AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರಾಯಣಪುರದ ಸ್ಕಾಡಾ ಯೋಜನೆ ಉದ್ಘಾಟನೆ: ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟ ಎಂ.ಬಿ.ಪಾಟೀಲ್

ನಾರಾಯಣಪುರ ಎಡದಂಡೆ ಕಾಲುವೆ ವಿಸ್ತರಣೆ ನವೀಕರಣ ಹಾಗೂ ಆಧುನಿಕ ಕಾಮಗಾರಿಯನ್ನು ಪ್ರಧಾನಿ ಮೋದಿ ಅವರು ಜನವರಿ 19ರಂದು ಉದ್ಘಾಟಿಸಲಿದ್ದಾರೆ.

ನಾರಾಯಣಪುರದ ಸ್ಕಾಡಾ ಯೋಜನೆ ಉದ್ಘಾಟನೆ: ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟ ಎಂ.ಬಿ.ಪಾಟೀಲ್
ನಾರಾಯಣಪುರ ಎಡದಂಡೆ ಕಾಲುವೆ
TV9 Web
| Updated By: Rakesh Nayak Manchi|

Updated on:Jan 17, 2023 | 8:10 PM

Share

ವಿಜಯಪುರ: ನಾರಾಯಣಪುರದ ಸ್ಕಾಡಾ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜನವರಿ 19ರಂದು ಉದ್ಘಾಟಿಸಲಿದ್ದಾರೆ. ನಾರಾಯಣಪುರ ಎಡದಂಡೆ ಕಾಲುವೆ (Narayanapura Left Bank Canal) ವಿಸ್ತರಣೆ ನವೀಕರಣ ಹಾಗೂ ಆಧುನಿಕ ಕಾಮಗಾರಿಯನ್ನು ಉದ್ಘಾಟನೆಯನ್ನು ಮುಂದಿಟ್ಟುಕೊಂಡು ಟ್ವಿಟರ್ ಮೂಲಕ ಪ್ರಧಾನಿ ಮೋದಿಗೆ ಕೆಪಿಸಿಸಿ ಪ್ರಚಾರ ಸಮೀತಿ ಅಧ್ಯಕ್ಷ ಎಂ.ಬಿ ಪಾಟೀಲ್ (M.B.Patil) ಟಾಂಗ್ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಸ್ಕಾಡಾ ಮೊದಲ ಹಂತ ಹಾಗೂ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರ ಸ್ಕಾಡಾ 2 ಹಂತ ಕಾಮಗಾರಿ ಮಾಡಿತ್ತು ಎಂದು ಟ್ವೀಟ್ ಮಾಡಿ ಮೋದಿಗೆ ಟ್ಯಾಗ್ ಮಾಡಿದ್ದಾರೆ.

ಸಿದ್ದರಾಮಯ್ಯ ಅವರ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ 2014ರಲ್ಲಿ ಪ್ರಾರಂಭಿಸಿ 2017ರಲ್ಲಿ ಕಾರ್ಯರೂಪಗೊಳಿಸಿದ ನನ್ನ ಕನಸಿನ SCADA ಮೊದಲ ಹಂತದ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸುತ್ತಿರುವುದು ನನಗೆ ಹೆಮ್ಮೆ ತಂದಿದೆ ಎಂದು ಎಂ.ಬಿ.ಪಾಟೀಲ್ ಅವರು ಟ್ವೀಟ್ ಮಾಡಿದ್ದಾರೆ.

ಎರಡನೇ ಟ್ವೀಟ್ ಮಾಡಿದ ಪಾಟೀಲರು, SCADA-Phase2 ಕೂಡ ನಮ್ಮ ಸಮ್ಮಿಶ್ರ ಸರ್ಕಾರದಲ್ಲಿ ಪ್ರಾರಂಭಿಸಿದ್ದು. ರಾಜ್ಯ ಬಿಜೆಪಿ ಸರ್ಕಾರ ಯಾವುದೇ ನಿರ್ಣಾಯಕ ಅಭಿವೃದ್ಧಿ ಮಾಡದಿದ್ದರೂ ಹಿಂದಿನ ಸರ್ಕಾರದ ಕೆಲಸಗಳಿಗೆ ಮೈಲೇಜ್ ಪಡೆಯಲು ಹಿಂಜರಿಯುವುದಿಲ್ಲ ಎಂದು ಟಾಂಗ್ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಜ.19 ಬೆಳಗ್ಗೆ 11ಕ್ಕೆ ನವದೆಹಲಿಯಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್​ ಗ್ರಾಮದ ಹೆಲಿಪ್ಯಾಡ್​ಗೆ ತೆರಳುತ್ತಾರೆ. ಮಧ್ಯಾಹ್ನ 12 ಗಂಟೆಗೆ ಕೊಡೆಕಲ್​ ಗ್ರಾಮದಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ಮತ್ತು ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ, ಸೂರತ್-ಚೆನ್ನೈ ಎಕ್ಸ್​​ಪ್ರೆಸ್ ವೇ ಪ್ಯಾಕೇಜ್-3 ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

ಇದನ್ನೂ ಓದಿ: ಮಹಿಳೆ ನೋಡಿ ಟ್ರೋಲ್ ಆದ ಸಿದ್ದು; ಬಾಗಲಕೋಟೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕಾಧ್ಯಕ್ಷೆ ರಿಯಾಕ್ಷನ್ ಇಲ್ಲಿದೆ

ನಾರಾಯಣಪುರದ ಬಸವಸಾಗರ ಜಲಾಶಯವು ಯಾದಗಿರಿ, ವಿಜಯಪುರ, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಯ ರೈತರ ಜೀವನಾಡಿಯಾಗಿದೆ. ಈ ಜಲಾಶಯವು ಎಡದಂಡೆ ಮತ್ತು ಬಲದಂಡೆ ಎಂಬ ಎರಡು ಕಾಲುವೆಗಳನ್ನು ಹೊಂದಿದೆ. ಈ ಪೈಕಿ ಎಡದಂತೆ ಮೂಲಕ ರೈತರ ಜಮೀನಿಗೆ ನೀರು ಹರಿಸಲಾಗುತ್ತದೆ. ಎಡದಂಡೆಯು 78 ಕಿ.ಮೀ ವ್ಯಾಪ್ತಿ ಹೊಂದಿದ್ದು, 4.5 ಲಕ್ಷ ಹೆಕ್ಟೇರ್ ಪ್ರದೇಶ ನೀರಾವರಿ ಕ್ಷೇತ್ರ ಹೊಂದಿದೆ. ಇದಕ್ಕಾಗಿ ಸರ್ಕಾರವು ಸ್ಟೀಲ್ ಗೇಟ್​ಗಳನ್ನು ಹಾಕಿತ್ತು. ಆದರೆ ಈ ಗೇಟ್​ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ ಪರಿಣಾಮ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ಹರಿಸಲು ಸಾಧ್ಯವಾಗುತ್ತಿರಲಿಲ್ಲ.

ಗೇಟ್​ಗಳ ಸಮಸ್ಯೆ ನಿವಾರಣೆಗಾಗಿ ಈಗಿನ ಕೇಂದ್ರ ಸರಕಾರ ರಾಷ್ಟ್ರೀಯ ಜಲ ಮಿಷನ್ ಮೂಲಕ ರಾಜ್ಯ ಸರಕಾರದ ಕೃಷ್ಣಾ ಭಾಗ್ಯ ಜಲ ನಿಗಮದ ಅಡಿಯಲ್ಲಿ ನಾರಾಯಣಪುರ ಎಡದಂಡೆ ಕಾಲುವೆಗಳಿಗೆ ಜಿಐಎಸ್ ಆಧಾರಿತ ಸ್ವಯಂಚಾಲಿತ ಯಾಂತ್ರೀಕೃತ ಹೈಟೆಕ್ ತಂತ್ರಜ್ಞಾನ ಹೊಂದಿರುವ ಸ್ಕಾಡಾ ಗೇಟ್​ಗಳನ್ನು ಅಳವಡಿಕೆ ಮಾಡಿದೆ. ಕೇಂದ್ರ ಸರಕಾರ 70 ಪ್ರತಿಶತ ಹಾಗೂ ರಾಜ್ಯ ಸರಕಾರ 30 ಪ್ರತಿಶತ ಅನುದಾನದೊಂದಿಗೆ 1180 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಕಾಡಾ ಯೋಜನೆ ಮೂಲಕ ಒಟ್ಟು 4558 ಹೈಟೆಕ್ ಗೇಟ್ ಅಳವಡಿಕೆ ಮಾಡಲಾಗಿದೆ.

ಸ್ಯಾಡಾ ಗೇಟ್​ಗಳನ್ನು ನಾರಾಯಣಪುರದಲ್ಲಿ ಆಪರೇಟ್ ಮಾಡಲಾಗುತ್ತಿದ್ದು, ಕಂಪ್ಯೂಟರ್ ಮೂಲಕ ನಿರ್ವಹಣೆ ಮಾಡಲಾಗುತ್ತದೆ. ಗೇಟ್​ಗಳು ಸೋಲಾರ್ ಮೂಲಕ ಕಾರ್ಯ ನಿರ್ವಹಿಸಲಿದ್ದು, ಸೆನ್ಸಾರ್ ಮೂಲಕವೇ ನೀರು ಬಿಡುಗಡೆ ಮಾಡಲಾಗುತ್ತದೆ. ಸಿಸಿ ಕ್ಯಾಮೆರಾ, ವಯರ್​ಲೆಸ್ ಮೂಲಕ ನೀರಿನ ದತ್ತಾಂಶ ಮಾಹಿತಿ ಸಂಗ್ರಹ ಇತ್ಯಾದಿ ಸೌಲಭ್ಯಗಳು ಇರಲಿದೆ.

ರಾಜಕೀಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:06 pm, Tue, 17 January 23

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ