AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ಬಿಜೆಪಿ ಅಭ್ಯರ್ಥಿ ನಾನೇ, ಆಸ್ತಿ ಏರಿಕೆ ಬಗ್ಗೆಯೂ ಸ್ಪಷ್ಟನೆ ಕೊಟ್ಟ ರಮೇಶ ಜಿಗಜಿಣಗಿ

ಲೋಕಸಭೆ ಚುನಾವಣೆಗೆ ಅಣಿಯಾಗುತ್ತಿರುವ ಬಿಜೆಪಿ ಹೈಕಮಾಂಡ್ ಸೀಟು ಹಂಚಿಕೆ ಬಗ್ಗೆ ಕಸರತ್ತು ನಡೆಯುತ್ತಿದೆ. ಈ ನಡುವೆ ತಾನೇ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೆಂದು ಸಂಸದ ರಮೇಶ್ ಜಿಗಜಿಣಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ, ತಮ್ಮ ಆಸ್ತಿಯಲ್ಲಿ ಭಾರೀ ಏರಿಕೆಯಾಗಿರುವ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ.

ವಿಜಯಪುರ ಬಿಜೆಪಿ ಅಭ್ಯರ್ಥಿ ನಾನೇ, ಆಸ್ತಿ ಏರಿಕೆ ಬಗ್ಗೆಯೂ ಸ್ಪಷ್ಟನೆ ಕೊಟ್ಟ ರಮೇಶ ಜಿಗಜಿಣಗಿ
ರಮೇಶ ಜಿಗಜಿಣಗಿ
ಅಶೋಕ ಯಡಳ್ಳಿ, ವಿಜಯಪುರ
| Edited By: Rakesh Nayak Manchi|

Updated on: Feb 26, 2024 | 4:29 PM

Share

ವಿಜಯಪುರ, ಫೆ.26: ಲೋಕಸಭೆ ಚುನಾವಣೆಗೆ (Lok Sabha Election 2024) ಅಣಿಯಾಗುತ್ತಿರುವ ಬಿಜೆಪಿ (BJP) ಹೈಕಮಾಂಡ್ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ರಣತಂತ್ರಗಳನ್ನು ರೂಪಿಸುತ್ತಿದೆ. ಇದರ ಜೊತೆಗೆ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸುತ್ತಿದೆ. ಕರ್ನಾಟಕದಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆ ಸೀಟು ಹಂಚಿಕೆ ಮಾತುಕತೆ ನಡೆಯುತ್ತಿದೆ. ಅದರಂತೆ, ಈ ಬಾರಿ ಬಿಜೆಪಿ ವಿಜಯಪುರ (Vijayapur) ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡುತ್ತದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕ್ಷೇತ್ರದ ಹಾಲಿ ಸಂಸದ ರಮೇಶ್ ಜಿಗಜಿಣಗಿ (Ramesh Jigajinagi) ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾನೇ ಎಂದು ಘೋಷಿಸಿದ್ದಾರೆ.

ವಿಜಯಪುರ ಕೇಂದ್ರ ರೆಲ್ವೆ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಂದಾಜು ಒಂದು ಲಕ್ಷ ಕೋಟಿ ಅನುದಾನ ವಿಜಯಪುರ ಕ್ಷೇತ್ರಕ್ಕೆ ತಂದಿದ್ದೇನೆ. ಎಸ್​ಸಿ ಮೀಸಲು ವಿಜಯಪುರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾನೇ. ಈ ಬಗ್ಗೆ ಪಕ್ಷದಿಂದ ಸೂಚನೆ ಬಂದಿದೆ. ಮೈತ್ರಿ ಹಿನ್ನೆಲೆ ವಿಜಯಪುರವನ್ನ ಜೆಡಿಎಸ್​​ನವರೂ ಕೇಳುತ್ತಾರೆ. ಆದರೆ, ನಮ್ಮವರು ಯಾವ ಕಾಲಕ್ಕೂ ಕ್ಷೇತ್ರ ಬಿಟ್ಟುಕೊಡುವುದಿಲ್ಲ. ನನಗೆ ಈ ಭಾಗದ ಜನ ವೋಟ್ ಹಾಕುತ್ತಾರೆ ಅನ್ನೋ ವಿಶ್ವಾಸವಿದೆ ಎಂದರು. ಅಲ್ಲದೆ, ಒಂದು ವೇಳೆ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟರೆ ಪ್ರಚಾರ ಮಾಡುತ್ತೇನೆ ಎಂದರು.

ರಮೇಶ ಜಿಗಜಿಣಗಿ ಆಸ್ತಿಯಲ್ಲಿ ಬಾರೀ ಏರಿಕೆ

ರಮೇಶ್ ಜಿಗಜಿಣಗಿ ಆಸ್ತಿಯಲ್ಲಿ ಬಾರೀ ಏರಿಕೆಯಾಗಿದೆ. 2004 ರಲ್ಲಿ 54.80 ಲಕ್ಷ ರೂಪಾಯಿ ಇದ್ದ ಆಸ್ತಿ 2019 ರ ವೇಳೆಗೆ 50.41 ಕೋಟಿ ರೂ.ಗೆ ಏರಿಕೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಮೇಶ್ ಜಿಗಜಿಣಗಿ, ಮಾಧ್ಯಮಗಳಲ್ಲಿ ವರದಿಯಾಗಿದ್ದಕ್ಕಿಂತ ಆಸ್ತಿ ಹೆಚ್ಚಿದೆ. ನೀವು ಮಾಧ್ಯಮದವರು ದಡ್ಡರು, ಆಸ್ತಿ ವಿವರ ಬಹಳ ಕಡಿಮೆ ಬರೆದಿದ್ದೀರಿ. ನಿಮ್ಮ ಮನೆ ಮೂರು ಸಾವಿರಕ್ಕೆ ತಗೊಂಡಿದ್ದೀರಿ, ಈಗ ಅದು ಒಂದೂವರೆ ಕೋಟಿ ಆಗಿದೆ. ಹೀಗೆ ನನ್ನ ಆಸ್ತಿಯಲ್ಲಿ ಹೆಚ್ಚಳವಾಗಿದೆ ಎಂದರು.

ಇದನ್ನೂ ಓದಿ: ಶೋಭಾ ಕರಂದ್ಲಾಜೆ ಬೆನ್ನಿಗೆ ನಿಂತ ಬಿಎಸ್​ವೈ: ಟಿಕೆಟ್​ ಕನ್ಫರ್ಮ್, ಸಿಟಿ ರವಿಗೆ ಶಾಕ್

ಅಲ್ಲದೆ, ಇವರ ಅಜ್ಜ ಕೊಟ್ಟಿದ್ದಾನಾ? ಎಲ್ಲಿಯಾದರೂ ರೋಡ್ ಕೆದರಿ ನಾನು ಆಸ್ತಿ ಮಾಡಿದ್ದೇನಾ? ಎಲ್ಲಿಯಾದರೂ ಲಂಚ ಪಡೆದಿದ್ದೇನಾ? ನನ್ನ ಹಾಗೂ ಮಕ್ಕಳ ಸ್ವಂತ ದುಡಿಮೆಯಿಂದ ಗಳಿಸಿದ ಆಸ್ತಿ ಇದು. ಯಾರಪ್ಪನದು ಇದರಲ್ಲಿ ಹಂಚಿಕೆ ಇಲ್ಲ. ನಾನು ಹೇಗೆ ಇದ್ದೇನೆ ಅಂದರೆ ನಗರದ ಗಾಂಧಿ ಚೌಕ್​ನಲ್ಲಿ ಅಜ್ಜ ಹೇಗೆ ಅಂಗಿ ಕಳೆದು ಕುಳಿತಿದ್ದಾನೋ ಹಾಗೆ ನಾನು ಇದ್ದೇನೆ. ಬೇಕಾದವರು ಬರಲಿ ಎಂದು ವಿರೋಧಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟರು.

ನನ್ನ 150 ಎಕರೆ ಜಮೀನು ನಗರ ಪ್ರದೇಶ ವ್ಯಾಪ್ತಿಯಲ್ಲಿ ಬಂದಿದೆ. ನಾನು ಅದನ್ನು ತೆಗೆದುಕೊಂಡ ಸಮಯದಲ್ಲಿದ್ದ ದರ ಈಗ ಭಾರೀ ಏರಿಕೆಯಾಗಿದೆ. ಆದ್ದರಿಂದ ನನ್ನ ಆಸ್ತಿ ಬೆಲೆಯೂ ಸಹ ಹೆಚ್ಚಾಗಿದೆ ಎಂದು ಸ್ಪಷ್ಟನೆ ನೀಡಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು