AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮು ಸೌಹಾರ್ದ: ಅನಾಥೆಯನ್ನು ಮಗಳಂತೆ ಪೋಷಿಸಿ ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಮಾಡಿಕೊಟ್ಟ ಮುಸ್ಲಿಂ ವ್ಯಕ್ತಿ

ಮೆಹಬೂಬ್ ಮಸಳಿ ತನ್ನ ಸಾಕು ಮಗಳಿಗೆ ಹಿಂದೂ ಸಂಪ್ರದಾಯದಂತೆ ವಿವಾಹ ಮಾಡಿದ್ದು, ವಿಜಯಪುರ ಜಿಲ್ಲೆ ಆಲಮೇಲ‌ ಪಟ್ಟಣ ಈ ಘಟನೆಗೆ ಸಾಕ್ಷಿಯಾಗಿದೆ.

ಕೋಮು ಸೌಹಾರ್ದ: ಅನಾಥೆಯನ್ನು ಮಗಳಂತೆ ಪೋಷಿಸಿ ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಮಾಡಿಕೊಟ್ಟ ಮುಸ್ಲಿಂ ವ್ಯಕ್ತಿ
ಹಿಂದೂ - ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಮದುವೆ
Follow us
TV9 Web
| Updated By: Skanda

Updated on: Jul 31, 2021 | 10:06 AM

ವಿಜಯಪುರ: ತಂದೆ, ತಾಯಿ, ಅಜ್ಜಿ ಎಲ್ಲರನ್ನೂ ಕಳೆದುಕೊಂಡು ಅನಾಥಳಾಗಿದ್ದ ಹಿಂದೂ ಹುಡುಗಿಯೊಬ್ಬಳನ್ನು (Hindu) ಮಗಳಂತೆಯೇ ಸಾಕಿದ ಮುಸ್ಲಿಂ (Muslim) ವ್ಯಕ್ತಿ ಇದೀಗ ಆಕೆಗೆ ಹಿಂದೂ ಸಂಪ್ರದಾಯದಂತೆಯೇ ಮದುವೆ (Marriage) ಮಾಡಿಸಿಕೊಟ್ಟು ಕೋಮು ಸೌಹಾರ್ದ ಮೆರೆದ ಘಟನೆ ವಿಜಯಪುರದಲ್ಲಿ ನಡೆದಿದೆ. ಕಳೆದ 13 ವರ್ಷಗಳ ಹಿಂದೆ ಬಾಲಕಿಯ ತಂದೆ ತಾಯಿ ಮೃತಪಟ್ಟಿದ್ದರು. ಬಳಿಕ ಆಕೆ ಅಜ್ಜಿಯೊಂದಿಗೆ ವಾಸವಿದ್ದಳು. ಆದರೆ ಕೆಲಕಾಲದ ನಂತರ ಅಜ್ಜಿಯೂ ತೀರಿಕೊಂಡಿದ್ದರಿಂದ ದಿಕ್ಕಿಲ್ಲದೇ ಅನಾಥಳಾಗಿದ್ದಳು. ಈ ಸಂದರ್ಭದಲ್ಲಿ ಪತ್ನಿ ಹಾಗೂ ನಾಲ್ವರು ಮಕ್ಕಳ ಜತೆಗೆ ಆ ಬಾಲಕಿಗೂ ಆಶ್ರಯ ನೀಡಿದ ಮೆಹಬೂಬ್ ಮಸಳಿ ಎಂಬುವವರು ಬಾಲಕಿಗೆ ಅನಾಥ ಭಾವ ಕಾಡದಂತೆ ನೋಡಿಕೊಂಡು ಸ್ವಂತ ಮಗಳಂತೆಯೇ ಪೋಷಿಸಿದ್ದಾರೆ. ಇದೀಗ ಆಕೆ ಮದುವೆ ವಯಸ್ಸಿಗೆ ಬರುತ್ತಿದ್ದಂತೆಯೇ ಹಿಂದೂ ಸಂಪ್ರದಾಯದಂತೆಯೇ ಮದುವೆ ಮಾಡಿಕೊಟ್ಟಿದ್ದಾರೆ.

ನಿನ್ನೆ (ಜುಲೈ 30) ಮೆಹಬೂಬ್ ಮಸಳಿ ತನ್ನ ಸಾಕು ಮಗಳಿಗೆ ಹಿಂದೂ ಸಂಪ್ರದಾಯದಂತೆ ವಿವಾಹ ಮಾಡಿದ್ದು, ವಿಜಯಪುರ ಜಿಲ್ಲೆ ಆಲಮೇಲ‌ ಪಟ್ಟಣ ಈ ಘಟನೆಗೆ ಸಾಕ್ಷಿಯಾಗಿದೆ. ಪೂಜಾ ಒಡಗೇರಿ (20 ವರ್ಷ) ಎಂಬಾಕೆಗೆ ನಿನ್ನೆ ಹಿಂದೂ ಸಂಪ್ರದಾಯದಂತೆ ವಿವಾಹ ನೆರವೇರಿಸಿದ ಮೆಹಬೂಬ್ ಮಸಳಿ, ಆಕೆಯ ಸಮುದಾಯಕ್ಕೆ ಸೇರಿದ ಯುವಕನೊಂದಿಗೆ ವಿವಾಹ ಮಾಡಿಕೊಟ್ಟಿದ್ದಾರೆ.

HINDU MUSLIM UNITY

ಭಾವೈಕ್ಯತೆಗೆ ಸಾಕ್ಷಿಯಾದ ವಿವಾಹ

ಬಸವನಬಾಗೇವಾಡಿ ತಾಲೂಕಿನ ಸಾರವಾಡ ಗ್ರಾಮದ ಶಂಕರಪ್ಪ ಕುಂದರವಾಲೆಯೊಂದಿಗೆ ಪೂಜಾ ಒಡಗೇರಿಗೆ ವಿವಾಹ ಮಾಡಲಾಗಿದ್ದು, ಹಿಂದೂ ಬಾಲಕಿಯನ್ನು ಪೋಷಿಸಿ, ವಿವಾಹ ಮಾಡುವ ಮೂಲಕ ಮೆಹಬೂಬ್ ಭಾವೈಕ್ಯತೆ ಮೆರೆದಿದ್ದಾರೆ. ಮೆಹಬೂಬ್ ಮಸಳಿ ಹಾಗೂ ಕುಟುಂಬದ ಈ ಕಾರ್ಯಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಜಾತಿ, ಧರ್ಮ, ಸಮುದಾಯಗಳ ಹೆಸರಿನಲ್ಲಿ ತಿಕ್ಕಾಟ ನಡೆಯುತ್ತಿರುವ ಈ ಕಾಲದಲ್ಲಿ ಇಂತಹ ಘಟನೆಗಳು ಭಾವೈಕ್ಯತೆಗೆ ಸಾಕ್ಷಿಯಾಗಿದ್ದು, ಮನುಷ್ಯ, ಮನುಷ್ಯರ ನಡುವೆ ಪ್ರೀತಿ, ಸೌಹಾರ್ದತೆಯೇ ಮುಖ್ಯ ಅದಕ್ಕಿಂತ ಮುಖ್ಯವಾಗಿದ್ದು ಏನೂ ಇಲ್ಲ. ಜಾತಿ ಧರ್ಮಗಳ ಹೆಸರಿನಲ್ಲಿ ಬಿರುಕು ಮೂಡಿಸುವುದು, ಮನಸ್ತಾಪ ಸೃಷ್ಟಿಸುವುದು ತಪ್ಪು ಎನ್ನುವುದಕ್ಕೆ ಉತ್ತಮ ಉದಾಹರಣೆಯಂತಿದೆ.

ಇದನ್ನೂ ಓದಿ: ಪರಸ್ಪರ ಪ್ರೀತಿಸಿ, ಹಿಂದೂ ಶಾಸ್ತ್ರದಂತೆ ಮದುವೆಯಾದ ಇಬ್ಬರು ಯುವತಿಯರು; ಸಲಿಂಗಿಗಳ ವಿವಾಹ ನೋಡಿ ಸ್ಥಳೀಯರು ಕಂಗಾಲು 

ಕವನಳ ಮದುವೆಗೆ ಮುಸ್ಲಿಂ ಸಹೋದರರ ಸಾರಥ್ಯ; ಮಂಗಳೂರಿನ ಉಳ್ಳಾಲದಲ್ಲಿ ಹಿಂದೂ ಮುಸ್ಲಿಂ ಸಾಮರಸ್ಯ

(Muslim man conducts Hindu girl marriage as per Hindu rituals in Vijayapura)

ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್