AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ಮೂಲದ ನವೀನ್ ಹಾವಣ್ಣನವರ ಅಮೆರಿಕಾದಲ್ಲಿ ಕೌನ್ಸಿಲರ್ ಆಗಿ ಆಯ್ಕೆ

ಪ್ರಸ್ತುತ, ಪತ್ನಿ ಕ್ಯಾಥರಿನ್ ಹಾಗೂ ಇಬ್ಬರು ಮಕ್ಕಳೊಂದಿಗೆ ಅಮೇರಿಕಾದಲ್ಲಿ ವಾಸವಾಗಿರುವ ನವೀನ್ ಅವರು ವಿಜಯಪುರದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಶಿಕ್ಷಣ ಪಡೆದಿದ್ದರು. ಅದಾದಮೇಲೆ, ಹಾನಸದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪಿಯು ಶಿಕ್ಷಣ ಮುಗಿಸಿ, ಕಲಬುರಗಿಯ ಶರಣ ಬಸವೇಶ್ವರ ಕಾಲೇಜಿನಲ್ಲಿ ಬಿಎಸ್ಸಿ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿದ್ದರು.

ವಿಜಯಪುರ ಮೂಲದ ನವೀನ್ ಹಾವಣ್ಣನವರ ಅಮೆರಿಕಾದಲ್ಲಿ ಕೌನ್ಸಿಲರ್ ಆಗಿ ಆಯ್ಕೆ
ವಿಜಯಪುರ ಮೂಲದ ನವೀನ್ ಹಾವಣ್ಣನವರ ಅಮೆರಿಕಾದಲ್ಲಿ ಕೌನ್ಸಿಲರ್ ಆದರು
ಅಶೋಕ ಯಡಳ್ಳಿ, ವಿಜಯಪುರ
| Edited By: ಸಾಧು ಶ್ರೀನಾಥ್​|

Updated on:Jan 05, 2024 | 2:53 PM

Share

ವಿಜಯಪುರ ಮೂಲದ ನವೀನ್ ಹಾವಣ್ಣನವರ (Naveen Havannavar) ಅಮೇರಿಕಾದಲ್ಲಿ (USA) ಕೌನ್ಸಿಲರ್ ಆಗಿ ಆಯ್ಕೆಯಾಗಿದ್ದಾರೆ. ಅಮೇರಿಕಾದ ನ್ಯೂಯಾರ್ಕ್ ರಾಜ್ಯದ ರೋಚೆಸ್ಟರ್ ಜಿಲ್ಲೆಯ ಪೀಟ್ಸ್ ಫೋರ್ಡ್ ಪ್ರದೇಶದ ಕೌನ್ಸಿಲರ್ ಆಗಿ ಆಯ್ಕೆಯಾಗಿದ್ದಾರೆ. ಕೌನ್ಸಿಲರ್ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದಿಂದ (Democratic Party) ನವೀನ್ ಸ್ಪರ್ಧೆ ಮಾಡಿದ್ದರು. ನವೀನ್ ಅವರು ರಿಪಬ್ಲಿಕನ್ ಪಾರ್ಟಿ ಅಭ್ಯರ್ಥಿ ಎದುರು 33 ಮತಗಳ ಅಂತರಿಂದ ಗೆಲುವು ಕಂಡಿದ್ದಾರೆ. ನಾಲ್ಕು ವರ್ಷಗಳ ಅವಧಿಗೆ ಅವರು ಆಯ್ಕೆಯಾಗಿದ್ದಾರೆ.

ನವೀನ್ ಅವರು ಪೀಟ್ಸ್ ಫೋರ್ಡ್ ಪ್ರದೇಶದ ಕೌನ್ಸಿಲರ್ ಆಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನವೀನ್ ಹಾವಣ್ಣವರ ಅವರು ಕಳೆದ 14 ವರ್ಷಗಳಿಂದ ಅಮೇರಿಕಾದಲ್ಲಿಯೇ ವಾಸವಾಗಿದ್ದಾರೆ.

ಚುನಾವಣೆಯ ದಿನದ ಕೊನೆಯಲ್ಲಿ ಇಬ್ಬರಿಗೂ ಏಳು ಮತಗಳ ಅಂತರವಿತ್ತು. ಅದರಲ್ಲಿ ರಿಪಬ್ಲಿಕನ್ ಅಭ್ಯರ್ಥಿ ಕೇಟ್ ಬೊಹ್ನೆ ಮುಂಜಿಂಗರ್ 4,233 ಮತಗಳನ್ನು ಮತ್ತು ಡೆಮಾಕ್ರಟಿಕ್ ಸ್ಪರ್ಧಿ ನವೀನ್ ಹಾವಣ್ಣನವರ 4,266 ಮತಗಳನ್ನು ಪಡೆದಿದ್ದರು. ಬಳಿಕ ಮರುಎಣಿಕೆ ನಡೆಸಲಾಯಿತು. ಅವರೊಂದಿಗೆ ಪಿಟ್ಸ್‌ಫೋರ್ಡ್‌ನಲ್ಲಿ ಟೌನ್ ಬೋರ್ಡ್ ಕೌನ್ಸಿಲರ್ ಸ್ಥಾನಕ್ಕೆ (Town Board seat in Pittsford) ಮರು ಎಣಿಕೆಯೊಂದಿಗೆ ನವೀನ್ ಅವರ ಹೆಸರು ಇತ್ಯರ್ಥವಾಯಿತು.

ಪ್ರಸ್ತುತ, ಪತ್ನಿ ಕ್ಯಾಥರಿನ್ ಹಾಗೂ ಇಬ್ಬರು ಮಕ್ಕಳೊಂದಿಗೆ ಅಮೇರಿಕಾದಲ್ಲಿ ವಾಸವಾಗಿರುವ ನವೀನ್ ಅವರು ವಿಜಯಪುರದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಶಿಕ್ಷಣ ಪಡೆದಿದ್ದರು. ಅದಾದಮೇಲೆ, ಹಾನಸದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪಿಯು ಶಿಕ್ಷಣ ಮುಗಿಸಿ, ಕಲಬುರಗಿಯ ಶರಣ ಬಸವೇಶ್ವರ ಕಾಲೇಜಿನಲ್ಲಿ ಬಿಎಸ್ಸಿ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿದ್ದರು. 2009-10 ರಲ್ಲಿ ಅಮೇರಿಕಾಕ್ಕೆ ತೆರಳುವ ಮುನ್ನ ನವೀನ್ ಹಾವಣ್ಣನವರ ಅವರು ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ಎಂಬಿಎ ಪದವಿ ಪಡೆದಿದ್ದರು. ಮುಂದೆ ಅಮೇರಿಕಾದಲ್ಲಿ ಸಾಫ್ಟ್​​​​ವೇರ್ ಎಂಜಿನಿಯರ್ ಆಗಿ ಉದ್ಯೋಗದಲ್ಲಿ ತೊಡಗಿಸಿಕೊಂಡರು.

ಇದನ್ನೂ ಓದಿ: Barter system – ಆ ಗ್ರಾಮದಲ್ಲಿ ಇಂದಿಗೂ ವಿನಿಮಯ ಪದ್ದತಿಯಲ್ಲಿ ತರಕಾರಿ, ಇತರೆ ವಸ್ತುಗಳ ಮಾರಾಟ ನಡೆಯುತ್ತದೆ! ಅರೇ ಇಂಥಾ ಕಾಲದಲ್ಲಿಯೂ…

ಪುತ್ರ ನವೀನ್ ಅವರು ಕೌನ್ಸಿಲರ್ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇದೀಗ ವಿಜಯಪುರದಲ್ಲಿರೋ ನವೀನ್ ಕುಟುಂಬದಲ್ಲಿ ಸಂತಸ ನೂರ್ಮಡಿಸಿದೆ. ತಂದೆ ಪರಪ್ಪ, ತಾಯಿ ರೇಣುಕಾ ಹಾಗೂ ಕುಟುಂಬದವರಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಮುಂದೆ ಉತ್ತರೋತ್ತರ ನವೀನ್ ಅವರು ಅಮೆರಿಕದಲ್ಲಿ ಉನ್ನತ ಸ್ಥಾನಮಾನಗಳನ್ನು ಗಳಿಸಲಿ ಎಂದು ಅವರು ಆಶಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:44 pm, Fri, 5 January 24

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?