AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ, ಪ್ರವಾಹಕ್ಕೆ ಸಿಲುಕಿ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡುವುದಾಗಿ ಸಚಿವ ಪ್ರಭು ಚೌಹಾಣ್ ಘೋಷಣೆ

ರಾಜ್ಯ ಸರ್ಕಾರದಿಂದ ಜಿಲ್ಲಾಧಿಕಾರಿ ಫಂಡ್ನಲ್ಲಿ ಪರಿಹಾರ ನೀಡಲಾಗುತ್ತಿದೆ. ಕಾನೂನು ಚೌಕಟ್ಟಿನಲ್ಲಿ ಪರಿಹಾರ ಹಣ ನೀಡಲಾಗುತ್ತಿದೆ. ದೇಶಿ ಗೋವು ತಳಿ ರಕ್ಷಣೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಚರ್ಚೆ ನಡೆಸುತ್ತಿದ್ದೇನೆ -ಪ್ರಭು ಚೌಹಾಣ್

ಮಳೆ, ಪ್ರವಾಹಕ್ಕೆ ಸಿಲುಕಿ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡುವುದಾಗಿ ಸಚಿವ ಪ್ರಭು ಚೌಹಾಣ್ ಘೋಷಣೆ
ಪ್ರಭು ಚೌಹಾಣ್
TV9 Web
| Updated By: ಆಯೇಷಾ ಬಾನು|

Updated on: Jul 14, 2022 | 4:31 PM

Share

ವಿಜಯಪುರ: ರಾಜ್ಯದಲ್ಲಿ ಉಂಟಾದ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಮೃತಪಟ್ಟ ಜಾನುವಾರುಗಳಿಗೆ NDRF ನಿಯಮದಡಿ ಪರಿಹಾರ ನೀಡುವುದಾಗಿ ವಿಜಯಪುರದಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್(Prabhu Chauhan) ಘೋಷಿಸಿದ್ದಾರೆ. ಆಕಳು, ಎತ್ತು ಮೃತಪಟ್ಟಿದ್ದರೆ 30 ಸಾವಿರ ರೂಪಾಯಿ ಪರಿಹಾರ, ಬೇರೆ ಬೇರೆ ಜಾನುವಾರುಗಳಿಗೆ 10 ಸಾವಿರ, 5 ಸಾವಿರದಂತೆ ಪರಿಹಾರ ನೀಡುವುದಾಗಿ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಜಿಲ್ಲಾಧಿಕಾರಿ ಫಂಡ್ನಲ್ಲಿ ಪರಿಹಾರ ನೀಡಲಾಗುತ್ತಿದೆ. ಕಾನೂನು ಚೌಕಟ್ಟಿನಲ್ಲಿ ಪರಿಹಾರ ಹಣ ನೀಡಲಾಗುತ್ತಿದೆ ಎಂದರು. ಇನ್ನು ಇದೇ ವೇಳೆ ದೇಶಿ ಗೋ ರಕ್ಷಣೆ ಕುರಿತು ಮಾತನಾಡಿದ ಸಚಿವ ಪ್ರಭು ಚೌಹಾಣ್, ದೇಶಿ ಗೋವು ತಳಿ ರಕ್ಷಣೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಚರ್ಚೆ ನಡೆಸುತ್ತಿದ್ದೇನೆ. ದೇಶಿ ತಳಿ ರಕ್ಷಣೆಗೆ ನಿರ್ಭರ ಗೋಶಾಲೆ ನಿರ್ಮಿಸುತ್ತಿದ್ದೇವೆ. ಗೋಮಾತಾ ಸಹಕಾರ ಸಂಘ ಆರಂಭಿಸಿದ್ದೇವೆ. ಮುಖ್ಯಮಂತ್ರಿಗಳ ಪುಣ್ಯಕೋಟಿ ಯೋಜನೆ ಆರಂಭಿಸುತ್ತೇವೆ. ಹೀಗೆ ಹಲವಾರು ಯೋಜನೆ ಕೈಗೊಳ್ತಿದ್ದೇನೆ. ಗೋಮಾತೆ ಕಸಾಯಿಖಾನೆಗೆ ಹೋಗಬಾರದು ಅನ್ನೋದು ನಮ್ಮ ಗುರಿ ಎಂದು ವಿಜಯಪುರ ತಾಲೂಕಿನ ಬುರಣಾಪುರ ಗ್ರಾಮದ ಬಳಿ ಸರ್ಕಾರಿ ಗೋಶಾಲಾ ಉದ್ಘಾಟನೆ ಕಾರ್ಯಕ್ರಮದ ಬಳಿಕ ಸಚಿವ ಪ್ರಭು ಚೌಹಾಣ್ ಹೇಳಿದ್ರು.

ಬಕ್ರೀದ್ ವೇಳೆ ಗೋಹತ್ಯೆ ತಡೆದಿದ್ದೇವೆ ಇದೇ ವೇಳೆ ಬುರಣಾಪುರ ಗ್ರಾಮದಲ್ಲಿ ಮಾತನಾಡಿದ ಸಚಿವ ಪ್ರಭು ಚೌಹಾಣ್, ಬಕ್ರೀದ್ ದಿನ ಗೋಹತ್ಯೆ ತಡೆದಿದ್ದೇವೆ ಎಂದರು. ನನ್ನ ಗುರಿ ಒಂದೇ, ಅದು ಗೋವುಗಳ ರಕ್ಷಣೆ. ಶೇಕಡಾ 65 ರಿಂದ 70 ರಷ್ಟು ಹಸು ಕಸಾಯಿಖಾನೆಗೆ ಹೋಗಿಲ್ಲ. ಗೋಹತ್ಯಾ ನಿಷೇಧ ಕಾನೂನು ಜಾರಿಯಾದ ಮೇಲೆ 30 ಸಾವಿರಕ್ಕೂ ಅಧಿಕ ಹಸುಗಳ ರಕ್ಷಣೆ ಮಾಡಿದ್ದೇವೆ. ಅವುಗಳನ್ನ ಗೋಶಾಲೆಗಳಿಗೆ ಶಿಫ್ಟ್ ಮಾಡಿದ್ದೇವೆ. 900ಕ್ಕೂ ಅಧಿಕ ಕೇಸ್ ಬುಕ್ ಮಾಡಲಾಗಿದೆ. ಬಕ್ರೀದ್ ಒಂದೇ ದಿನ 700 ಗೋವು ರಕ್ಷಣೆ ಮಾಡಿದ್ದೇವೆ. 54 FIR ಮಾಡಿಸಿದ್ದೇನೆ, 58 ಅರೆಸ್ಟ್ ಮಾಡಿಸಿದ್ದೀನಿ. ಜಿಲ್ಲಾಡಳಿತ, ಪೋಲಿಸ್ ಇಲಾಖೆ ಸಹಕಾರದಿಂದ ಬಕ್ರೀದ್ ದಿನ ಗೋಹತ್ಯೆ ತಡೆದಿದ್ದೇವೆ ಎಂದರು.

ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ