AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕಲಾಂಗ ವಿದ್ಯಾರ್ಥಿಗೆ ಒಂದು ಗಂಟೆ ತಡವಾಗಿ SSLC ಪರೀಕ್ಷೆ ಬರೆಸಿದ ಅಧಿಕಾರಿಗಳು; ಪೋಷಕರ ಆಕ್ರೋಶ

ಕೈಗಳ ಶಕ್ತಿ ಕಳೆದುಕೊಂಡಿರುವ ವಿದ್ಯಾರ್ಥಿಗೆ ಸಹಾಯಕ ವಿದ್ಯಾರ್ಥಿ ನೀಡದೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದು ಬರೋಬ್ಬರಿ ಒಂದು ಗಂಟೆ ತಡವಾಗಿ ಸಹಾಯಕ ವಿದ್ಯಾರ್ಥಿ ನೀಡಿ ಪರೀಕ್ಷೆ ಬರೆಸಿದ್ದಾರೆ. ಇದರಿಂದ ನೊಂದ ಪೋಷಕರು ಮುಂದಿನ ಪರೀಕ್ಷೆಗಳಿಗೆ ಈ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ವಿಕಲಾಂಗ ವಿದ್ಯಾರ್ಥಿಗೆ ಒಂದು ಗಂಟೆ ತಡವಾಗಿ SSLC ಪರೀಕ್ಷೆ ಬರೆಸಿದ ಅಧಿಕಾರಿಗಳು; ಪೋಷಕರ ಆಕ್ರೋಶ
ವಿಕಲಾಂಗ ವಿದ್ಯಾರ್ಥಿಗೆ ಸಹಾಯಕ ವಿದ್ಯಾರ್ಥಿ ನೀಡಲು ಅಧಿಕಾರಿಗಳ ನಿರ್ಲಕ್ಷ್ಯ
ಅಶೋಕ ಯಡಳ್ಳಿ, ವಿಜಯಪುರ
| Updated By: ಆಯೇಷಾ ಬಾನು|

Updated on: Mar 27, 2024 | 1:40 PM

Share

ವಿಜಯಪುರ, ಮಾರ್ಚ್​.27: ಮಾರ್ಚ್​ 25ರಿಂದ ರಾಜ್ಯಾದ್ಯಂತ ಎಸ್​ಎಸ್​ಎಲ್​ಸಿ ಪರೀಕ್ಷೆ (SSLC Exam) ಆರಂಭವಾಗಿದೆ. ಶಿಕ್ಷಣ ಇಲಾಖೆ ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸೌಲಭ್ಯಗಳನ್ನು ಮಾಡಿಕೊಂಡಿದೆ ಎಂದು ತಿಳಿಸಿದೆ. ಆದರೆ ವಿಜಯಪುರದಲ್ಲಿ (Vijayapura) ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ವಿಕಲಾಂಗ ವಿದ್ಯಾರ್ಥಿ ಪರದಾಡಿದ ಘಟನೆ ನಡೆದಿದೆ. ವಿಕಲಾಂಗ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಸಹಾಯಕ ವಿದ್ಯಾರ್ಥಿ ನೀಡದೆ ವಿಜಯಪುರ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಆಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮೊಹಮ್ಮದ್ ಅಜ್ಲಾನ್ ನಾಯ್ಕೋಡಿ ಎಂಬ ವಿಕಲಾಂಗ ವಿದ್ಯಾರ್ಥಿ ಕೈಗಳ ಶಕ್ತಿ ಕಳೆದುಕೊಂಡಿದ್ದಾನೆ. ಆತನಿಗೆ ಬರೆಯಲು ಆಗಲ್ಲ. ಹೀಗಾಗಿ ಸಹಾಯಕ ವಿದ್ಯಾರ್ಥಿ ನೀಡಿ ಪರೀಕ್ಷೆ ಬರೆಸಬೇಕಿತ್ತು. ಆದರೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದು ಸಹಾಯಕ ವಿದ್ಯಾರ್ಥಿ ಇಲ್ಲದೆ ಅಜ್ಲಾನ್ ಪರೀಕ್ಷೆಯನ್ನು ತಡವಾಗಿ ಬರೆಯುವಂತಾಗಿದೆ. ತಮ್ಮ ಮಗನಿಗೆ ಪರೀಕ್ಷೆ ಬರೆಯಲು ಆಗಲ್ಲ. ಸಹಾಯಕ ವಿದ್ಯಾರ್ಥಿಯನ್ನೂ ನೀಡಿಲ್ಲ ಎಂದು ವಿದ್ಯಾರ್ಥಿ ತಂದೆ ಪರೀಕ್ಷಾ ಕೇಂದ್ರದ ಬಳಿ ಕಣ್ಣೀರು ಹಾಕಿದ್ರು. ಸಹಾಯಕ ವಿದ್ಯಾರ್ಥಿಯನ್ನು ಕೊಡಲು ಮರೆತಿದ್ದ ಅಧಿಕಾರಿಗಳು ಒಂದು ಗಂಟೆ ತಡವಾಗಿ ಸಹಾಯಕ ವಿದ್ಯಾರ್ಥಿ ನೀಡಿ ಪರೀಕ್ಷೆ ಬರೆಸಿದ್ದಾರೆ.

ಇದನ್ನೂ ಓದಿ: ಯಾದಗಿರಿ: ಒಂದೇ ಪರೀಕ್ಷಾ ಕೇಂದ್ರದಲ್ಲಿ ಮಗನೊಂದಿಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದ ತಾಯಿ

ವಿಜಯಪುರ ನಗರದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಂಸ್ಥೆ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿರೋ ವಿದ್ಯಾರ್ಥಿ ಮೊಹಮ್ಮದ್ ಅಜ್ಲಾನ್ ಸಹಾಯಕ ವಿದ್ಯಾರ್ಥಿ ಇಲ್ಲದ ಕಾರಣ ಪರೀಕ್ಷೆಯನ್ನು ಬರೆಯಲಾಗದೆ ಕುಳಿತಿದ್ದರು. ಸಹಾಯಕ ವಿದ್ಯಾರ್ಥಿ ನೀಡಲು ಕಳೆದ ಫೆಬ್ರವರಿಯಲ್ಲೇ ವಿದ್ಯಾರ್ಥಿಯ ಶಾಲೆಯವರು ಡಿಡಿಪಿಐ ಕಚೇರಿಗೆ ಮನವಿ ಮಾಡಿದ್ದರು. ಫೆಬ್ರವರಿಯಲ್ಲಿ ಮನವಿ ನೀಡಿದ್ದರೂ ಸಹಾಯಕ ವಿದ್ಯಾರ್ಥಿಗೆ ಅವಕಾಶ ನೀಡದೇ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರು. ಕೊನೆಗೆ ಒಂದು ಗಂಟೆ ತಡವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಸಹಾಯಕ ವಿದ್ಯಾರ್ಥಿಗೆ ಅವಕಾಶ ನೀಡಿದರು. ಮುಂದಿನ ಪರೀಕ್ಷೆಗಳಿಗೆ ಈ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕೆಂದು ಪೋಷಕರು ಮನವಿ ಮಾಡಿದ್ದಾರೆ.

SSLC ಪರೀಕ್ಷೆ ಬರೆಯುವಾಗ ವಿದ್ಯಾರ್ಥಿ ಸಾವು

SSLC ಪರೀಕ್ಷೆ ಬರೆಯುವಾಗ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ತುಮಕೂರು ಜಿಲ್ಲೆಯ ತುರುವೇಕೆರೆ ಸರಸ್ವತಿ ಬಾಲಕರ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ. ಚಿಕ್ಕರಾಂಪುರ ನಿವಾಸಿ ಮೋಹನ್ ಮೃತಪಟ್ಟ ದುರ್ದೈವಿ. ನಿನ್ನೆ ಸರಸ್ವತಿ ಬಾಲಕರ ಪ್ರೌಢಶಾಲಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಮೋಹನ್ ಬಂದಿದ್ದ. ಪರೀಕ್ಷೆ ಬರೆಯುವಾಗ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಆಸ್ಪತ್ರೆ ಸಾಗಿಸಲಾಯ್ತು, ಆದ್ರೆ, ಸಾಗಿಸುವ ಮಾರ್ಗಮಧ್ಯೆ ಮೋಹನ್ ಕುಮಾರ್ ಕೊನೆಯುಸಿರೆಳೆದಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ