AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಭಾರತಕ್ಕೆ ಭಯೋತ್ಪಾದನೆ, ಬಡತನ, ಭ್ರಷ್ಟಾಚಾರವನ್ನು ಕೊಡುಗೆಯಾಗಿ ನೀಡಿದೆ: ನಳಿನ್ ಕುಮಾರ್ ಕಟೀಲ್

Sindagi Byelections 2021: ಇವತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಮ್ಮದೆ ಇದೆ. ಮುಂದಿನ ದಿನಗಳಲ್ಲಿ ಸಿಂದಗಿ ಅಭಿವೃದ್ಧಿಗೆ ಎಲ್ಲ ರೀತಿಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಂದಗಿ ಪಟ್ಟಣದಲ್ಲಿ ನಳಿನ್​ ಕುಮಾರ್ ಕಟೀಲು ಹೇಳಿದ್ದಾರೆ.

ಕಾಂಗ್ರೆಸ್ ಭಾರತಕ್ಕೆ ಭಯೋತ್ಪಾದನೆ, ಬಡತನ, ಭ್ರಷ್ಟಾಚಾರವನ್ನು ಕೊಡುಗೆಯಾಗಿ ನೀಡಿದೆ: ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on:Oct 27, 2021 | 6:21 PM

Share

ವಿಜಯಪುರ: ಕಾಂಗ್ರೆಸ್​ ಸರ್ಕಾರ ಈ ದೇಶಕ್ಕೆ ಭಯೋತ್ಪಾದನೆ, ಬಡತನ, ಭ್ರಷ್ಟಾಚಾರ, ನಿರುದ್ಯೋಗವನ್ನು ಕೊಡುಗೆಯಾಗಿ ನೀಡಿದೆ. ಸುದೀರ್ಘ ಆಡಳಿತ ನಡೆಸಿದ್ರೂ ಅವರ ಬಳಿ ಸಾಧನೆ ಇಲ್ಲ. ಕಾಂಗ್ರೆಸ್ ಸೋಲಿನ ಭೀತಿಯಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದೆ ಎಂದು ಸಿಂದಗಿ ಪಟ್ಟಣದಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್​ ಕುಮಾರ್ ಕಟೀಲು ವಾಗ್ದಾಳಿ ನಡೆಸಿದ್ದಾರೆ. ದೇಶ ಒಡೆಯುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಟಿಪ್ಪು ಜಯಂತಿ ಮೂಲಕ ಒಡೆಯುವ ಕೆಲಸ ಮಾಡಿದೆ. ಲಿಂಗಾಯತ ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಟೀಕಿಸಿದ್ದಾರೆ.

ಕುರಿ ಕಾಯುವವರ ಬಗ್ಗೆ ನಮಗೆ ಚಿಂತನೆ ಇದೆ. ಬಾದಾಮಿಯಲ್ಲಿ ನೀವು ಹಣದಿಂದ ಗೆದ್ದಿದ್ದಾ ಎಂದು ಸಿದ್ದರಾಮಯ್ಯಗೆ ನಳಿನ್ ಕುಮಾರ್ ಕಟೀಲು ಪ್ರಶ್ನೆ ಮಾಡಿದ್ದಾರೆ. ಕನಕಪುರದಲ್ಲಿ ಹಣ ಹಂಚಿಯೇ ಗೆದ್ದೀದ್ದೀರಾ ಎಂದು ಪ್ರಶ್ನೆ ಕೇಳಿದ್ದಾರೆ. ಇವತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಮ್ಮದೆ ಇದೆ. ಮುಂದಿನ ದಿನಗಳಲ್ಲಿ ಸಿಂದಗಿ ಅಭಿವೃದ್ಧಿಗೆ ಎಲ್ಲ ರೀತಿಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಂದಗಿ ಪಟ್ಟಣದಲ್ಲಿ ನಳಿನ್​ ಕುಮಾರ್ ಕಟೀಲು ಹೇಳಿದ್ದಾರೆ.

ಜೆಡಿಎಸ್ ನಿಜ ಬಣ್ಣ ಬಯಲು: ಈಶ್ವರ ಖಂಡ್ರೆ ವಾಗ್ದಾಳಿ ಉಪ‌ಚುನಾವಣೆಯಿಂದ ಜೆಡಿಎಸ್ ನಿಜ ಬಣ್ಣ ಬಯಲಾಗಿದೆ ಎಂದು ವಿಜಯಪುರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ, ಕಾಂಗ್ರೆಸ್ ಸಮಾನಾಂತರ ವೈರಿಗಳು ಅಂದಿದ್ದಾರೆ. ಬಿಜೆಪಿ ಜೊತೆ ಯಾಕೆ ಹೊಂದಾಣಿಕೆ ಮಾಡಿಕೊಂಡರು? ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದಾರೆ. ವೈರಿಯಾಗಿದ್ದರೆ ಯಾಕೆ ಅವರ ಜತೆ ಮೈತ್ರಿ ಮಾಡಿಕೊಂಡ್ರಿ? ಪರಿಷತ್ ಸಭಾಪತಿ ಚುನಾವಣೆಯಲ್ಲಿ ಯಾಕೆ ಮೈತ್ರಿ? ಜನರು, ಅಲ್ಪಸಂಖ್ಯಾತರು ಅರ್ಥ ಮಾಡಿಕೊಂಡಿದ್ದಾರೆ. ಎಷ್ಟೇ ನಾಟಕ ಮಾಡಿದರೂ ಪರಿಣಾಮ ಬೀರುವುದಿಲ್ಲ. ಚುನಾವಣೆಯಲ್ಲಿ ಜೆಡಿಎಸ್ ಠೇವಣಿ ಸಹ ಉಳಿಯಲ್ಲ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

ಕಾಂಗ್ರೆಸ್, ಬಿಜೆಪಿಯವರು ಹಣ ಹಂಚಲು ಬರುತ್ತಾರೆ: ಹೆಚ್​ಡಿ ಕುಮಾರಸ್ವಾಮಿ ಹೇಳಿಕ ಅಕ್ಟೋಬರ್ 30 ರಂದು ವಿಜಯಪುರ ಜಿಲ್ಲೆ ಸಿಂದಗಿ ಉಪಚುನಾವಣೆ ನಡೆಯಲಿದೆ. ನಾಳೆಯಿಂದ ಹಣ ಹಂಚಲು ಶುರು ಮಾಡುತ್ತಾರೆ. ಕಾಂಗ್ರೆಸ್, ಬಿಜೆಪಿಯವರು ಹಣ ಹಂಚಲು ಆರಂಭಿಸ್ತಾರೆ. ಅಭಿವೃದ್ಧಿ ಕೆಲಸಗಳ ಬಗ್ಗೆ ಹೇಳೋಕೆ ಏನೂ ಇಲ್ಲ. ಹೀಗಾಗಿ ಹಣ ಹಂಚಿ ಮತ ಕೇಳಲು ನಿಮ್ಮ ಬಳಿ ಬರ್ತಾರೆ ಎಂದು ಸಿಂದಗಿಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ: ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಮತದಾರರ ಅಂಕಿ-ಅಂಶ; ಸಂಪೂರ್ಣ ವಿವರ ಇಲ್ಲಿದೆ

ಇದನ್ನೂ ಓದಿ: ಹಾನಗಲ್, ಸಿಂದಗಿ ಉಪಚುನಾವಣೆ ನೆರಳಲ್ಲಿ ಸಿದ್ದರಾಮಯ್ಯ vs ಬಿಜೆಪಿ ಟ್ವೀಟ್ ವಾರ್

Published On - 5:31 pm, Wed, 27 October 21