AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಡಚಣ ತಾಲೂಕಿನ ಜಿಗಜಿವಣಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅವ್ಯವಸ್ಥೆ; ಚಿಕಿತ್ಸೆ ಇಲ್ಲದೆ ನರಳಾಡಿದ ಗರ್ಭಿಣಿ

ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಜಿಗಜಿವಣಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅವ್ಯವಸ್ಥೆ ತಾಂಡವಾಡುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಇಲ್ಲದೇ ಗರ್ಭಿಣಿಯ ನರಳಾಡುತ್ತಿದ್ದಾರೆ.

ಚಡಚಣ ತಾಲೂಕಿನ ಜಿಗಜಿವಣಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅವ್ಯವಸ್ಥೆ; ಚಿಕಿತ್ಸೆ ಇಲ್ಲದೆ ನರಳಾಡಿದ ಗರ್ಭಿಣಿ
ಪ್ರಾಥಮಿಕ ಆರೋಗ್ಯ ಕೇಂದ್ರ ಚಡಚಣ
TV9 Web
| Edited By: |

Updated on:May 24, 2022 | 10:53 AM

Share

ವಿಜಯಪುರ :ವಿಜಯಪುರ (Vijaypur) ಜಿಲ್ಲೆ ಚಡಚಣ ತಾಲೂಕಿನ ಜಿಗಜಿವಣಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (Primary Health Center) ಅವ್ಯವಸ್ಥೆ ತಾಂಡವಾಡುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಇಲ್ಲದೆ ಗರ್ಭಿಣಿಯರು ನರಳಾಡುತ್ತಿದ್ದಾರೆ. ಹೆರಿಗೆ ನೋವಿನಿಂದ ಗರ್ಭಿಣಿಯರು ನರಳುತ್ತಿದ್ದರೂ ವೈದ್ಯರು ಆಸ್ಪತ್ರೆಗೆ‌ ಬರುತ್ತಿಲ್ಲ. ನಿನ್ನೆ (ಮೇ 23) ರಂದು ಮದ್ಯಾಹ್ನ ಗರ್ಭಿಣಿ ಪೂರ್ಣಿಮಾ ಹೊನಕಾಂಡೆ ಹೆರಿಗೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದಿದ್ದರು. ಪೂರ್ಣಿಮಾ ಹೆರಿಗೆ ನೋವಿನಿಂದ ಬಳಲುತ್ತಿದ್ದು, ಸಾಯಂಕಾಲದವರೆಗೂ ಆಸ್ಪತ್ರೆಯಲ್ಲಿ‌ ಚಿಕಿತ್ಸೆಗಾಗಿ  ಗರ್ಭಿಣಿ ಹಾಗೂ ಆಕೆಯ ಪೋಷಕರು ಕಾಯ್ದರು ವೈದ್ಯರು ಬರಲಿಲ್ಲ. ಗರ್ಭಿಣಿ ಪೂರ್ಣಿಮಾ ಆಸ್ಪತ್ರೆ ‌ನೆಲದ ಮೇಲೆ ಕುಳಿತು‌ ನರಳಾಡಿದ್ದಾರೆ.

ಇದನ್ನು ಓದಿ: ಪ್ರೋಟೀನ್ ಪೌಡರ್ ಅತಿಯಾಗಿ ಬಳಸ್ತೀರಾ, ಈ ಅಡ್ಡಪರಿಣಾಮಗಳ ಬಗ್ಗೆ ಎಚ್ಚರವಿರಲಿ

ಈ ವೇಳೆ ಆಸ್ಪತ್ರೆಯಲ್ಲಿದ್ದ ಇಬ್ಬರು ಸಿಬ್ಬಂದಿಗಳು ತಾವು‌ ನಿಸ್ಸಾಯಕರು ಎಂಬಂತೆ  ಹೇಳಿಕೆ ನೀಡಿದ್ದಾರೆ. ಸಾಯಂಕಾಲ‌ ಆರು ಗಂಟೆವರೆಗೂ ಆಸ್ಪತ್ರೆಯಲ್ಲಿ ಕಾಯ್ದರೂ ವೈದ್ಯರು ಬಾರದಿದ್ದಕ್ಕೆ ಚಡಚಣದ ಸಮುದಾಯ ಆರೋಗ್ಯ ‌ಕೇಂದ್ರಕ್ಕೆ ಗರ್ಭಿಣಿ ಪೂರ್ಣಿಮಾ ತೆರಳಿದ್ದಾರೆ. ಅಂಬ್ಯುಲೆನ್ಸ್ ಮ‌ೂಲಕ ಸಮುದಾಯ ಆರೋಗ್ಯ ‌ಕೇಂದ್ರಕ್ಕೆ ತೆರಳುವಾಗ ಮಾರ್ಗ ಮಧ್ಯೆ ಅಂಬ್ಯುಲೆನ್ಸ್ ನಲ್ಲೇ ಹೆರಿಗೆ ಆಗಿದೆ. ಅಂಬ್ಯುಲೆನ್ಸ್ ನಲ್ಲಿ ಪೂರ್ಣಿಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಇದನ್ನೂ ಓದಿ
Image
Kabzaa Movie: ‘ಕಬ್ಜ’ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಬಾಲಿವುಡ್ ಹೀರೋಯಿನ್​? ನಿರ್ದೇಶಕರು ಹೇಳಿದ್ದಿಷ್ಟು..
Image
ಮದರಸಾಗಳು ಆರ್​ಎಸ್​ಎಸ್​ ಶಾಖೆಗಳಂತೆ ಅಲ್ಲ: ಅಸ್ಸಾಂ ಸಿಎಂಗೆ ತಿರುಗೇಟು ಕೊಟ್ಟ ಅಸಾದುದ್ದೀನ್ ಓವೈಸಿ
Image
Yogaraj Bhat: ಶಿವಣ್ಣ- ಪ್ರಭುದೇವ ಕಾಂಬಿನೇಷನ್​ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿರುವ ಯೋಗರಾಜ್ ಭಟ್; ಚಿತ್ರೀಕರಣ ಯಾವಾಗ?
Image
ಹುಬ್ಬಳ್ಳಿಯಲ್ಲಿ ಲಾರಿ, ಖಾಸಗಿ ಬಸ್ ಅಪಘಾತ; ಸಂತಾಪ ಸೂಚಿಸಿದ ಹೆಚ್​ಡಿಕೆ

ಇದನ್ನು ಓದಿ: ಕಲಬುರಗಿ ಬಹಮನಿ ಕೋಟೆಯಲ್ಲಿ ಸೋಮೇಶ್ವರ ದೇಗುಲದ ಕುರುಹು ವಿಚಾರ; ಟಿವಿ9ಗೆ ಮಾಹಿತಿ ನೀಡಿದ ಇತಿಹಾಸ ಪ್ರಾಧ್ಯಾಪಕ

ತಾಯಿ‌ ಹಾಗೂ ಮಗುವಿಗೆ ಚಡಚಣದ ಸಮುದಾಯ ಆರೋಗ್ಯ‌ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಾಯಿ ಮಗು ಆರೋಗ್ಯವಾಗಿದ್ದಾರೆಂದು ವೈದ್ಯರು ಮಾಹಿತಿ ನೀಡಿದ್ದಾರೆ. ಜಿಗಜಿವಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿಗಳ ವರ್ತನೆಗೆ ಗರ್ಭಿಣಿ ಪೋಷಕರು ತೀವ್ರ ಅಸಮಾಧಾನ ವ್ಯಕ್ತಪಡಿದ್ದಾರೆ. ಕರ್ತವ್ಯ ‌ನಿರ್ಲಕ್ಷ್ಯ ಆರೋಪದ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿಗಳು (District Health Officer) ಕ್ರಮ‌ ತೆಗೆದುಕೊಳ್ಳಬೇಕೆಂದು ಪೋಷಕರು ಒತ್ತಾಯ ಮಾಡುತ್ತಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:40 am, Tue, 24 May 22

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!