AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈತ್ರಿಗೆ ವಿರೋಧವಿಲ್ಲ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪಕ್ಷ ಬಿಡುವುದಿಲ್ಲ: ಶಾಸಕ ಜಿಟಿ ದೇವೇಗೌಡ

ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಿರೋಧವಿಲ್ಲ. ಅವರು ಪಕ್ಷ ಬಿಡುವುದಿಲ್ಲ. ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಇಬ್ರಾಹಿಂ ಮಾತನಾಡಿದ್ದಾರೆ. ಹೇಗೆ ಒಟ್ಟಾಗಿ ಹೋಗಬೇಕು ಎನ್ನುವುದಕ್ಕೆ ಅವರೇ ಸಲಹೆ ನೀಡಿದ್ದಾರೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಮೈತ್ರಿಗೆ ವಿರೋಧವಿಲ್ಲ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪಕ್ಷ ಬಿಡುವುದಿಲ್ಲ: ಶಾಸಕ ಜಿಟಿ ದೇವೇಗೌಡ
ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Oct 11, 2023 | 2:48 PM

Share

ವಿಜಯಪುರ, ಅಕ್ಟೋಬರ್​​ 11: ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ (CM Ibrahim) ವಿರೋಧವಿಲ್ಲ. ಅವರು ಪಕ್ಷ ಬಿಡುವುದಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಇಬ್ರಾಹಿಂ ಮಾತನಾಡಿದ್ದಾರೆ. ಬಿಜೆಪಿ ಜತೆ ಮೈತ್ರಿಗೆ ವಿರೋಧವಿಲ್ಲ. ಹೇಗೆ ಒಟ್ಟಾಗಿ ಹೋಗಬೇಕು ಅನ್ನೋದು ಸಿ.ಎಂ.ಇಬ್ರಾಹಿಂ ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಅವರೇ ಮುಂದೆ ನಿಂತು ನನ್ನ ಅಧ್ಯಕ್ಷ ಸ್ಥಾನ ಅನೌನ್ಸ್ ಮಾಡಿದ್ದಾರೆ, ನೀವೆ ನೋಡಿದ್ದೀರಿ. ಬಿಜೆಪಿ ಜೊತೆಗೆ ಎಷ್ಟು ಸೀಟ್ ಹಂಚಿಕೆಯಾಗಬೇಕು. ಮುಂದೆ ಯಾವ ರೀತಿ ನಡೆದುಕೊಳ್ಳಬೇಕು ಎನ್ನುವ ಸಲಹೆ ಇಬ್ರಾಹಿಂರದ್ದು ಎಂದಿದ್ದಾರೆ.

ಗೃಹಜ್ಯೋತಿ, ಅನ್ನಭಾಗ್ಯ ಎಲ್ಲಾ ಸುಳ್ಳು ಎಂದ ಜಿಟಿ ದೇವೆಗೌಡ

ನನಗೂ ಇನ್ನೂರು ಯುನಿಟ್, ಮಹಾದೇವಪ್ಪಾ ನಿನಗೂ ಇನ್ನೂರು ಯುನಿಟ್ ಎಂದು ಸಿದ್ದಮಯ್ಯನವರು ಹೇಳಿದ್ದರು. ಆಯ್ಕೆಯಾದ ಮೇಲೆ 53 ಯುನಿಟ್ ಘೋಷಣೆ ಮಾಡಿದ್ದಾರೆ. ಕರೆಂಟ್ ಬಿಲ್ ಜಾಸ್ತಿ ಮಾಡಿದ್ದಾರೆ. ರೈತರಿಗೆ ಏಳು ಗಂಟೆ ವಿದ್ಯುತ್ ಕೊಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇದ್ದಾಗಲೇ ಆದೇಶ ಮಾಡಿದ್ದಾರೆ. ಆದರೆ ಇದೀಗ ಎರಡು ಗಂಟೆ ಕರೆಂಟ್ ಇಲ್ಲವಾಗಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ನುಡಿದಂತೆ ನಡೆದ ಮುನಿರತ್ನ: ಡಿಕೆ ಶಿವಕುಮಾರ್ ಇದ್ದಲ್ಲಿಗೆ ಹೋಗಿ ಕಾಲಿಗೆ ಬಿದ್ದ ಬಿಜೆಪಿ ಶಾಸಕ

ಬರಗಾಲದಲ್ಲಿ ಕರೆ ಕಟ್ಟೆಯಲ್ಲಿ ನೀರಿಲ್ಲ, ಬಾವಿಗಳಿಗೆ ಕರೆಂಟ್ ಇಲ್ಲ. ಕರೆಂಟ್ ಎಲ್ಲಿ ಕೊಟ್ಟರು? ಯಾರಿಗೆ ಕೊಟ್ಟರು? ಬರೀ ಸುಳ್ಳು ಹೇಳುವುದು ಆಗಿದೆ. ಕರೆಂಟ್ ಸುಳ್ಳು, ಗೃಹಜ್ಯೋತಿ ಸುಳ್ಳು, ಅನ್ನಭಾಗ್ಯ ಸುಳ್ಳು ಎಂದು ಆರೋಪಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆ ವಿಚಾರವಾಗಿಯೂ ಅಸಮಾಧಾನ ಹೊರ ಹಾಕಿದ್ದು, ಮನೆ ಯಜಮಾನಿ ಸತ್ತರೆ ಯಜಮಾನನಿಗೆ ಕೊಡಲ್ಲಾ, ತಂದೆ-ತಾಯಿ ಇಬ್ಬರೂ ಸತ್ತರೆ ಪಾಪ ಮಕ್ಕಳಿಗೆ ಇಲ್ಲ. ಇದು ಗೃಹಲಕ್ಷ್ಮಿ, ಇಂತಹ ಕಾರ್ಯಕ್ರಮ ಯಾವುದು ಬರುತ್ತಿಲ್ಲ. ಯಾವುದಕ್ಕೂ ಹಣ ಇಲ್ಲಾ, ಬರೀ ಸುಳ್ಳು ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ರೈತರಿಗೆ ಲೋಡ್​ಶೆಡ್ಡಿಂಗ್​​ ಶಾಕ್​: ಪಂಪ್​ಸೆಟ್​ಗಳಿಗೆ ಅಸಮರ್ಪಕ ವಿದ್ಯುತ್​ ಪೂರೈಕೆಯಿಂದ ಅನ್ನದಾತ ಕೆಂಡಾಮಂಡಲ

ಕಾಂಗ್ರೆಸ್ ಸರ್ಕಾರ ಬದಲಾವಣೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವ ಜಮೀರ್ ಅಹ್ಮದಖಾನ್ ತಿರುಗೇಟು ವಿಚಾರವಾಗಿ ಮಾತನಾಡಿದ ಅವರು, ಹಗಲುಗನಸು ನಾವು ಕಾಣುತ್ತಿಲ್ಲಾ. ಲೋಕಸಭೆಯಲ್ಲಿ ಗೆಲ್ಲದೆ ಹೋದರೆ ರಾಜೀನಾಮೆ ಕೊಡಬೇಕು ಎಂದು ಅವರೇ ಹೇಳಿದ್ದು. ಇದನ್ನಾ ನಾವು ಹೇಳಿದ್ದಾ? ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಶಾಸಕರೆ ಬಾಯಿ ಬಡ್ಕೋತಿದ್ದಾರೆ. ಈಗಾಗಲೇ ಕಂಪ್ಲಿ ಶಾಸಕ ಗಣೇಶ್, ರಾಯರೆಡ್ಡಿ ಅಸಮಧಾನ ಹೊರ ಹಾಕಿದ್ದಾರೆ. ರಾಜ್ಯದ ಜನ ಅದಕ್ಕಿಂತ ಜಾಸ್ತಿ ಬಾಯಿ ನಡೆಯುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಕಣ್ಣು ಇಲ್ಲ, ಕಿವಿಯೂ ಇಲ್ಲ ಎಂದು ಹರಿಹಾಯ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು