AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂದಗಿ ಉಪ ಚುನಾವಣೆ ಅಖಾಡಲ್ಲಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಆಸ್ತಿ ವಿವರ ಇಲ್ಲಿದೆ

ಉಪ ಸಮರಕ್ಕೆ ನಾಮಪತ್ರ ಸಲ್ಲಿಸಿರುವ ಪ್ರಮುಖ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಆಸ್ತಿ ವಿವರ ಇಲ್ಲಿದೆ

ಸಿಂದಗಿ ಉಪ ಚುನಾವಣೆ ಅಖಾಡಲ್ಲಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಆಸ್ತಿ ವಿವರ ಇಲ್ಲಿದೆ
ಅಶೋಕ್ ಮನಗೂಳಿ, ನಾಜಿಯಾ ಅಂಗಡಿ, ರಮೇಶ್ ಭೂಸನೂರ
TV9 Web
| Edited By: |

Updated on:Oct 10, 2021 | 2:49 PM

Share

ವಿಜಯಪುರ: ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಅಬ್ಬರ ಜೋರಾಗಿದೆ. ಜೆಡಿಎಸ್ ಶಾಸಕ ಎಂ ಸಿ ಮನಗೂಳಿ ಅವರ ನಿಧನದಿಂದ ತೆರವಾಗಿರುವ ಶಾಸಕ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ವಿವಿಧ ಪಕ್ಷಗಳ ಅಭ್ಯರ್ಥಿಗಳು ಹಾಗೂ ಕೆಲ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಉಪ ಸಮರಕ್ಕೆ ನಾಮಪತ್ರ ಸಲ್ಲಿಸಿರುವ ಪ್ರಮುಖ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಆಸ್ತಿ ವಿವರ ಇಲ್ಲಿದೆ.

ರಮೇಶ್ ಭೂಸನೂರ ಆಸ್ತಿ ವಿವರ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಬಳಿ 3 ಲಕ್ಷ ರೂಪಾಯಿ, ಅವರ ಪತ್ನಿ ಲಲಿತಾಬಾಯಿ ಬಳಿ ಒಂದು ಲಕ್ಷ ರೂಪಾಯಿ ನಗದು ಹಣವಿದೆ. ರಮೇಶ್ ಭೂಸನೂರು ಬಳಿ 9 ಲಕ್ಷ ರೂ. ಮೌಲ್ಯದ 200 ಗ್ರಾಂ ಚಿನ್ನಾಭರಣಗಳಿವೆ. ಅವರ ಪತ್ನಿ ಲಲಿತಾಬಾಯಿ 4 ಡೈಮಂಡ್ ಹಾಗೂ 500 ಗ್ರಾಂ ಚಿನ್ನದ ಆಭರಣವಿದೆ. ಒಟ್ಟು ಮೌಲ್ಯ 25 ಲಕ್ಷ ಎಂದು ನಾಮಪತ್ರದ ಜೊತೆಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ನಮೂದಿಸಿದ್ದಾರೆ.

2010 ರಲ್ಲಿ ಸುಮಾರು 7 ಲಕ್ಷ ರೂ. ಮೌಲ್ಯದ ಮಾರುತಿ ಸ್ವೀಪ್ಟ್ ಕಾರು ಹೊಂದಿದ್ದ ಭೂಸನೂರು, ಈಗ 36 ಲಕ್ಷ ರೂಪಾಯಿಗಳ ಫಾರ್ಚುನರ್ ಕಾರು ಹೊಂದಿದ್ದಾರೆ. 2010ರಲ್ಲಿ ಸ್ಕೂಟಿ ಹೊಂದಿದ್ದ ಪತ್ನಿ ಲಲಿತಾಬಾಯಿ ಈಗ 14 ಲಕ್ಷ ರೂಪಾಯಿ ಬೆಲೆಬಾಳುವ ಹೋಂಡಾ ಕಾರು ಹೊಂದಿದ್ದಾರೆ. 2010ರಲ್ಲಿ ಪಲ್ಸರ್ ಬೈಕ್ ಹೊಂದಿದ್ದ ಭೂಸನೂರ ಪುತ್ರ ಮಂಜುನಾಥ ಈಗಾ 1.60 ಲಕ್ಷ ಮೌಲ್ಯದ ಹೋಂಡಾ ಸಿಬಿ ಬೈಕ್ ಹೊಂದಿದ್ದಾರೆ. ಮಗನ ಬಳಿ ನೂರು ಗ್ರಾಂ ಹಾಗೂ ರಮೇಶ್ ಭೂಸನೂರ ತಂದೆ ಬಾಳಪ್ಪ ಅವರ ಬಳಿ 50 ಗ್ರಾಂ ಚಿನ್ನಾಭರಣವಿದೆ ಎಂದು ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ರಮೇಶ್ ಭೂಸನೂರು ಒಟ್ಟು ಸ್ಥಿರಾಸ್ತಿ ಹಾಗೂ ಚರಾಸ್ತಿ ಸೇರಿ 1 ಕೋಟಿ 44 ಲಕ್ಷ 67 ಸಾವಿರ ರೂ ಮೌಲ್ಯವಿದ್ದು, ಪತ್ನಿ ಲಲಿತಾಬಾಯಿ ಬಳಿ 1 ಕೋಟಿ 40 ಲಕ್ಷ 44 ಸಾವಿರ ರೂಪಾಯಿ ಬೆಲೆ ಬಾಳುವ ಸ್ಥಿರಾಸ್ತಿ ಹಾಗೂ ಚರಾಸ್ತಿ ಇದೆ. ಜೊತೆಗೆ ರಮೇಶ್ ಭೂಸನೂರು 29,16,725 ರೂಪಾಯಿ ಸಾಲ ಹೊಂದಿದ್ದರೆ, ಪತ್ನಿಯ ಹೆಸರಲ್ಲಿ 3,64,390 ರೂಪಾಯಿ ಸಾಲವಿದೆ.

ಕಾಂಗ್ರೆಸ್ ಅಭ್ಯರ್ಥಿ ಆಸ್ತಿ ವಿವರ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ಅಶೋಕ್ ಮನಗೂಳಿ ಒಟ್ಟು 6 ಕೋಟಿ 36 ಲಕ್ಷ ರೂಪಾಯಿ ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ನಾಗರತ್ನಾ ಬಳಿ 3 ಲಕ್ಷ 25 ಸಾವಿರ ಸ್ಥಿರಾಸ್ತಿಯಿದೆ. ಅಶೋಕ್ ಮನಗೂಳಿ ಬಳಿ ಒಟ್ಟು 33, 46,765 ರೂಪಾಯಿ ಮೌಲ್ಯದ ಚರಾಸ್ತಿ ಹಾಗೂ ಪತ್ನಿ ನಾಗರತ್ನಾ ಮನಗೂಳಿ ಬಳಿ 60 ಲಕ್ಷ 52 ಸಾವಿರ 713 ರೂಪಾಯಿ ಮೌಲ್ಯದ ಚರಾಸ್ತಿಯಿದೆ. ಇನ್ನು ಅಶೋಕ್ ಮನಗೂಳಿ 17 ಲಕ್ಷ ಮೌಲ್ಯದ ಟಾಟಾ ಸಫಾರಿ ಕಾರ್ ಹೊಂದಿದ್ದರೆ, ಪತ್ನಿ 45 ಲಕ್ಷ ರೂಪಾಯಿಗಳ ಪೋರ್ಡ್ ಕಾರು ಹೊಂದಿದ್ದಾರೆ. ಇದರ ಜೊತೆಗೆ ಅಶೋಕ್ ಮನಗೂಳಿ 86,65,416 ರೂ ಸಾಲ ಹೊಂದಿದ್ದಾರೆ. ಪತ್ನಿ ನಾಗರತ್ನಾ 37,55,215 ಸಾಲ ಮಾಡಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಆಸ್ತಿ ವಿವರ ಜೆಡಿಎಸ್ ಅಭ್ಯರ್ಥಿಯಾಗಿರುವ ನಾಜಿಯಾ ಅಂಗಡಿ ಬಳಿ ಎರಡು ಲಕ್ಷ ನಗದು ಹಾಗೂ ಪತಿ ಶಕೀಲ್ ಅಂಗಡಿ ಬಳಿ 50 ಸಾವಿರ ನಗದು ಹಣವಿದೆ. ಹಾಗೂ ಬ್ಯಾಂಕ್ ಉಳಿತಾಯ ಖಾತೆಯಲ್ಲಿ 4,24,061 ರೂಪಾಯಿಗಳಿದ್ದರೆ, ಪತಿ ಶಕೀಲ್ ಅಂಗಡಿ ಬ್ಯಾಂಕ್ ಖಾತೆಯಲ್ಲಿ 1,65,112 ರೂಪಾಯಿಗಳಿವೆ. ನಾಜಿಯಾ ಅಂಗಡಿ 24 ಲಕ್ಷ ರೂಪಾಯಿ ಮೌಲ್ಯದ 520 ಗ್ರಾಂ ಚಿನ್ನಾಭರಣ, ಒಂದು ಟಾಟಾ ಸಫಾರಿ ಜೀಪ್ ಸೇರಿದಂತೆ ಒಟ್ಟು 49 ಲಕ್ಷ 85 ಸಾವಿರ ಮೌಲ್ಯದ ಚರಾಸ್ತಿಯನ್ನು ಹಾಗೂ 24 ಲಕ್ಷ ಮೌಲ್ಯದ ಸ್ಥಿರಾಸ್ತಿಯನ್ನು ಹೊಂದಿದ್ದಾರೆ. ಯಾವುದೇ ಎಲ್ಐಸಿ ಹೊಂದಿಲ್ಲ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಿದ್ದಾರೆ. ತಾವು ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದು, ಪತಿ ಸರ್ಕಾರಿ ನೌಕರರಾಗಿದ್ದಾರೆ ಎಂದು ನಮೂದಿಸಿದ್ದಾರೆ.

ಇದನ್ನೂ ಓದಿ

ಉಪ ಚುನಾವಣೆಯಲ್ಲಿ ಜೆಡಿಎಸ್ ಸೋಲಿಸಲು ಕಾಂಗ್ರೆಸ್ ಷಡ್ಯಂತ್ರ: ಎಚ್​ಡಿ ಕುಮಾರಸ್ವಾಮಿ ಅರೋಪ

ಸಿಂದಗಿ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ಭೂಸನೂರ ಹೆಸರು ಘೋಷಣೆ

Published On - 2:48 pm, Sun, 10 October 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?