿಗಳೂ ಉಪಕಾರ ಸ್ಮರಿಸುತ್ತವೆ. ನೀವಷ್ಟೇ ಅಲ್ಲ, ನಿಮ್ಮ ಮುಂದಿನ ಪೀಳಿಗೆಯೂ ನೆಮ್ಮದಿಯಿಂದ ಬಾಳುವಂತಾಗಲು ಎಲ್ಲ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಕುಟುಂಬಗಳ ತಲಾದಾಯ ಹೆಚ್ಚಿಸಲು ಶ್ರಮಿಸಿದ್ದೇನೆ. ಅನ್ನದಾತರು ತಾವೆಲ್ಲರೂ ರೈತರ ಜಾತಿ ಎಂಬಂತಾಗಬೇಗು. ಯಾರೂ ಜಾತಿ ಮಾಡುವಂತಾಗಬಾರದು ಎಂದು ಸಚಿವ ಎಂ ಬಿ ಪಾಟೀಲ್​ ಕಿವಿಮಾತು ಹೇಳಿದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us