ತೈಲ ಬೆಲೆ ಏರಿಕೆ: ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ದರ ಕಡಿಮೆ; ಸಿಎಂ ಸಮರ್ಥನೆ

ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ(Petrol-diesel price hike) ಹಿನ್ನಲೆ ಸಾರ್ವಜನಿಕರು ಕಂಗಾಲಾಗಿದ್ದು, ಸರ್ಕಾರದ ನಡೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ವಿಜಯಪುರದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ‘ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್-ಡೀಸೆಲ್ ದರ ಕಡಿಮೆ ಇದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ತೈಲ ಬೆಲೆ ಏರಿಕೆ: ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ದರ ಕಡಿಮೆ; ಸಿಎಂ ಸಮರ್ಥನೆ
ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್-ಡೀಸೆಲ್ ದರ ಕಡಿಮೆ; ಸಿಎಂ ಸಮರ್ಥನೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 16, 2024 | 5:12 PM

ವಿಜಯಪುರ, ಜೂ.16: ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ(Petrol-diesel price hike) ಹಿನ್ನಲೆ ಸಾರ್ವಜನಿಕರು ಕಂಗಾಲಾಗಿದ್ದು, ಸರ್ಕಾರದ ನಡೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ವಿಜಯಪುರದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ‘ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್-ಡೀಸೆಲ್ ದರ ಕಡಿಮೆ ಇದೆ. ಮಹಾರಾಷ್ಟ್ರ, ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲೂ ನಮ್ಮಲ್ಲಿ ಡೀಸೆಲ್ ದರ ಕಡಿಮೆಯಿದೆ ಎನ್ನುವ ಮೂಲಕ ಸಿಎಂ ಸಮರ್ಥಿಸಿಕೊಂಡಿದ್ದಾರೆ.

‘ನಮ್ಮ ರಾಜ್ಯದ ಸಂಪನ್ಮೂಲವನ್ನ ಬಿಜೆಪಿ ಸರ್ಕಾರ ಇದ್ದಾಗ ಬೇರೆ ರಾಜ್ಯಕ್ಕೆ ನೀಡಿತ್ತು. ರಾಜ್ಯ ಬಿಜೆಪಿ ಸರ್ಕಾರ ತೈಲ ವ್ಯಾಟ್​ ಕಡಿಮೆ ಮಾಡಿತ್ತು. ಕೇಂದ್ರ ಸರ್ಕಾರ ಪದೇಪದೆ ವ್ಯಾಟ್ ಹೆಚ್ಚಳ ಮಾಡಿತ್ತು. ಇದರಿಂದ ನಮ್ಮ ರಾಜ್ಯದ ಆದಾಯ ಕುಂಠಿತವಾಗಿತ್ತು. ಆದರೆ, ಕೇಂದ್ರದ BJP ಸರ್ಕಾರ ಕನ್ನಡಿಗರನ್ನ ವಂಚಿಸಿ, ಹೆಚ್ಚು ತೆರಿಗೆ ಸಂಗ್ರಹಿಸಿತ್ತು ಎಂದು ಸಿಎಂ ಆರೋಪಿಸಿದ್ದಾರೆ.

ಇದನ್ನೂ ಓದಿ:ಚುನಾವಣೆಗೂ ತೈಲ​ ದರ ಏರಿಕೆಗೂ ಸಂಬಂಧವಿಲ್ಲ: ಆರ್​ ಅಶೋಕ್​ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ತೈಲ ದರ ತಲಾ 9.48 ರೂ., 3.56 ರೂ.ತೆರಿಗೆ ಇತ್ತು. ಬಿಜೆಪಿ ಅವಧಿಯಲ್ಲಿ ದಾಖಲೆ ಮಟ್ಟದಲ್ಲಿ ತೆರಿಗೆ ಹೆಚ್ಚಳವಾಗಿದೆ. ಪೆಟ್ರೋಲ್​​ಗೆ 32.98 ರೂ. ಡೀಸೆಲ್​​ಗೆ 31.83 ರೂ ಹೆಚ್ಚಳ ಮಾಡಲಾಗಿದೆ. ಆದರೆ, 2021-22ರಲ್ಲಿ ಪೆಟ್ರೋಲ್ ಮೇಲಿನ ತೆರಿಗೆ ಕಡಿಮೆ ಮಾಡಿ, ಪೆಟ್ರೋಲ್ 13 ರೂ, ಡೀಸೆಲ್ 16 ರೂ ಕಡಿಮೆ ಮಾಡಿತ್ತು. ಸದ್ಯ ಪೆಟ್ರೋಲ್ ಮೇಲಿನ ತೆರಿಗೆ ಪೆಟ್ರೋಲ್ 19.9 ರೂಪಾಯಿದ್ದರೆ, ಡೀಸೆಲ್ ಮೇಲೆ 18.8 ರೂಪಾಯಿ ತೆರಿಗೆ ಇದೆ. ಕೇಂದ್ರ ಸರ್ಕಾರ ಜನರ ಒಳಿತಿಗೆ ಕಡಿಮೆ ಮಾಡಬೇಕು. ವ್ಯಾಟ್ ಹೆಚ್ಚಳದಿಂದ ಬಂದ ಹಣ ಅಭಿವೃದ್ಧಿ ಕೆಲಸಗಳಿಗೆ ಬಳಕೆ ಮಾಡುತ್ತೇವೆ. ಆ ಮೂಲಕ ಜವಾಬ್ದಾರಿ, ಸಮತೋಲಿತ ಆಡಳಿತ ನೀಡಲು ಬದ್ಧ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ