AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಲಿಕೆ ಆಯುಕ್ತ, ಅಧಿಕಾರಿಗಳು ಎಂದು ಹೇಳಿದರೂ ಹಲ್ಲೆ ಮಾಡಿದ ರೌಡಿಶೀಟರ್ ಮತ್ತವನ ಸಹಚರರು! ಕಾರಣವೇನು?

ಪಾಲಿಕೆ ಆಯುಕ್ತ ಹಾಗೂ ಆಧಿಕಾರಿಗಳು ಎಂದು ಹೇಳಿದರೂ ಹಲ್ಲೆ ಮಾಡಿದ ನಾಲ್ವರು ಯುವಕರ ವಿರುದ್ಧ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ ದೂರು ದಾಖಲಿಸಿದ್ದಾರೆ. ಸದ್ಯ ಪ್ರಮುಖ ಆರೋಪಿ ರೌಡಿಶೀಟರ್ ಸಮರ್ಥ್ ಸಿಂದಗಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪಾಲಿಕೆ ಆಯುಕ್ತ, ಅಧಿಕಾರಿಗಳು ಎಂದು ಹೇಳಿದರೂ ಹಲ್ಲೆ ಮಾಡಿದ ರೌಡಿಶೀಟರ್ ಮತ್ತವನ ಸಹಚರರು! ಕಾರಣವೇನು?
ಆರೋಪಿ ಸಮರ್ಥ್ ಸಿಂದಗಿ
TV9 Web
| Edited By: |

Updated on:Dec 20, 2021 | 4:03 PM

Share

ವಿಜಯಪುರ: ಪಾಲಿಕೆ ಆಯುಕ್ತರ ಮೇಲೆ ರೌಡಿಶೀಟರ್ (Rowdy sheeter) ಮತ್ತು ಸಂಗಡಿಗರು ಹಲ್ಲೆ ಮಾಡಿದ ಘಟನೆ ವಿಜಯಪುರ ನಗರದ ರಿಂಗ್ ರೋಡ್‌ನಲ್ಲಿ ನಡೆದಿದೆ. ಆಯುಕ್ತ ವಿಜಯ್ ಮೆಕ್ಕಳಕಿ ಮತ್ತು ಇಬ್ಬರು ಅಧಿಕಾರಿಗಳ ಮೇಲೆ ರೌಡಿಶೀಟರ್ ಸಮರ್ಥ್ ಸಿಂದಗಿ, ಸುರೇಶ್, ಮತ್ತಿಬ್ಬರು ಸೇರಿ ಹಲ್ಲೆ ಮಾಡಿದ್ದಾರೆ. ರಿಂಗ್ ರೋಡ್‌ನಲ್ಲಿ ತೆಗ್ಗು ಗುಂಡಿಗಳ ಪರಿಶೀಲನೆ ಮಾಡುತ್ತಿದ್ದ ಅಧಿಕಾರಿಗಳ ಕಾರಿಗೆ ರೌಡಿಶೀಟರ್ ಕಾರು ಮತ್ತು ಬೈಕ್​ ಡಿಕ್ಕಿಯಾಗಿದೆ. ಇದನ್ನು ಪ್ರಶ್ನಿಸಿದ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದಾರೆ. ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಪಾಲಿಕೆ ಆಯುಕ್ತ ಹಾಗೂ ಆಧಿಕಾರಿಗಳು ಎಂದು ಹೇಳಿದರೂ ಹಲ್ಲೆ ಮಾಡಿದ ನಾಲ್ವರು ಯುವಕರ ವಿರುದ್ಧ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ ದೂರು ದಾಖಲಿಸಿದ್ದಾರೆ. ಸದ್ಯ ಪ್ರಮುಖ ಆರೋಪಿ ರೌಡಿಶೀಟರ್ ಸಮರ್ಥ್ ಸಿಂದಗಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಪರಾರಿಯಾದ ಮೂವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಅಧಿಕಾರಿಗಳ ಮೇಲಿನ ಹಲ್ಲೆಗೆ ಕಾರಣ ಏನು? ಇದೇ ಮುಂಬರುವ ಡಿಸೆಂಬರ್ 25 ರಂದು ಸಿಎಂ ಬಸವರಾಜ ಬೊಮ್ಮಾಯಿ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಈ ಕಾರಣದಿಂದ ಕೆಲ ರಸ್ತೆಗಳ ಪರಿಶೀಲನೆಗೆ ಖಾಸಗಿ ಕಾರಿನಲ್ಲಿ ಪಾಲಿಕೆಯ ಆಯುಕ್ತ ವಿಜಯ್ ಮೆಕ್ಕಳಕಿ ಸೊಲ್ಲಾಪುರ ಹಾಗೂ ಅಥಣಿ ರಸ್ತೆಗಳನ್ನು ಸಂಪರ್ಕಿಸುವ ರಿಂಗ್ ರೋಡ್​ಗೆ ಹೋಗಿದ್ದಾರೆ. ರಿಂಗ್ ರೋಡ್​ನಲ್ಲಿ ಕೆಎ 04 ಎಂಆರ್ 3143 ನಂಬರಿನ ಕಾರನ್ನು ನಿಲ್ಲಿಸಿ ರಸ್ತೆಯಲ್ಲಿನ ತೆಗ್ಗು ಗುಂಡಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಂಬರ್ ಪ್ಲೇಟ್ ಇಲ್ಲದ ಬುಲೆಟ್ ಬೈಕ್​ನಲ್ಲಿ ಸಮರ್ಥ ಸಿಂದಗಿ ಆಗಮಿಸಿದ್ದಾನೆ. ಇವನ ಹಿಂದೆಯೇ  ನಂಬರ್ ಪ್ಲೇಟ್ ಇಲ್ಲದ ಪೋರ್ಡ್ ಕಾರಿನಲ್ಲಿ ನಾಲ್ವರು ಯುವಕರು ಆಗಮಿಸಿದ್ದಾರೆ. ಅಲ್ಲದೇ ಆಯುಕ್ತರ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಇದನ್ನು ಪ್ರಶ್ನಿಸಿದಾಗ ಹಲ್ಲೆಗೆ ಮುಂದಾಗಿದ್ದಾರೆ.

ವಿಜಯಪುರ ಪಾಲಿಕೆ ಆಯುಕ್ತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ‌ ಹಾಗೂ ಇತರೆ ಅಧಿಕಾರಿಗಳ ಮೇಲೆ ರೌಡಿಶೀಟರ್ ಹಾಗೂ ಆತನ‌ ಸ್ನೇಹಿತರಿಂದ‌ ಹಲ್ಲೆ ವಿರೋಧಿಸಿ ಸರ್ಕಾರಿ ನೌಕರರ ಸಂಘ, ಮಹಾನಗರ ಪಾಲಿಕೆ ಸಿಬ್ಬಂದಿ  ಹಾಗೂ‌ ಪೌರ ಕಾರ್ಮಿಕರು ಪ್ರತಿಭಟನೆಗೆ ಮುಂದಾಗಿದ್ದಾರೆ. ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಆಯುಕ್ತರು ಹಾಗೂ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರ ಮೇಲೆ ಸೂಕ್ತ ಕಾನೂನು ಕ್ರಮಕ್ಕೆ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ ಪಾಲಿಕೆ ಆಯುಕ್ತರ ವಿರುದ್ಧ ವಂಚನೆ ಆರೋಪ; ಸಾಮಾಜಿಕ ಜಾಲತಾಣದ ಮೂಲಕ ಯುವತಿಯಿಂದ ಸಿಎಂಗೆ ದೂರು

ಪೊಲೀಸರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ

Published On - 12:08 pm, Mon, 20 December 21

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್