AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕ ಮಹಾದೇವಿ ಮಹಿಳಾ ವಿವಿ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳ; ದಯಾಮರಣಕ್ಕೆ ಸಂತ್ರಸ್ತೆ ಮನವಿ

ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿವಿ ಸಿಬ್ಬಂದಿ ಶ್ರೀಶೈಲ ದೊಡಮನಿ ಎಂಬುವವರು ವಿಶ್ವವಿದ್ಯಾಲಯದ ಉದ್ಯಾನವನ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದು ಸಂತ್ರಸ್ತೆ ದಯಾಮರಣ ಕೋರಿ ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಅಕ್ಕ ಮಹಾದೇವಿ ಮಹಿಳಾ ವಿವಿ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳ; ದಯಾಮರಣಕ್ಕೆ ಸಂತ್ರಸ್ತೆ ಮನವಿ
ಅಕ್ಕ ಮಹಾದೇವಿ ಮಹಿಳಾ ವಿವಿ
ಅಶೋಕ ಯಡಳ್ಳಿ, ವಿಜಯಪುರ
| Edited By: ಆಯೇಷಾ ಬಾನು|

Updated on: Mar 23, 2024 | 11:13 AM

Share

ವಿಜಯಪುರ, ಮಾರ್ಚ್​.23: ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿವಿಯಲ್ಲಿ (Karnataka State Akka Mahadevi Women’s University) ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ಬಯಲಿಗೆ ಬಂದಿದೆ. ಲೈಂಗಿಕ ಕಿರುಕುಳ ತಾಳಲಾರದೆ ದಯಾಮರಣ ನೀಡಬೇಕೆಂದು ಸಂತ್ರಸ್ತೆ ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ವಿಶ್ವವಿದ್ಯಾಲಯದ ಉದ್ಯಾನವನ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಸಂತ್ರಸ್ತೆಗೆ ಮಹಿಳಾ ವಿವಿಯ ಸಿಬ್ಬಂದಿ ಶ್ರೀಶೈಲ ದೊಡಮನಿಯಿಂದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ.

ಲೈಂಗಿಕ ಕಿರುಕುಳದ ಕುರಿತು ವಿವಿಯ ಆಂತರಿಕ ದೂರು ಸಮಿತಿಗೆ ಕಳೆದ ಪೆಬ್ರವರಿ 14 ರಂದು ಸಂತ್ರಸ್ತೆ ದೂರು ನೀಡಿದ್ದರು. ಆದರೆ ಆಂತರಿಕ ದೂರು ಸಮಿತಿ ಈವರೆಗೂ ಸಂತ್ರಸ್ತೆ ನೀಡಿರೋ ದೂರಿನ ಕುರಿತು ಕ್ರಮ ತೆಗೆದುಕೊಂಡಿಲ್ಲ. ಇದೇ ವಿವಿಯ ಉದ್ಯಾನವನ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಪತಿ 2015ರಲ್ಲಿ ವಿವಿಯ ಆವರಣದ ತಡೆಗೋಡೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪತಿಯ ಮರಣದ ನಂತರ ಮಹಿಳೆಗೆ ಉದ್ಯಾನವನ ವಿಭಾಗದಲ್ಲಿ ಕೆಲಸ ಸಿಕ್ಕಿತ್ತು. ಪತಿ ಮರಣ ನಂತರ ಪಿಎಫ್ ಹಣ ನೀಡಿಲ್ಲ ಎಂದು ಕೂಡ ಸಂತ್ರಸ್ತ ಮಹಿಳೆ ಆರೋಪ ಮಾಡಿದ್ದಾರೆ.

ಎಸ್​ಸಿ, ಎಸ್ಟಿ ನೌಕರರ ಸಂಘದ ಪದಾಧಿಕಾರಿ ಸುಭಾಷ್ ಕಾಂಬಳೆ, ಹಣಕಾಸು ವಿಭಾಗದವರು ಸತಾಯಿಸುತ್ತಿದ್ದಾರೆಂದು ಆರೋಪ ಮಾಡಿದ್ದಾರೆ. ಒಂದೆಡೆ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳ, ಮತ್ತೊಂದಡೆ ಪತಿಯ ಪಿಎಫ್ ಹಣ ನೀಡದೇ ಸತಾಯಿಸುತ್ತಿದ್ದಾರೆ. ಇದರಿಂದ ಬೇಸರಗೊಂಡು ದಯಾಮರಣಕ್ಕಾಗಿ ಡಿಸಿ ಅವರಿಗೆ ಮನವಿ ಸಲ್ಲಿಸಿದ್ದೇನೆ. ನನಗೆ ನ್ಯಾಯಕೊಡಿ ಇಲ್ಲವೇ ದಯಾಮರಣಕ್ಕೆ ಅವಕಾಶ ಕೊಡಿ ಎಂದು ಮಹಿಳೆ ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ಹಾಸನದಲ್ಲಿ ದೋಸ್ತಿ ಕುಸ್ತಿ: ಬೀದಿಗೆ ಬಂತು ಜೆಡಿಎಸ್, ಬಿಜೆಪಿ ಅಂತಃ ಕಲಹ

ಬಿಸಿ ಹಾಲು ಚೆಲ್ಲಿ ಮಗುವಿಗೆ ಗಾಯ

ಅಂಗನವಾಡಿ ಕೇಂದ್ರದಲ್ಲಿ ಬಿಸಿ ಹಾಲು ಬಿದ್ದು ಮಗುವಿಗೆ ಗಾಯಗೊಂಡಿರುವ ಘಟನೆ, ಕೋಲಾರ ತಾಲೂಕಿನ ಕೊಂಡೇನಹಳ್ಳಿಯಲ್ಲಿ ನಡೆದಿದೆ. ಅಂಗನವಾಡಿ ಕಾರ್ಯಕರ್ತೆ ಆರತಿ ನಿರ್ಲಕ್ಷ್ಯದಿಂದ ದುರ್ಘಟನೆ ನಡೆದಿದೆ. ಹೆಣ್ಣು ಮಗುವಿನ ತೊಡೆ ಭಾಗದಲ್ಲಿ ಸುಟ್ಟು ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಅಂಗನವಾಡಿ ಕಾರ್ಯಕರ್ತೆ ಆರತಿಯನ್ನ ಕೆಲಸದಿಂದ ವಜಾಗೊಳಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆದೇಶಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್