AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ಇಂಡಿ ತಾಲೂಕು ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಲಂಚಾವತಾರ! ದೃಶ್ಯ ಮೊಬೈಲ್​ನಲ್ಲಿ ಸೆರೆ

ಸರ್ಕಾರ ನಿಗದಿಪಡಿಸಿದ ಶುಲ್ಕದ ಹೊರತಾಗಿ ಲಂಚ ನೀಡಿದರೆ ಮಾತ್ರ ಸಾರ್ವಜನಿಕರ ಕೆಲಸವಾಗುತ್ತದೆ. ಏಜೆಂಟರು ಕಚೇರಿಯಲ್ಲಿ ಇಷ್ಟಿಷ್ಟು ಹಣ ಎಂದು ದರ ಕೂಡಾ ಫಿಕ್ಸ್ ಮಾಡಿದ್ದಾರೆ. ಲಂಚ ನೀಡದಿದ್ದರೆ ಆಧಿಕಾರಿಗಳು ಮತ್ತು ಏಜೆಂಟರು ಇಲ್ಲಸಲ್ಲದ ನೆಪ ಹೇಳುತ್ತಾರೆ.

ವಿಜಯಪುರ ಇಂಡಿ ತಾಲೂಕು ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಲಂಚಾವತಾರ! ದೃಶ್ಯ ಮೊಬೈಲ್​ನಲ್ಲಿ ಸೆರೆ
ಏಜೆಂಟರು ಲಂಚ ಕೇಳುವುದು ಮತ್ತು ಲಂಚ ಪಡೆಯುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ
TV9 Web
| Edited By: |

Updated on:Jun 02, 2022 | 10:22 AM

Share

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕು ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಲಂಚಾವತಾರ (Bribery) ಜೋರಾಗಿ ನಡೆಯುತ್ತಿದ್ದು, ದಲ್ಲಾಳಿಗಳು (Brokers) ಸಬ್ ರೆಜಿಸ್ಟಾರ್ ಕಚೇರಿಯಲ್ಲಿಯೇ ಬೀಡು ಬಿಟ್ಟಿದ್ದಾರೆ. ಅಧಿಕಾರಿ ಮೊಹಮ್ಮದರಫಿ ಪಟೇಲ್ ಎದುರಲ್ಲೇ ಅವ್ಯವಹಾರ ನಡೆದಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಇನ್ನು ಯಾವುದೇ ಕೆಲಸ ಮಾಡಬೇಕಾದರೂ ಲಂಚ ನೀಡಲೇಬೇಕಾದ ಸ್ಥಿತಿ ನಿರ್ಮಾಣವಾಗಿದ್ದು, ಹಕ್ಕು ಪತ್ರ, ಖರೀದಿ ಪತ್ರ, ಮಾರ್ಡಗೇಜ್ ಮಾಡುವುದು, ಭಕ್ಷೀಸ್ ಪತ್ರ, ವಾಟ್ನಿ ಪತ್ರ, ಹಿಸಾರ್ ಪತ್ರ ಸೇರಿ ಇತರೆ ಕೆಲಸಗಳಿಗೆ ಲಂಚ ನೀಡಬೇಕು ಎಂಬ ಆರೋಪ ಕೇಳಿಬಂದಿದೆ.

ಸರ್ಕಾರ ನಿಗದಿಪಡಿಸಿದ ಶುಲ್ಕದ ಹೊರತಾಗಿ ಲಂಚ ನೀಡಿದರೆ ಮಾತ್ರ ಸಾರ್ವಜನಿಕರ ಕೆಲಸವಾಗುತ್ತದೆ. ಏಜೆಂಟರು ಕಚೇರಿಯಲ್ಲಿ ಇಷ್ಟಿಷ್ಟು ಹಣ ಎಂದು ದರ ಕೂಡಾ ಫಿಕ್ಸ್ ಮಾಡಿದ್ದಾರೆ. ಲಂಚ ನೀಡದಿದ್ದರೆ ಆಧಿಕಾರಿಗಳು ಮತ್ತು ಏಜೆಂಟರು ಇಲ್ಲಸಲ್ಲದ ನೆಪ ಹೇಳುತ್ತಾರೆ. ಲಂಚ ನೀಡಿದರೆ ನಾಳೆಯೇ ಕೆಲಸ ಮಾಡೋದಾಗಿ ಏಜೆಂಟರ್​ಗಳು ಹೇಳುತ್ತಾರೆ ಎಂದು ಆರೋಪಿಸಿರುವ ಸಾರ್ವಜನಿಕರು, ಕೂಡಲೆ ಇದಕ್ಕೆಲ್ಲಾ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳದ ಇಂದ್ರಕಿಲಾ ಬೆಟ್ಟದ ವ್ಯಾಪ್ತಿಯಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ಆರೋಪ; ಕಾಂಗ್ರೆಸ್ ಮುಖಂಡ ಕೆ.ಎಂ ಸೈಯದ್ ಪತ್ನಿ ವಿರುದ್ಧ ಎಫ್ಐಆರ್ ದಾಖಲು

ಇದನ್ನೂ ಓದಿ
Image
Mental Health: ಮಾನಸಿಕ ಅಸಮತೋಲನ ನಿಮ್ಮ ಸಂಬಂಧವನ್ನು ಹಾಳು ಮಾಡುತ್ತಿದೆಯೇ?
Image
ಕೊಪ್ಪಳದ ಇಂದ್ರಕಿಲಾ ಬೆಟ್ಟದ ವ್ಯಾಪ್ತಿಯಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ಆರೋಪ; ಕಾಂಗ್ರೆಸ್ ಮುಖಂಡ ಕೆ.ಎಂ ಸೈಯದ್ ಪತ್ನಿ ವಿರುದ್ಧ ಎಫ್ಐಆರ್ ದಾಖಲು
Image
Rajya Sabha Polls 2022: ರಾಜಸ್ಥಾನದಲ್ಲಿ ಆಪರೇಷನ್ ಕಮಲದ ಭೀತಿ; ಕಾಂಗ್ರೆಸ್​ನ ಶಾಸಕರು ಇಂದು ರೆಸಾರ್ಟ್​ಗೆ ಶಿಫ್ಟ್​
Image
ಡಾ. ರಾಜ್​ ಭೇಟಿ ಮಾಡಿದ್ದ ದ್ರಾವಿಡ್​, ಶ್ರೀನಾಥ್​, ಕುಂಬ್ಳೆ; ಅಪರೂಪದ ಮಾಹಿತಿ ತೆರೆದಿಟ್ಟ ರಾಘಣ್ಣ

ಇನ್ನು ಏಜೆಂಟರು ಲಂಚ ಕೇಳುವುದು ಮತ್ತು ಲಂಚ ಪಡೆಯುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಮೊಹಮ್ಮದರಫಿ ಪಟೇಲ್ ಸಹೋದರ ಸಯ್ಯದ್ ಪಟೇಲ್ ಕಚೇರಿ ಸಿಬ್ಬಂದಿ ಕೂರುವ ಜಾಗದಲ್ಲಿ ಬಂದು ದರ್ಬಾರ್ ಮಾಡುತ್ತಾನೆ. ಮಧ್ಯಾಹ್ನದ ವೇಳೆ ಕಚೇರಿಯೊಳಗೆ ಬಂದು ಸಯ್ಯದ್ ಠಿಕಾಣಿ ಹೂಡುತ್ತಾನೆ. ತಮಗೆ ಬೇಕಾದವರ ಕೆಲಸಗಳನ್ನು ಮಾಡುತ್ತಾನೆ. ಇದೆಲ್ಲವನ್ನು ಸಬ್ ರೆಜಿಸ್ಟಾರ್ ಪಟೇಲ್ ಸಬ್ ರೆಜಿಸ್ಟಾರ್ ಪಟೇಲ್ ನೋಡದಂತಿದ್ದಾನೆ ಎಂದು ಜನರು ಗಂಭೀರವಾಗಿ ಆರೋಪಿಸಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:21 am, Thu, 2 June 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು