AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ಬಿಜೆಪಿ ಅಭ್ಯರ್ಥಿ ನಾನೇ, ಆಸ್ತಿ ಏರಿಕೆ ಬಗ್ಗೆಯೂ ಸ್ಪಷ್ಟನೆ ಕೊಟ್ಟ ರಮೇಶ ಜಿಗಜಿಣಗಿ

ಲೋಕಸಭೆ ಚುನಾವಣೆಗೆ ಅಣಿಯಾಗುತ್ತಿರುವ ಬಿಜೆಪಿ ಹೈಕಮಾಂಡ್ ಸೀಟು ಹಂಚಿಕೆ ಬಗ್ಗೆ ಕಸರತ್ತು ನಡೆಯುತ್ತಿದೆ. ಈ ನಡುವೆ ತಾನೇ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೆಂದು ಸಂಸದ ರಮೇಶ್ ಜಿಗಜಿಣಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ, ತಮ್ಮ ಆಸ್ತಿಯಲ್ಲಿ ಭಾರೀ ಏರಿಕೆಯಾಗಿರುವ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ.

ವಿಜಯಪುರ ಬಿಜೆಪಿ ಅಭ್ಯರ್ಥಿ ನಾನೇ, ಆಸ್ತಿ ಏರಿಕೆ ಬಗ್ಗೆಯೂ ಸ್ಪಷ್ಟನೆ ಕೊಟ್ಟ ರಮೇಶ ಜಿಗಜಿಣಗಿ
ರಮೇಶ ಜಿಗಜಿಣಗಿ
ಅಶೋಕ ಯಡಳ್ಳಿ, ವಿಜಯಪುರ
| Edited By: Rakesh Nayak Manchi|

Updated on: Feb 26, 2024 | 4:29 PM

Share

ವಿಜಯಪುರ, ಫೆ.26: ಲೋಕಸಭೆ ಚುನಾವಣೆಗೆ (Lok Sabha Election 2024) ಅಣಿಯಾಗುತ್ತಿರುವ ಬಿಜೆಪಿ (BJP) ಹೈಕಮಾಂಡ್ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ರಣತಂತ್ರಗಳನ್ನು ರೂಪಿಸುತ್ತಿದೆ. ಇದರ ಜೊತೆಗೆ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸುತ್ತಿದೆ. ಕರ್ನಾಟಕದಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆ ಸೀಟು ಹಂಚಿಕೆ ಮಾತುಕತೆ ನಡೆಯುತ್ತಿದೆ. ಅದರಂತೆ, ಈ ಬಾರಿ ಬಿಜೆಪಿ ವಿಜಯಪುರ (Vijayapur) ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡುತ್ತದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕ್ಷೇತ್ರದ ಹಾಲಿ ಸಂಸದ ರಮೇಶ್ ಜಿಗಜಿಣಗಿ (Ramesh Jigajinagi) ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾನೇ ಎಂದು ಘೋಷಿಸಿದ್ದಾರೆ.

ವಿಜಯಪುರ ಕೇಂದ್ರ ರೆಲ್ವೆ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಂದಾಜು ಒಂದು ಲಕ್ಷ ಕೋಟಿ ಅನುದಾನ ವಿಜಯಪುರ ಕ್ಷೇತ್ರಕ್ಕೆ ತಂದಿದ್ದೇನೆ. ಎಸ್​ಸಿ ಮೀಸಲು ವಿಜಯಪುರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾನೇ. ಈ ಬಗ್ಗೆ ಪಕ್ಷದಿಂದ ಸೂಚನೆ ಬಂದಿದೆ. ಮೈತ್ರಿ ಹಿನ್ನೆಲೆ ವಿಜಯಪುರವನ್ನ ಜೆಡಿಎಸ್​​ನವರೂ ಕೇಳುತ್ತಾರೆ. ಆದರೆ, ನಮ್ಮವರು ಯಾವ ಕಾಲಕ್ಕೂ ಕ್ಷೇತ್ರ ಬಿಟ್ಟುಕೊಡುವುದಿಲ್ಲ. ನನಗೆ ಈ ಭಾಗದ ಜನ ವೋಟ್ ಹಾಕುತ್ತಾರೆ ಅನ್ನೋ ವಿಶ್ವಾಸವಿದೆ ಎಂದರು. ಅಲ್ಲದೆ, ಒಂದು ವೇಳೆ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟರೆ ಪ್ರಚಾರ ಮಾಡುತ್ತೇನೆ ಎಂದರು.

ರಮೇಶ ಜಿಗಜಿಣಗಿ ಆಸ್ತಿಯಲ್ಲಿ ಬಾರೀ ಏರಿಕೆ

ರಮೇಶ್ ಜಿಗಜಿಣಗಿ ಆಸ್ತಿಯಲ್ಲಿ ಬಾರೀ ಏರಿಕೆಯಾಗಿದೆ. 2004 ರಲ್ಲಿ 54.80 ಲಕ್ಷ ರೂಪಾಯಿ ಇದ್ದ ಆಸ್ತಿ 2019 ರ ವೇಳೆಗೆ 50.41 ಕೋಟಿ ರೂ.ಗೆ ಏರಿಕೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಮೇಶ್ ಜಿಗಜಿಣಗಿ, ಮಾಧ್ಯಮಗಳಲ್ಲಿ ವರದಿಯಾಗಿದ್ದಕ್ಕಿಂತ ಆಸ್ತಿ ಹೆಚ್ಚಿದೆ. ನೀವು ಮಾಧ್ಯಮದವರು ದಡ್ಡರು, ಆಸ್ತಿ ವಿವರ ಬಹಳ ಕಡಿಮೆ ಬರೆದಿದ್ದೀರಿ. ನಿಮ್ಮ ಮನೆ ಮೂರು ಸಾವಿರಕ್ಕೆ ತಗೊಂಡಿದ್ದೀರಿ, ಈಗ ಅದು ಒಂದೂವರೆ ಕೋಟಿ ಆಗಿದೆ. ಹೀಗೆ ನನ್ನ ಆಸ್ತಿಯಲ್ಲಿ ಹೆಚ್ಚಳವಾಗಿದೆ ಎಂದರು.

ಇದನ್ನೂ ಓದಿ: ಶೋಭಾ ಕರಂದ್ಲಾಜೆ ಬೆನ್ನಿಗೆ ನಿಂತ ಬಿಎಸ್​ವೈ: ಟಿಕೆಟ್​ ಕನ್ಫರ್ಮ್, ಸಿಟಿ ರವಿಗೆ ಶಾಕ್

ಅಲ್ಲದೆ, ಇವರ ಅಜ್ಜ ಕೊಟ್ಟಿದ್ದಾನಾ? ಎಲ್ಲಿಯಾದರೂ ರೋಡ್ ಕೆದರಿ ನಾನು ಆಸ್ತಿ ಮಾಡಿದ್ದೇನಾ? ಎಲ್ಲಿಯಾದರೂ ಲಂಚ ಪಡೆದಿದ್ದೇನಾ? ನನ್ನ ಹಾಗೂ ಮಕ್ಕಳ ಸ್ವಂತ ದುಡಿಮೆಯಿಂದ ಗಳಿಸಿದ ಆಸ್ತಿ ಇದು. ಯಾರಪ್ಪನದು ಇದರಲ್ಲಿ ಹಂಚಿಕೆ ಇಲ್ಲ. ನಾನು ಹೇಗೆ ಇದ್ದೇನೆ ಅಂದರೆ ನಗರದ ಗಾಂಧಿ ಚೌಕ್​ನಲ್ಲಿ ಅಜ್ಜ ಹೇಗೆ ಅಂಗಿ ಕಳೆದು ಕುಳಿತಿದ್ದಾನೋ ಹಾಗೆ ನಾನು ಇದ್ದೇನೆ. ಬೇಕಾದವರು ಬರಲಿ ಎಂದು ವಿರೋಧಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟರು.

ನನ್ನ 150 ಎಕರೆ ಜಮೀನು ನಗರ ಪ್ರದೇಶ ವ್ಯಾಪ್ತಿಯಲ್ಲಿ ಬಂದಿದೆ. ನಾನು ಅದನ್ನು ತೆಗೆದುಕೊಂಡ ಸಮಯದಲ್ಲಿದ್ದ ದರ ಈಗ ಭಾರೀ ಏರಿಕೆಯಾಗಿದೆ. ಆದ್ದರಿಂದ ನನ್ನ ಆಸ್ತಿ ಬೆಲೆಯೂ ಸಹ ಹೆಚ್ಚಾಗಿದೆ ಎಂದು ಸ್ಪಷ್ಟನೆ ನೀಡಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ