AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 4 ಸಾವಿರ, ಈಗ 5 ತಿಂಗಳಲ್ಲಿ 250ಕ್ಕೂ ಅಧಿಕ ರೈತರು ಆತ್ಮಹತ್ಯೆ: ಕಟೀಲ್

ಸಿದ್ದರಾಮಯ್ಯ ಬ್ರೇಕ್ ಫಾಸ್ಟ್, ಬೇರೆ ಫಾಸ್ಟ್, ಎಲ್ಲಾ ಮಾಡುತ್ತಿದ್ದಾರೆ. ರೈತರ ಬಗ್ಗೆ ಕಾಳಜಿ ಇಲ್ಲ. ರೈತರ ರಕ್ಷಣೆ ಮಾಡಿದರೆ ಸಿಎಂ ಸೀಟ್ ಉಳಿಯುತ್ತದೆ, ರೈತರ ಕಡೆಗಣಿಸಿದರೆ ಇವರ ಸೀಟ್ ಉಳಿಯೋದಿಲ್ಲ. ಬರದ ನಡುವೆ ಸಿಎಂಗೆ ರಾಜ್ಯದ ರೈತರ ಹಿತರಕ್ಷಣೆ ಮುಖ್ಯವಲ್ಲ. ಖುರ್ಚಿ ಉಳಿಸಿಕೊಳ್ಳುವುದೇ ಮುಖ್ಯವಾಗಿದೆ. ಖುರ್ಚಿ ಉಳಿಸಿಕೊಳ್ಳುವ ತಂತ್ರಗಾರಿಕೆಯಲ್ಲಿ ತೊಡಗಿದ್ದಾರೆ. ರೈತರ ರಕ್ಷಣೆ ಹೇಗೆ ಮಾಡುವುದು ಎನ್ನುವ ಯೋಚನೆಯಲ್ಲಿ ಕಾಂಗ್ರೆಸ್ ಹಾಗೂ ಸಿಎಂ ಇಲ್ಲ ಎಂದು ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.

ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 4 ಸಾವಿರ, ಈಗ 5 ತಿಂಗಳಲ್ಲಿ 250ಕ್ಕೂ ಅಧಿಕ ರೈತರು ಆತ್ಮಹತ್ಯೆ: ಕಟೀಲ್
ನಳಿನ್ ಕುಮಾರ್ ಕಟೀಲ್
ಅಶೋಕ ಯಡಳ್ಳಿ, ವಿಜಯಪುರ
| Edited By: ಆಯೇಷಾ ಬಾನು|

Updated on: Nov 04, 2023 | 12:34 PM

Share

ವಿಜಯಪುರ, ನ.04: ಈ ಹಿಂದೆ ಸಿದ್ದರಾಮಯ್ಯ (Siddaramaiah) CM ಆಗಿದ್ದಾಗ 4 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಾರಿ 5 ತಿಂಗಳಲ್ಲೇ 250ಕ್ಕೂ ಅಧಿಕ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪೈಕಿ ವಿಜಯಪುರ ಜಿಲ್ಲೆಯಲ್ಲಿ 18 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ (Nalin Kumar Kateel) ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬರದ ನಡುವೆ ಸಿಎಂಗೆ ರಾಜ್ಯದ ರೈತರ ಹಿತರಕ್ಷಣೆ ಮುಖ್ಯವಾಗಿಲ್ಲ. ಬ್ರೇಕ್ ಫಾಸ್ಟ್​, ಬೇರೆ ಫಾಸ್ಟ್​ ಎಲ್ಲಾ ಮಾಡುತ್ತಿದ್ದಾರೆ ಎಂದ ಆಕ್ರೋಶ ಹೊರ ಹಾಕಿದ್ದಾರೆ.

ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಅರಕೇರಿಯಲ್ಲಿ ನಳಿನ್​​​ ಕುಮಾರ್ ನೇತೃತ್ವದಲ್ಲಿ ಬರ ವೀಕ್ಷಣೆ ಮಾಡಲಾಗಿದೆ. ಈ ವೇಳೆ ಸಿದ್ದರಾಮಯ್ಯ ಅವರ ಬ್ರೇಕ್ ಪಾಸ್ಟ್ ಮೀಟಿಂಗ್ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಭೀಕರ ಬರ ಆವರಿಸಿದೆ. ಕಳೆದ ಬಾರಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 4 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಾರಿ ಕೇವಲ 5 ತಿಂಗಳಲ್ಲೇ 250 ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರದಲ್ಲಿ 18 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತನಿಗೆ ರಾಜ್ಯ ಸರ್ಕಾರ ಪರಿಹಾರ ನೀಡಿಲ್ಲ. ಆತ್ಮಹತ್ಯೆ ಸರಣಿಯಲ್ಲಿ ನಡೆಯುತ್ತಿವೆ, ಬರದಿಂದ ರೈತ ಕಂಗೆಟ್ಟಿದ್ದಾನೆ. ಈ ಕುರಿತ ಯೋಚನೆ ಸಿಎಂಗೆ ಇಲ್ಲ, ಈ ಬಗ್ಗೆ ಸಿಎಂ ತಲೆಕೆಡಿಸಿಕೊಂಡಿಲ್ಲ. ಬ್ರೇಕ್ ಫಾಸ್ಟ್, ಬೇರೆ ಫಾಸ್ಟ್, ಎಲ್ಲಾ ಮಾಡುತ್ತಿದ್ದಾರೆ. ರೈತರ ಬಗ್ಗೆ ಕಾಳಜಿ ಇಲ್ಲ. ರೈತರ ರಕ್ಷಣೆ ಮಾಡಿದರೆ ಸಿಎಂ ಸೀಟ್ ಉಳಿಯುತ್ತದೆ, ರೈತರ ಕಡೆಗಣಿಸಿದರೆ ಇವರ ಸೀಟ್ ಉಳಿಯೋದಿಲ್ಲ. ಬರದ ನಡುವೆ ಸಿಎಂಗೆ ರಾಜ್ಯದ ರೈತರ ಹಿತರಕ್ಷಣೆ ಮುಖ್ಯವಲ್ಲ. ಖುರ್ಚಿ ಉಳಿಸಿಕೊಳ್ಳುವುದೇ ಮುಖ್ಯವಾಗಿದೆ. ಖುರ್ಚಿ ಉಳಿಸಿಕೊಳ್ಳುವ ತಂತ್ರಗಾರಿಕೆಯಲ್ಲಿ ತೊಡಗಿದ್ದಾರೆ. ರೈತರ ರಕ್ಷಣೆ ಹೇಗೆ ಮಾಡುವುದು ಎನ್ನುವ ಯೋಚನೆಯಲ್ಲಿ ಕಾಂಗ್ರೆಸ್ ಹಾಗೂ ಸಿಎಂ ಇಲ್ಲ ಎಂದರು.

ಇದನ್ನೂ ಓದಿ: ಸಿಎಂ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಉದ್ಘಾಟನೆ, ಟೇಪ್​ ಕತ್ತರಿಸಲು ಡಿಕೆ ಶಿವಕುಮಾರ್​ಗೆ ಕತ್ತರಿ ಕೊಟ್ಟ ಸಿದ್ದರಾಮಯ್ಯ

ಬರದ ವಿಚಾರದಲ್ಲಿ ರಾಜ್ಯದ ಸಂಸದರು ಪ್ರಧಾನಿಗಳ ಭೇಟಿಗೆ ಸಮಯ ನಿಗದಿ ಮಾಡಿಸಲಿ ಎಂದ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕಟೀಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯರಿಗೆ ಆಡಳಿತ ನಡೆಸೋಕೆ ಬರೋದಿಲ್ಲ. ಎರಡೆರೆಡು ಬಾರಿ ಮುಖ್ಯಮಂತ್ರಿ, ಹಣಕಾಸು ಸಚಿವರಾದವರಿಗೆ ಆಡಳಿತ ನಡೆಸೋಕೆ ಬರೋಲ್ಲ. NDRF ನಲ್ಲಿ ಹಣ ಬಿಡುಗಡೆಗೆ ಅದರದ್ದೆ ಆದ ಮಾರ್ಗಸೂಚಿ ಇವೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ನೆರೆ ಬಂದಿತ್ತು. ಅವರು ಕೇಂದ್ರ ಹಣಕಾಸಿಗೆ ಕಾಯಲಿಲ್ಲ, ತಕ್ಷಣ ಮನೆಗಳಿಗೆ ಹೋಗಿ 5 ಲಕ್ಷ ಪರಿಹಾರ ಕೊಟ್ಟರು. ಈಗ ಬರ ವಿಚಾರದಲ್ಲಿ ಕೇಂದ್ರದಿಂದ ಹಣ ಬಂದೆ ಬರುತ್ತದೆ. ಮಾರ್ಗಸೂಚಿ ಪ್ರಕಾರ ಅನುದಾನ ಬಂದೆ ಬರುತ್ತದೆ. ತಕ್ಷಣ ಪರಿಹಾರ ಕೊಡಬೇಕಾಗಿರೋದು ಸಿದ್ದರಾಮಣ್ಣನ ಜವಾಬ್ದಾರಿ. ಜಿಲ್ಲಾಧಿಕಾರಿಗಳ ಬಳಿ ಇರುವ NDRF ಹಣವನ್ನೇ ಬಿಡುಗಡೆ ಮಾಡಲಿ ಸಾಕಾಗುತ್ತದೆ. ಬರ ವಿಚಾರದಲ್ಲಿ ಸಿಎಂ ರಾಜಕಾರಣ ಮಾಡುತ್ತಿದ್ದಾರೆಂದು ನಳಿನ್ ಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More