AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ಬಿಜೆಪಿ ಅಭ್ಯರ್ಥಿ ನಾನೇ, ಆಸ್ತಿ ಏರಿಕೆ ಬಗ್ಗೆಯೂ ಸ್ಪಷ್ಟನೆ ಕೊಟ್ಟ ರಮೇಶ ಜಿಗಜಿಣಗಿ

ಲೋಕಸಭೆ ಚುನಾವಣೆಗೆ ಅಣಿಯಾಗುತ್ತಿರುವ ಬಿಜೆಪಿ ಹೈಕಮಾಂಡ್ ಸೀಟು ಹಂಚಿಕೆ ಬಗ್ಗೆ ಕಸರತ್ತು ನಡೆಯುತ್ತಿದೆ. ಈ ನಡುವೆ ತಾನೇ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೆಂದು ಸಂಸದ ರಮೇಶ್ ಜಿಗಜಿಣಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ, ತಮ್ಮ ಆಸ್ತಿಯಲ್ಲಿ ಭಾರೀ ಏರಿಕೆಯಾಗಿರುವ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ.

ವಿಜಯಪುರ ಬಿಜೆಪಿ ಅಭ್ಯರ್ಥಿ ನಾನೇ, ಆಸ್ತಿ ಏರಿಕೆ ಬಗ್ಗೆಯೂ ಸ್ಪಷ್ಟನೆ ಕೊಟ್ಟ ರಮೇಶ ಜಿಗಜಿಣಗಿ
ರಮೇಶ ಜಿಗಜಿಣಗಿ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: Rakesh Nayak Manchi

Updated on: Feb 26, 2024 | 4:29 PM

ವಿಜಯಪುರ, ಫೆ.26: ಲೋಕಸಭೆ ಚುನಾವಣೆಗೆ (Lok Sabha Election 2024) ಅಣಿಯಾಗುತ್ತಿರುವ ಬಿಜೆಪಿ (BJP) ಹೈಕಮಾಂಡ್ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ರಣತಂತ್ರಗಳನ್ನು ರೂಪಿಸುತ್ತಿದೆ. ಇದರ ಜೊತೆಗೆ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸುತ್ತಿದೆ. ಕರ್ನಾಟಕದಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆ ಸೀಟು ಹಂಚಿಕೆ ಮಾತುಕತೆ ನಡೆಯುತ್ತಿದೆ. ಅದರಂತೆ, ಈ ಬಾರಿ ಬಿಜೆಪಿ ವಿಜಯಪುರ (Vijayapur) ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡುತ್ತದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕ್ಷೇತ್ರದ ಹಾಲಿ ಸಂಸದ ರಮೇಶ್ ಜಿಗಜಿಣಗಿ (Ramesh Jigajinagi) ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾನೇ ಎಂದು ಘೋಷಿಸಿದ್ದಾರೆ.

ವಿಜಯಪುರ ಕೇಂದ್ರ ರೆಲ್ವೆ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಂದಾಜು ಒಂದು ಲಕ್ಷ ಕೋಟಿ ಅನುದಾನ ವಿಜಯಪುರ ಕ್ಷೇತ್ರಕ್ಕೆ ತಂದಿದ್ದೇನೆ. ಎಸ್​ಸಿ ಮೀಸಲು ವಿಜಯಪುರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾನೇ. ಈ ಬಗ್ಗೆ ಪಕ್ಷದಿಂದ ಸೂಚನೆ ಬಂದಿದೆ. ಮೈತ್ರಿ ಹಿನ್ನೆಲೆ ವಿಜಯಪುರವನ್ನ ಜೆಡಿಎಸ್​​ನವರೂ ಕೇಳುತ್ತಾರೆ. ಆದರೆ, ನಮ್ಮವರು ಯಾವ ಕಾಲಕ್ಕೂ ಕ್ಷೇತ್ರ ಬಿಟ್ಟುಕೊಡುವುದಿಲ್ಲ. ನನಗೆ ಈ ಭಾಗದ ಜನ ವೋಟ್ ಹಾಕುತ್ತಾರೆ ಅನ್ನೋ ವಿಶ್ವಾಸವಿದೆ ಎಂದರು. ಅಲ್ಲದೆ, ಒಂದು ವೇಳೆ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟರೆ ಪ್ರಚಾರ ಮಾಡುತ್ತೇನೆ ಎಂದರು.

ರಮೇಶ ಜಿಗಜಿಣಗಿ ಆಸ್ತಿಯಲ್ಲಿ ಬಾರೀ ಏರಿಕೆ

ರಮೇಶ್ ಜಿಗಜಿಣಗಿ ಆಸ್ತಿಯಲ್ಲಿ ಬಾರೀ ಏರಿಕೆಯಾಗಿದೆ. 2004 ರಲ್ಲಿ 54.80 ಲಕ್ಷ ರೂಪಾಯಿ ಇದ್ದ ಆಸ್ತಿ 2019 ರ ವೇಳೆಗೆ 50.41 ಕೋಟಿ ರೂ.ಗೆ ಏರಿಕೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಮೇಶ್ ಜಿಗಜಿಣಗಿ, ಮಾಧ್ಯಮಗಳಲ್ಲಿ ವರದಿಯಾಗಿದ್ದಕ್ಕಿಂತ ಆಸ್ತಿ ಹೆಚ್ಚಿದೆ. ನೀವು ಮಾಧ್ಯಮದವರು ದಡ್ಡರು, ಆಸ್ತಿ ವಿವರ ಬಹಳ ಕಡಿಮೆ ಬರೆದಿದ್ದೀರಿ. ನಿಮ್ಮ ಮನೆ ಮೂರು ಸಾವಿರಕ್ಕೆ ತಗೊಂಡಿದ್ದೀರಿ, ಈಗ ಅದು ಒಂದೂವರೆ ಕೋಟಿ ಆಗಿದೆ. ಹೀಗೆ ನನ್ನ ಆಸ್ತಿಯಲ್ಲಿ ಹೆಚ್ಚಳವಾಗಿದೆ ಎಂದರು.

ಇದನ್ನೂ ಓದಿ: ಶೋಭಾ ಕರಂದ್ಲಾಜೆ ಬೆನ್ನಿಗೆ ನಿಂತ ಬಿಎಸ್​ವೈ: ಟಿಕೆಟ್​ ಕನ್ಫರ್ಮ್, ಸಿಟಿ ರವಿಗೆ ಶಾಕ್

ಅಲ್ಲದೆ, ಇವರ ಅಜ್ಜ ಕೊಟ್ಟಿದ್ದಾನಾ? ಎಲ್ಲಿಯಾದರೂ ರೋಡ್ ಕೆದರಿ ನಾನು ಆಸ್ತಿ ಮಾಡಿದ್ದೇನಾ? ಎಲ್ಲಿಯಾದರೂ ಲಂಚ ಪಡೆದಿದ್ದೇನಾ? ನನ್ನ ಹಾಗೂ ಮಕ್ಕಳ ಸ್ವಂತ ದುಡಿಮೆಯಿಂದ ಗಳಿಸಿದ ಆಸ್ತಿ ಇದು. ಯಾರಪ್ಪನದು ಇದರಲ್ಲಿ ಹಂಚಿಕೆ ಇಲ್ಲ. ನಾನು ಹೇಗೆ ಇದ್ದೇನೆ ಅಂದರೆ ನಗರದ ಗಾಂಧಿ ಚೌಕ್​ನಲ್ಲಿ ಅಜ್ಜ ಹೇಗೆ ಅಂಗಿ ಕಳೆದು ಕುಳಿತಿದ್ದಾನೋ ಹಾಗೆ ನಾನು ಇದ್ದೇನೆ. ಬೇಕಾದವರು ಬರಲಿ ಎಂದು ವಿರೋಧಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟರು.

ನನ್ನ 150 ಎಕರೆ ಜಮೀನು ನಗರ ಪ್ರದೇಶ ವ್ಯಾಪ್ತಿಯಲ್ಲಿ ಬಂದಿದೆ. ನಾನು ಅದನ್ನು ತೆಗೆದುಕೊಂಡ ಸಮಯದಲ್ಲಿದ್ದ ದರ ಈಗ ಭಾರೀ ಏರಿಕೆಯಾಗಿದೆ. ಆದ್ದರಿಂದ ನನ್ನ ಆಸ್ತಿ ಬೆಲೆಯೂ ಸಹ ಹೆಚ್ಚಾಗಿದೆ ಎಂದು ಸ್ಪಷ್ಟನೆ ನೀಡಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ಸಿನಿಮಾಕ್ಕಾಗಿ ಸಾಕಷ್ಟು ಕಸರತ್ತು ಮಾಡಿರುವ ಅಜಯ್ ರಾವ್
ಹೊಸ ಸಿನಿಮಾಕ್ಕಾಗಿ ಸಾಕಷ್ಟು ಕಸರತ್ತು ಮಾಡಿರುವ ಅಜಯ್ ರಾವ್
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ