AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮು ಸೌಹಾರ್ದ: ಅನಾಥೆಯನ್ನು ಮಗಳಂತೆ ಪೋಷಿಸಿ ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಮಾಡಿಕೊಟ್ಟ ಮುಸ್ಲಿಂ ವ್ಯಕ್ತಿ

ಮೆಹಬೂಬ್ ಮಸಳಿ ತನ್ನ ಸಾಕು ಮಗಳಿಗೆ ಹಿಂದೂ ಸಂಪ್ರದಾಯದಂತೆ ವಿವಾಹ ಮಾಡಿದ್ದು, ವಿಜಯಪುರ ಜಿಲ್ಲೆ ಆಲಮೇಲ‌ ಪಟ್ಟಣ ಈ ಘಟನೆಗೆ ಸಾಕ್ಷಿಯಾಗಿದೆ.

ಕೋಮು ಸೌಹಾರ್ದ: ಅನಾಥೆಯನ್ನು ಮಗಳಂತೆ ಪೋಷಿಸಿ ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಮಾಡಿಕೊಟ್ಟ ಮುಸ್ಲಿಂ ವ್ಯಕ್ತಿ
ಹಿಂದೂ - ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಮದುವೆ
TV9 Web
| Edited By: |

Updated on: Jul 31, 2021 | 10:06 AM

Share

ವಿಜಯಪುರ: ತಂದೆ, ತಾಯಿ, ಅಜ್ಜಿ ಎಲ್ಲರನ್ನೂ ಕಳೆದುಕೊಂಡು ಅನಾಥಳಾಗಿದ್ದ ಹಿಂದೂ ಹುಡುಗಿಯೊಬ್ಬಳನ್ನು (Hindu) ಮಗಳಂತೆಯೇ ಸಾಕಿದ ಮುಸ್ಲಿಂ (Muslim) ವ್ಯಕ್ತಿ ಇದೀಗ ಆಕೆಗೆ ಹಿಂದೂ ಸಂಪ್ರದಾಯದಂತೆಯೇ ಮದುವೆ (Marriage) ಮಾಡಿಸಿಕೊಟ್ಟು ಕೋಮು ಸೌಹಾರ್ದ ಮೆರೆದ ಘಟನೆ ವಿಜಯಪುರದಲ್ಲಿ ನಡೆದಿದೆ. ಕಳೆದ 13 ವರ್ಷಗಳ ಹಿಂದೆ ಬಾಲಕಿಯ ತಂದೆ ತಾಯಿ ಮೃತಪಟ್ಟಿದ್ದರು. ಬಳಿಕ ಆಕೆ ಅಜ್ಜಿಯೊಂದಿಗೆ ವಾಸವಿದ್ದಳು. ಆದರೆ ಕೆಲಕಾಲದ ನಂತರ ಅಜ್ಜಿಯೂ ತೀರಿಕೊಂಡಿದ್ದರಿಂದ ದಿಕ್ಕಿಲ್ಲದೇ ಅನಾಥಳಾಗಿದ್ದಳು. ಈ ಸಂದರ್ಭದಲ್ಲಿ ಪತ್ನಿ ಹಾಗೂ ನಾಲ್ವರು ಮಕ್ಕಳ ಜತೆಗೆ ಆ ಬಾಲಕಿಗೂ ಆಶ್ರಯ ನೀಡಿದ ಮೆಹಬೂಬ್ ಮಸಳಿ ಎಂಬುವವರು ಬಾಲಕಿಗೆ ಅನಾಥ ಭಾವ ಕಾಡದಂತೆ ನೋಡಿಕೊಂಡು ಸ್ವಂತ ಮಗಳಂತೆಯೇ ಪೋಷಿಸಿದ್ದಾರೆ. ಇದೀಗ ಆಕೆ ಮದುವೆ ವಯಸ್ಸಿಗೆ ಬರುತ್ತಿದ್ದಂತೆಯೇ ಹಿಂದೂ ಸಂಪ್ರದಾಯದಂತೆಯೇ ಮದುವೆ ಮಾಡಿಕೊಟ್ಟಿದ್ದಾರೆ.

ನಿನ್ನೆ (ಜುಲೈ 30) ಮೆಹಬೂಬ್ ಮಸಳಿ ತನ್ನ ಸಾಕು ಮಗಳಿಗೆ ಹಿಂದೂ ಸಂಪ್ರದಾಯದಂತೆ ವಿವಾಹ ಮಾಡಿದ್ದು, ವಿಜಯಪುರ ಜಿಲ್ಲೆ ಆಲಮೇಲ‌ ಪಟ್ಟಣ ಈ ಘಟನೆಗೆ ಸಾಕ್ಷಿಯಾಗಿದೆ. ಪೂಜಾ ಒಡಗೇರಿ (20 ವರ್ಷ) ಎಂಬಾಕೆಗೆ ನಿನ್ನೆ ಹಿಂದೂ ಸಂಪ್ರದಾಯದಂತೆ ವಿವಾಹ ನೆರವೇರಿಸಿದ ಮೆಹಬೂಬ್ ಮಸಳಿ, ಆಕೆಯ ಸಮುದಾಯಕ್ಕೆ ಸೇರಿದ ಯುವಕನೊಂದಿಗೆ ವಿವಾಹ ಮಾಡಿಕೊಟ್ಟಿದ್ದಾರೆ.

HINDU MUSLIM UNITY

ಭಾವೈಕ್ಯತೆಗೆ ಸಾಕ್ಷಿಯಾದ ವಿವಾಹ

ಬಸವನಬಾಗೇವಾಡಿ ತಾಲೂಕಿನ ಸಾರವಾಡ ಗ್ರಾಮದ ಶಂಕರಪ್ಪ ಕುಂದರವಾಲೆಯೊಂದಿಗೆ ಪೂಜಾ ಒಡಗೇರಿಗೆ ವಿವಾಹ ಮಾಡಲಾಗಿದ್ದು, ಹಿಂದೂ ಬಾಲಕಿಯನ್ನು ಪೋಷಿಸಿ, ವಿವಾಹ ಮಾಡುವ ಮೂಲಕ ಮೆಹಬೂಬ್ ಭಾವೈಕ್ಯತೆ ಮೆರೆದಿದ್ದಾರೆ. ಮೆಹಬೂಬ್ ಮಸಳಿ ಹಾಗೂ ಕುಟುಂಬದ ಈ ಕಾರ್ಯಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಜಾತಿ, ಧರ್ಮ, ಸಮುದಾಯಗಳ ಹೆಸರಿನಲ್ಲಿ ತಿಕ್ಕಾಟ ನಡೆಯುತ್ತಿರುವ ಈ ಕಾಲದಲ್ಲಿ ಇಂತಹ ಘಟನೆಗಳು ಭಾವೈಕ್ಯತೆಗೆ ಸಾಕ್ಷಿಯಾಗಿದ್ದು, ಮನುಷ್ಯ, ಮನುಷ್ಯರ ನಡುವೆ ಪ್ರೀತಿ, ಸೌಹಾರ್ದತೆಯೇ ಮುಖ್ಯ ಅದಕ್ಕಿಂತ ಮುಖ್ಯವಾಗಿದ್ದು ಏನೂ ಇಲ್ಲ. ಜಾತಿ ಧರ್ಮಗಳ ಹೆಸರಿನಲ್ಲಿ ಬಿರುಕು ಮೂಡಿಸುವುದು, ಮನಸ್ತಾಪ ಸೃಷ್ಟಿಸುವುದು ತಪ್ಪು ಎನ್ನುವುದಕ್ಕೆ ಉತ್ತಮ ಉದಾಹರಣೆಯಂತಿದೆ.

ಇದನ್ನೂ ಓದಿ: ಪರಸ್ಪರ ಪ್ರೀತಿಸಿ, ಹಿಂದೂ ಶಾಸ್ತ್ರದಂತೆ ಮದುವೆಯಾದ ಇಬ್ಬರು ಯುವತಿಯರು; ಸಲಿಂಗಿಗಳ ವಿವಾಹ ನೋಡಿ ಸ್ಥಳೀಯರು ಕಂಗಾಲು 

ಕವನಳ ಮದುವೆಗೆ ಮುಸ್ಲಿಂ ಸಹೋದರರ ಸಾರಥ್ಯ; ಮಂಗಳೂರಿನ ಉಳ್ಳಾಲದಲ್ಲಿ ಹಿಂದೂ ಮುಸ್ಲಿಂ ಸಾಮರಸ್ಯ

(Muslim man conducts Hindu girl marriage as per Hindu rituals in Vijayapura)

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು