ವಿಜಯಪುರ ಜಿಲ್ಲೆಯಲ್ಲಿ ಆರ್​ಎಸ್​ಎಸ್ ಸರಸಂಘಚಾಲಕ; ಯಾರ ಭೇಟಿಗೂ ಸಿಗದೇ ಧ್ಯಾನಾಸಕ್ತರಾಗಿರೋ ಮೋಹನ್ ಭಾಗವತ್

ಇಂಡಿ ತಾಲೂಕಿನ ನಿಂಬಾಳ ಗ್ರಾಮದ ಬಳಿಯ ಶ್ರೀ ಗುರುದೇವ ರಾನಡೆ ಆಶ್ರಮದಲ್ಲಿ ಆರ್​​ಎಸ್​ಎಸ್ ಸರಸಂಘಚಾಲಕ ಮೋಹನ್ ಭಾಗವತ್ (RSS Sarsanghchalak Mohan Bhagwat)  ಬೀಡು ಬಿಟ್ಟಿದ್ದಾರೆ. ಸಂಘ ಸಂಘಟನೆ ರಾಜಕೀಯ ವಿಚಾರಗಳಿಂದ ದೂರವಿದ್ದು, ಕೇವಲ ಧ್ಯಾನದಲ್ಲೇ ಕಾಲ ಕಳೆಯುತ್ತಿದ್ದಾರೆ. ಜೊತೆಗೆ ಝಡ್ ಪ್ಲಸ್ ಭದ್ರತೆ ಒದಗಿಸಲಾಗಿದ್ದು, ಯಾರ ಭೇಟಿಗೂ ಅವಕಾಶವಿಲ್ಲ.

ವಿಜಯಪುರ ಜಿಲ್ಲೆಯಲ್ಲಿ ಆರ್​ಎಸ್​ಎಸ್ ಸರಸಂಘಚಾಲಕ; ಯಾರ ಭೇಟಿಗೂ ಸಿಗದೇ ಧ್ಯಾನಾಸಕ್ತರಾಗಿರೋ ಮೋಹನ್ ಭಾಗವತ್
ವಿಜಯಪುರ ಜಿಲ್ಲೆಯಲ್ಲಿ ಆರ್​ಎಸ್​ಎಸ್ ಸರಸಂಘಚಾಲಕ ಮೋಹನ್​ ಭಾಗವತ್​
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 26, 2024 | 5:59 PM

ವಿಜಯಪುರ, ಜೂ.26: ವಿಜಯಪುರ(Vijayapura) ಜಿಲ್ಲೆಯ ಇಂಡಿ ತಾಲೂಕಿನ ನಿಂಬಾಳ ಗ್ರಾಮದ ಬಳಿಯ ಶ್ರೀ ಗುರುದೇವ ರಾನಡೆ ಆಶ್ರಮದಲ್ಲಿ ಆರ್​​ಎಸ್​ಎಸ್ ಸರಸಂಘಚಾಲಕ ಮೋಹನ್ ಭಾಗವತ್ (RSS Sarsanghchalak Mohan Bhagwat)  ಬೀಡು ಬಿಟ್ಟಿದ್ದಾರೆ. ಜೂನ್ 24 ರಿಂದಲೇ ರಾನಡೆ ಆಶ್ರಮದಲ್ಲಿ ಬೀಡು ಬಿಟ್ಟಿರುವ ಅವರು ಯಾರ ಭೇಟಿಗೂ ಸಿಗದೇ ಧ್ಯಾನಾಸಕ್ತರಾಗಿದ್ದಾರೆ.

ಪ್ರತಿ ವರ್ಷ ಆಶ್ರಮಕ್ಕೆ ಭೇಟಿ ನೀಡುವ ಮೋಹನ್ ಭಾಗವತ್

ಜೂನ್ 24 ರಿಂದ ರಾನಡೆ ಆಶ್ರಮದಲ್ಲಿ ಧ್ಯಾನ ಮಾಡುತ್ತಿರುವ ಆರ್​ಎಸ್​ಎಸ್ ಮುಖಂಡ ಮೋಹನ್​ ಭಾಗವತ್​, ಪ್ರತಿ ವರ್ಷ ಜೂನ್ ಅಥವಾ ಜುಲೈ ತಿಂಗಳಲ್ಲಿ ಶ್ರೀ ಗುರುದೇವ ರಾನಡೆ ಆಶ್ರಮಕ್ಕೆ ಬರುತ್ತಾರೆ. ಜೊತೆಗೆ ನಾಲ್ಕು ದಿನಗಳ ಕಾಲ ಇಲ್ಲಿಯೇ ತಂಗುವುದು ವಾಡಿಕೆಯಾಗಿದೆ. ಹಲವಾರು ವರ್ಷಗಳಿಂದ ಶ್ರೀ ಗುರುದೇವ ರಾನಡೆ ಆಶ್ರಮಕ್ಕೆ ತಪ್ಪದೇ ಬರುತ್ತಿದ್ದಾರೆ.

ಇದನ್ನೂ ಓದಿ:ಮಣಿಪುರಕ್ಕೆ ಆದ್ಯತೆ ನೀಡಬೇಕು, ಹಿಂಸೆ ನಿಲ್ಲಿಸಬೇಕು; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಕೇವಲ ಧಾನ್ಯದಲ್ಲೇ ಕಾಲ

ಇನ್ನು ಇಲ್ಲಿಗೆ ಬರುವ ಅವರು, ಸಂಘ ಸಂಘಟನೆ ರಾಜಕೀಯ ವಿಚಾರಗಳಿಂದ ದೂರವಿದ್ದು, ಕೇವಲ ಧ್ಯಾನದಲ್ಲೇ ಕಾಲ ಕಳೆಯುತ್ತಾರೆ. ಈ ಆಶ್ರಮದಲ್ಲಿ ಕೆಲವೇ ಜನರ ಜೊತೆಗಿರೋ ಮೋಹನ್ ಭಾಗವತ್ ಅವರಿಗೆ ಝಡ್ ಪ್ಲಸ್ ಭದ್ರತೆ ಇದ್ದು, ಭಾಗವತ್ ಅವರ ಭೇಟಿಗೆ ಯಾರಿಗೂ ಅವಕಾಶವಿಲ್ಲ. ರಾನಡೆ ಆಶ್ರಮದ ಹೊರಗಡೆ ಜಿಲ್ಲಾ ಪೊಲೀಸರಿಂದ ಭದ್ರತೆ ಮಾಡಲಾಗಿದೆ. ನಾಳೆ(ಜೂ.27) ಬೆಳಿಗ್ಗೆ ರಾನಡೆ ಆಶ್ರಮದಿಂದ ಹೊರಟು ಚಡಚಣ ತಾಲೂಕಿನ ಇಂಚಗೇರಿ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ದೇವರನಿಂಬರಗಿ ಗ್ರಾಮದ ಮಠಕ್ಕೆ ಭೇಟಿ ನೀಡಿ ಅಲ್ಲಿಂದ ಮಹಾರಾಷ್ಟ್ರದ ಉಮದಿಗೆ ತೆರಳಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!