AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ, ಪ್ರವಾಹಕ್ಕೆ ಸಿಲುಕಿ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡುವುದಾಗಿ ಸಚಿವ ಪ್ರಭು ಚೌಹಾಣ್ ಘೋಷಣೆ

ರಾಜ್ಯ ಸರ್ಕಾರದಿಂದ ಜಿಲ್ಲಾಧಿಕಾರಿ ಫಂಡ್ನಲ್ಲಿ ಪರಿಹಾರ ನೀಡಲಾಗುತ್ತಿದೆ. ಕಾನೂನು ಚೌಕಟ್ಟಿನಲ್ಲಿ ಪರಿಹಾರ ಹಣ ನೀಡಲಾಗುತ್ತಿದೆ. ದೇಶಿ ಗೋವು ತಳಿ ರಕ್ಷಣೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಚರ್ಚೆ ನಡೆಸುತ್ತಿದ್ದೇನೆ -ಪ್ರಭು ಚೌಹಾಣ್

ಮಳೆ, ಪ್ರವಾಹಕ್ಕೆ ಸಿಲುಕಿ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡುವುದಾಗಿ ಸಚಿವ ಪ್ರಭು ಚೌಹಾಣ್ ಘೋಷಣೆ
ಪ್ರಭು ಚೌಹಾಣ್
TV9 Web
| Updated By: ಆಯೇಷಾ ಬಾನು|

Updated on: Jul 14, 2022 | 4:31 PM

Share

ವಿಜಯಪುರ: ರಾಜ್ಯದಲ್ಲಿ ಉಂಟಾದ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಮೃತಪಟ್ಟ ಜಾನುವಾರುಗಳಿಗೆ NDRF ನಿಯಮದಡಿ ಪರಿಹಾರ ನೀಡುವುದಾಗಿ ವಿಜಯಪುರದಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್(Prabhu Chauhan) ಘೋಷಿಸಿದ್ದಾರೆ. ಆಕಳು, ಎತ್ತು ಮೃತಪಟ್ಟಿದ್ದರೆ 30 ಸಾವಿರ ರೂಪಾಯಿ ಪರಿಹಾರ, ಬೇರೆ ಬೇರೆ ಜಾನುವಾರುಗಳಿಗೆ 10 ಸಾವಿರ, 5 ಸಾವಿರದಂತೆ ಪರಿಹಾರ ನೀಡುವುದಾಗಿ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಜಿಲ್ಲಾಧಿಕಾರಿ ಫಂಡ್ನಲ್ಲಿ ಪರಿಹಾರ ನೀಡಲಾಗುತ್ತಿದೆ. ಕಾನೂನು ಚೌಕಟ್ಟಿನಲ್ಲಿ ಪರಿಹಾರ ಹಣ ನೀಡಲಾಗುತ್ತಿದೆ ಎಂದರು. ಇನ್ನು ಇದೇ ವೇಳೆ ದೇಶಿ ಗೋ ರಕ್ಷಣೆ ಕುರಿತು ಮಾತನಾಡಿದ ಸಚಿವ ಪ್ರಭು ಚೌಹಾಣ್, ದೇಶಿ ಗೋವು ತಳಿ ರಕ್ಷಣೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಚರ್ಚೆ ನಡೆಸುತ್ತಿದ್ದೇನೆ. ದೇಶಿ ತಳಿ ರಕ್ಷಣೆಗೆ ನಿರ್ಭರ ಗೋಶಾಲೆ ನಿರ್ಮಿಸುತ್ತಿದ್ದೇವೆ. ಗೋಮಾತಾ ಸಹಕಾರ ಸಂಘ ಆರಂಭಿಸಿದ್ದೇವೆ. ಮುಖ್ಯಮಂತ್ರಿಗಳ ಪುಣ್ಯಕೋಟಿ ಯೋಜನೆ ಆರಂಭಿಸುತ್ತೇವೆ. ಹೀಗೆ ಹಲವಾರು ಯೋಜನೆ ಕೈಗೊಳ್ತಿದ್ದೇನೆ. ಗೋಮಾತೆ ಕಸಾಯಿಖಾನೆಗೆ ಹೋಗಬಾರದು ಅನ್ನೋದು ನಮ್ಮ ಗುರಿ ಎಂದು ವಿಜಯಪುರ ತಾಲೂಕಿನ ಬುರಣಾಪುರ ಗ್ರಾಮದ ಬಳಿ ಸರ್ಕಾರಿ ಗೋಶಾಲಾ ಉದ್ಘಾಟನೆ ಕಾರ್ಯಕ್ರಮದ ಬಳಿಕ ಸಚಿವ ಪ್ರಭು ಚೌಹಾಣ್ ಹೇಳಿದ್ರು.

ಬಕ್ರೀದ್ ವೇಳೆ ಗೋಹತ್ಯೆ ತಡೆದಿದ್ದೇವೆ ಇದೇ ವೇಳೆ ಬುರಣಾಪುರ ಗ್ರಾಮದಲ್ಲಿ ಮಾತನಾಡಿದ ಸಚಿವ ಪ್ರಭು ಚೌಹಾಣ್, ಬಕ್ರೀದ್ ದಿನ ಗೋಹತ್ಯೆ ತಡೆದಿದ್ದೇವೆ ಎಂದರು. ನನ್ನ ಗುರಿ ಒಂದೇ, ಅದು ಗೋವುಗಳ ರಕ್ಷಣೆ. ಶೇಕಡಾ 65 ರಿಂದ 70 ರಷ್ಟು ಹಸು ಕಸಾಯಿಖಾನೆಗೆ ಹೋಗಿಲ್ಲ. ಗೋಹತ್ಯಾ ನಿಷೇಧ ಕಾನೂನು ಜಾರಿಯಾದ ಮೇಲೆ 30 ಸಾವಿರಕ್ಕೂ ಅಧಿಕ ಹಸುಗಳ ರಕ್ಷಣೆ ಮಾಡಿದ್ದೇವೆ. ಅವುಗಳನ್ನ ಗೋಶಾಲೆಗಳಿಗೆ ಶಿಫ್ಟ್ ಮಾಡಿದ್ದೇವೆ. 900ಕ್ಕೂ ಅಧಿಕ ಕೇಸ್ ಬುಕ್ ಮಾಡಲಾಗಿದೆ. ಬಕ್ರೀದ್ ಒಂದೇ ದಿನ 700 ಗೋವು ರಕ್ಷಣೆ ಮಾಡಿದ್ದೇವೆ. 54 FIR ಮಾಡಿಸಿದ್ದೇನೆ, 58 ಅರೆಸ್ಟ್ ಮಾಡಿಸಿದ್ದೀನಿ. ಜಿಲ್ಲಾಡಳಿತ, ಪೋಲಿಸ್ ಇಲಾಖೆ ಸಹಕಾರದಿಂದ ಬಕ್ರೀದ್ ದಿನ ಗೋಹತ್ಯೆ ತಡೆದಿದ್ದೇವೆ ಎಂದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ