AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದ ಚಡಚಣದ ಎಸ್​ಬಿಐ ಬ್ಯಾಂಕ್​​ನಲ್ಲಿ ದರೋಡೆ; ಮ್ಯಾನೇಜರನ್ನು ಕಟ್ಟಿಹಾಕಿ 8 ಕೋಟಿ ರೂ., 50 ಕೆಜಿ ಚಿನ್ನ ಕಳವು

ವಿಜಯಪುರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಂದು ಹಾಡಹಗಲೇ ಎಸ್​ಬಿಐ ಬ್ಯಾಂಕ್​ಗೆ ನುಗ್ಗಿದ ಐವರು ದರೋಡೆಕೋರರು ಬ್ಯಾಂಕ್ ಮ್ಯಾನೇಜರ್, ಸಿಬ್ಬಂದಿಯನ್ನು ಕಟ್ಟಿಹಾಕಿ ಸುಮಾರು 8 ಕೋಟಿ ರೂ. ಹಣ ಹಾಗೂ 50 ಕೆಜಿಗೂ ಅಧಿಕ ಚಿನ್ನವನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ. ಈ ಘಟನೆ ಚಡಚಣದ ಸುತ್ತಲೂ ಆತಂಕ ಮೂಡಿಸಿದೆ.

ವಿಜಯಪುರದ ಚಡಚಣದ ಎಸ್​ಬಿಐ ಬ್ಯಾಂಕ್​​ನಲ್ಲಿ ದರೋಡೆ; ಮ್ಯಾನೇಜರನ್ನು ಕಟ್ಟಿಹಾಕಿ 8 ಕೋಟಿ ರೂ., 50 ಕೆಜಿ ಚಿನ್ನ ಕಳವು
Sbi
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Sep 16, 2025 | 10:29 PM

Share

ವಿಜಯಪುರ, ಸೆಪ್ಟೆಂಬರ್ 16: ವಿಜಯಪುರ (Vijayapura) ಜಿಲ್ಲೆಯ ಚಡಚಣದ ಎಸ್‌ಬಿಐ ಬ್ಯಾಂಕ್‌ನಲ್ಲಿ (SBI Bank) ದರೋಡೆ ನಡೆದಿರುವುದು ಬೆಳಕಿಗೆ ಬಂದಿದೆ. ಈ ವೇಳೆ ದರೋಡೆಕೋರರು 8 ಕೋಟಿ ನಗದು, ಸುಮಾರು 50 ಕೆ.ಜಿಗೂ ಹೆಚ್ಚು ಚಿನ್ನವನ್ನು ಕಳವು ಮಾಡಿರುವ ಶಂಕೆ ವ್ಯಕ್ತವಾಗಿದೆ. ಪಿಸ್ತೂಲ್​, ಮಾರಕಾಸ್ತ್ರಗಳೊಂದಿಗೆ ಬಂದಿದ್ದ 5ಕ್ಕೂ ಹೆಚ್ಚು ದರೋಡೆಕೋರರು ಈ ಕೃತ್ಯ ಎಸಗಿದ್ದಾರೆ. ಬ್ಯಾಂಕ್​ನ ಮ್ಯಾನೇಜರ್‌, ಕ್ಯಾಶಿಯರ್‌, ಸಿಬ್ಬಂದಿಯ ಕೈಕಾಲುಗಳನ್ನು ಕಟ್ಟಿಹಾಕಿ, ಅವರನ್ನು ರೂಂನಲ್ಲಿ ಕೂಡಿ ಹಾಕಿ ದರೋಡೆ ನಡೆಸಿದ್ದಾರೆ.

ಮಹಾರಾಷ್ಟ್ರದ ದರೋಡೆಕೋರರ ಗ್ಯಾಂಗ್ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ, ಪೊಲೀಸರು ಮಹಾರಾಷ್ಟ್ರವನ್ನು ಸಂಪರ್ಕಿಸುವ ರಸ್ತೆಗಳಿಗೆ ನಾಕಾ ಬಂಧಿ ಹಾಕಿದ್ದಾರೆ. ವಿಜಯಪುರ ಎಸ್‌ಪಿ ಲಕ್ಷ್ಮಣ ನಿಂಬರಗಿ ಹಾಗೂ ಆಧಿಕಾರಿಗಳು ಆ ಸ್ಥಳದಲ್ಲೇ ಬೀಡುಬಿಟ್ಟಿದ್ದರು. ಪೊಲೀಸರು ಬ್ಯಾಂಕ್‌ನಲ್ಲಿದ್ದ ಸಿಸಿ ಕ್ಯಾಮರಾಗಳ ದೃಶ್ಯ ಪರಿಶೀಲಿಸಿದ್ದಾರೆ. 8 ಕೋಟಿ ನಗದು, ಸುಮಾರು 50 ಕೆ.ಜಿಗೂ ಹೆಚ್ಚು ಚಿನ್ನ ದರೋಡೆಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆಯಿಂದಾಗಿ ಎಸ್​ಬಿಐ ಬ್ಯಾಂಕ್ ನಲ್ಲಿ ಚಿನ್ನಾಭರಣವನ್ನು ಇಟ್ಟ ಗ್ರಾಹಕರಲ್ಲಿ ಆತಂಕ ಮನೆಮಾಡಿದೆ.

ಇದನ್ನೂ ಓದಿ: Video: ಡೆಲಿವರಿ ಬಾಯ್ ಬಟ್ಟೆ ತೊಟ್ಟು ಆಭರಣದ ಅಂಗಡಿ ದರೋಡೆ, 30 ಲಕ್ಷ ರೂ. ಮೌಲ್ಯದ ಒಡವೆಗಳ ಕಳವು

ಹಣ ಮತ್ತು ಚಿನ್ನ ಕಳ್ಳತನವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಹಕರು ಇಂದು ಸಂಜೆಯವರೆಗೂ ಎಸ್​ಬಿಐ ಬ್ಯಾಂಕ್ ಎದುರು ಜಮಾವಣೆಯಾಗಿದ್ದಾರೆ. ಜನರನ್ನು ಚದುರಿಸಲು ಪೊಲೀಸರು ಪರದಾಡಬೇಕಾಯಿತು. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 5ಕ್ಕೂ ಅಧಿಕ ಮುಸುಕುಧಾರಿ ದರೋಡೆಕೋರರಿಂದ ಕೃತ್ಯ ನಡೆದಿದೆ. ಬ್ಯಾಂಕ್ ಆಧಿಕಾರಿಗಳು ನಿಖರವಾಗಿ ಮಾಹಿತಿ ನೀಡಿದ ಬಳಿಕವಷ್ಟೇ ದರೋಡೆಯಾದ ನಗದು ಹಾಗೂ ಚಿನ್ನಾಭರಣ ಮಾಹಿತಿ ಲಭ್ಯವಾಗಲಿದೆ. ಬ್ಯಾಂಕ್ ನಲ್ಲಿದ್ದ ಸಿಸಿ ಕ್ಯಾಮೆರಾ ಹಾರ್ಡ್ ಡಿಸ್ಕ್ ವಶಕ್ಕೆ ಪಡೆದ ಪೊಲೀಸರು ಸುತ್ತಮುತ್ತಲ ಸಿಸಿ ಕ್ಯಾಮೆರಾಗಳ ಪರಿಶೀಲನೆಯಲ್ಲಿ ನಿರತರಾಗಿದ್ದಾರೆ. ಈ ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳನ್ನು ಕರೆಸಲು ಸೂಚಿಸಲಾಗಿದೆ.

ಇದನ್ನೂ ಓದಿ: ವಿಜಯಪುರ: ಅಕ್ರಮ ಸಂಬಂಧಕ್ಕಾಗಿ ಪ್ರೇಮಿಯ ಕೈಯಲ್ಲೇ ಪತಿಯ ಕೊಲೆ ಮಾಡಿಸಲೆತ್ನಿಸಿದ ಪತ್ನಿ, ರಹಸ್ಯ ಬಯಲಾಗಿದ್ದೇ ರೋಚಕ

ಚಡಚಣ ಪಟ್ಟಣದ ಎಸ್ ಬಿ ಐ ಬ್ಯಾಂಕ್ ದರೋಡೆಕೋರರು ಮಹಾರಾಷ್ಟ್ರದತ್ತ ಪರಾರಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಚಡಚಣ ಪಟ್ಟಣದಿಂದ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆ ಮಂಗಳವೇಡ ತಾಲೂಕಿನ ಹುಲಿಜಂತಿ ಗ್ರಾಮದ ಮಾರ್ಗವಾಗಿ ಹೋಗಿರುವ ದರೋಡೆಕೋರರ ಗುಂಪು ಚದುರಿಕೊಂಡು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಹುಲಿಜಂತಿ ಗ್ರಾಮದ ಬಳಿ ದರೋಡೆಕೋರರು ಪ್ರಯಾಣ ಮಾಡುತ್ತಿದ್ದ ಕಾರು ಕುರಿಗಳಿಗೆ ಡಿಕ್ಕಿಯಾಗಿದೆ. ಕುರಿಗಳಿಗೆ ಡಿಕ್ಕಿಯಾದದ್ದನ್ನ ಪ್ರಶ್ನಿಸಿದ ಗ್ರಾಮಸ್ಥರಿಗೆ ಕಾರಿನಲ್ಲಿದ್ದ ಓರ್ವ ದರೋಡೆಕೋರ ಕೈಯಲ್ಲಿ ಪಿಸ್ತೂಲ್ ಹಿಡಿದು ಬೆದರಿಕೆ ಹಾಕಿ ಪರಾರಿಯಾಗಿರುವುದು ತಿಳಿದುಬಂದಿದೆ. KA 24 DH 2456 ನಂಬರಿನ ಕಾರಿನಲ್ಲಿ ಬಂದಿದ್ದ ಓರ್ವ ದರೋಡೆಕೋರನ ಕಾರಿನಲ್ಲಿ ಅಲ್ಪಸ್ವಲ್ಪ ಚಿನ್ನಾಭರಣ ಬಿದ್ದಿತ್ತು. ಇನ್ನುಳಿದ ದರೋಡೆಕೋರರು ಪ್ರತ್ಯೇಕವಾಗಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಬ್ಯಾಂಕ್​​ನಲ್ಲಿ ದರೋಡೆ ನಡೆದ ಸ್ಥಳಕ್ಕೆ ‌ಶ್ವಾನದಳ ಬೆರಳಚ್ಚು‌ದಳ‌ ಸಿಬ್ಬಂದಿ ಆಗಮಿಸಿ ಪರೀಕ್ಷೆ ನಡೆಸಿದ್ದಾರೆ. ಈ ಘಟನೆ ಕುರಿತು ಸಕಲ ಮಾಹಿತಿ ಕಲೆ ಹಾಕಲಾಗುತ್ತದೆ ಎಂದು ಎಸ್ ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ, ಸದ್ಯ ಎಷ್ಟು ಪ್ರಮಾಣದ ನಗದು ಚಿನ್ನ ಕಳ್ಳತನವಾಗಿದೆ ಎಂಬ ನಿಖರ ಮಾಹಿತಿ ಲಭ್ಯವಾಗಿಲ್ಲ ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:20 pm, Tue, 16 September 25

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?