AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ಬಿಜೆಪಿ ಅಭ್ಯರ್ಥಿ ನಾನೇ, ಆಸ್ತಿ ಏರಿಕೆ ಬಗ್ಗೆಯೂ ಸ್ಪಷ್ಟನೆ ಕೊಟ್ಟ ರಮೇಶ ಜಿಗಜಿಣಗಿ

ಲೋಕಸಭೆ ಚುನಾವಣೆಗೆ ಅಣಿಯಾಗುತ್ತಿರುವ ಬಿಜೆಪಿ ಹೈಕಮಾಂಡ್ ಸೀಟು ಹಂಚಿಕೆ ಬಗ್ಗೆ ಕಸರತ್ತು ನಡೆಯುತ್ತಿದೆ. ಈ ನಡುವೆ ತಾನೇ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೆಂದು ಸಂಸದ ರಮೇಶ್ ಜಿಗಜಿಣಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ, ತಮ್ಮ ಆಸ್ತಿಯಲ್ಲಿ ಭಾರೀ ಏರಿಕೆಯಾಗಿರುವ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ.

ವಿಜಯಪುರ ಬಿಜೆಪಿ ಅಭ್ಯರ್ಥಿ ನಾನೇ, ಆಸ್ತಿ ಏರಿಕೆ ಬಗ್ಗೆಯೂ ಸ್ಪಷ್ಟನೆ ಕೊಟ್ಟ ರಮೇಶ ಜಿಗಜಿಣಗಿ
ರಮೇಶ ಜಿಗಜಿಣಗಿ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Feb 26, 2024 | 4:29 PM

Share

ವಿಜಯಪುರ, ಫೆ.26: ಲೋಕಸಭೆ ಚುನಾವಣೆಗೆ (Lok Sabha Election 2024) ಅಣಿಯಾಗುತ್ತಿರುವ ಬಿಜೆಪಿ (BJP) ಹೈಕಮಾಂಡ್ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ರಣತಂತ್ರಗಳನ್ನು ರೂಪಿಸುತ್ತಿದೆ. ಇದರ ಜೊತೆಗೆ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸುತ್ತಿದೆ. ಕರ್ನಾಟಕದಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆ ಸೀಟು ಹಂಚಿಕೆ ಮಾತುಕತೆ ನಡೆಯುತ್ತಿದೆ. ಅದರಂತೆ, ಈ ಬಾರಿ ಬಿಜೆಪಿ ವಿಜಯಪುರ (Vijayapur) ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡುತ್ತದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕ್ಷೇತ್ರದ ಹಾಲಿ ಸಂಸದ ರಮೇಶ್ ಜಿಗಜಿಣಗಿ (Ramesh Jigajinagi) ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾನೇ ಎಂದು ಘೋಷಿಸಿದ್ದಾರೆ.

ವಿಜಯಪುರ ಕೇಂದ್ರ ರೆಲ್ವೆ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಂದಾಜು ಒಂದು ಲಕ್ಷ ಕೋಟಿ ಅನುದಾನ ವಿಜಯಪುರ ಕ್ಷೇತ್ರಕ್ಕೆ ತಂದಿದ್ದೇನೆ. ಎಸ್​ಸಿ ಮೀಸಲು ವಿಜಯಪುರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾನೇ. ಈ ಬಗ್ಗೆ ಪಕ್ಷದಿಂದ ಸೂಚನೆ ಬಂದಿದೆ. ಮೈತ್ರಿ ಹಿನ್ನೆಲೆ ವಿಜಯಪುರವನ್ನ ಜೆಡಿಎಸ್​​ನವರೂ ಕೇಳುತ್ತಾರೆ. ಆದರೆ, ನಮ್ಮವರು ಯಾವ ಕಾಲಕ್ಕೂ ಕ್ಷೇತ್ರ ಬಿಟ್ಟುಕೊಡುವುದಿಲ್ಲ. ನನಗೆ ಈ ಭಾಗದ ಜನ ವೋಟ್ ಹಾಕುತ್ತಾರೆ ಅನ್ನೋ ವಿಶ್ವಾಸವಿದೆ ಎಂದರು. ಅಲ್ಲದೆ, ಒಂದು ವೇಳೆ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟರೆ ಪ್ರಚಾರ ಮಾಡುತ್ತೇನೆ ಎಂದರು.

ರಮೇಶ ಜಿಗಜಿಣಗಿ ಆಸ್ತಿಯಲ್ಲಿ ಬಾರೀ ಏರಿಕೆ

ರಮೇಶ್ ಜಿಗಜಿಣಗಿ ಆಸ್ತಿಯಲ್ಲಿ ಬಾರೀ ಏರಿಕೆಯಾಗಿದೆ. 2004 ರಲ್ಲಿ 54.80 ಲಕ್ಷ ರೂಪಾಯಿ ಇದ್ದ ಆಸ್ತಿ 2019 ರ ವೇಳೆಗೆ 50.41 ಕೋಟಿ ರೂ.ಗೆ ಏರಿಕೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಮೇಶ್ ಜಿಗಜಿಣಗಿ, ಮಾಧ್ಯಮಗಳಲ್ಲಿ ವರದಿಯಾಗಿದ್ದಕ್ಕಿಂತ ಆಸ್ತಿ ಹೆಚ್ಚಿದೆ. ನೀವು ಮಾಧ್ಯಮದವರು ದಡ್ಡರು, ಆಸ್ತಿ ವಿವರ ಬಹಳ ಕಡಿಮೆ ಬರೆದಿದ್ದೀರಿ. ನಿಮ್ಮ ಮನೆ ಮೂರು ಸಾವಿರಕ್ಕೆ ತಗೊಂಡಿದ್ದೀರಿ, ಈಗ ಅದು ಒಂದೂವರೆ ಕೋಟಿ ಆಗಿದೆ. ಹೀಗೆ ನನ್ನ ಆಸ್ತಿಯಲ್ಲಿ ಹೆಚ್ಚಳವಾಗಿದೆ ಎಂದರು.

ಇದನ್ನೂ ಓದಿ: ಶೋಭಾ ಕರಂದ್ಲಾಜೆ ಬೆನ್ನಿಗೆ ನಿಂತ ಬಿಎಸ್​ವೈ: ಟಿಕೆಟ್​ ಕನ್ಫರ್ಮ್, ಸಿಟಿ ರವಿಗೆ ಶಾಕ್

ಅಲ್ಲದೆ, ಇವರ ಅಜ್ಜ ಕೊಟ್ಟಿದ್ದಾನಾ? ಎಲ್ಲಿಯಾದರೂ ರೋಡ್ ಕೆದರಿ ನಾನು ಆಸ್ತಿ ಮಾಡಿದ್ದೇನಾ? ಎಲ್ಲಿಯಾದರೂ ಲಂಚ ಪಡೆದಿದ್ದೇನಾ? ನನ್ನ ಹಾಗೂ ಮಕ್ಕಳ ಸ್ವಂತ ದುಡಿಮೆಯಿಂದ ಗಳಿಸಿದ ಆಸ್ತಿ ಇದು. ಯಾರಪ್ಪನದು ಇದರಲ್ಲಿ ಹಂಚಿಕೆ ಇಲ್ಲ. ನಾನು ಹೇಗೆ ಇದ್ದೇನೆ ಅಂದರೆ ನಗರದ ಗಾಂಧಿ ಚೌಕ್​ನಲ್ಲಿ ಅಜ್ಜ ಹೇಗೆ ಅಂಗಿ ಕಳೆದು ಕುಳಿತಿದ್ದಾನೋ ಹಾಗೆ ನಾನು ಇದ್ದೇನೆ. ಬೇಕಾದವರು ಬರಲಿ ಎಂದು ವಿರೋಧಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟರು.

ನನ್ನ 150 ಎಕರೆ ಜಮೀನು ನಗರ ಪ್ರದೇಶ ವ್ಯಾಪ್ತಿಯಲ್ಲಿ ಬಂದಿದೆ. ನಾನು ಅದನ್ನು ತೆಗೆದುಕೊಂಡ ಸಮಯದಲ್ಲಿದ್ದ ದರ ಈಗ ಭಾರೀ ಏರಿಕೆಯಾಗಿದೆ. ಆದ್ದರಿಂದ ನನ್ನ ಆಸ್ತಿ ಬೆಲೆಯೂ ಸಹ ಹೆಚ್ಚಾಗಿದೆ ಎಂದು ಸ್ಪಷ್ಟನೆ ನೀಡಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?