AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಜೆಐ ಮೇಲೆ ಶೂ ಎಸೆತ ಕೇಸ್​​​: ಅ 16ರಂದು ವಿಜಯಪುರ ನಗರ ಬಂದ್​ಗೆ ಕರೆ

ಸುಪ್ರೀಂಕೋರ್ಟ್ ಸಿಜೆ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ಮೋದಿ ಸೇರಿದಂತೆ ಸಿಎಂ ಸಿದ್ದರಾಮಯ್ಯ ಘಟನೆಯನ್ನು ಖಂಡಿಸಿದ್ದಾರೆ. ಇದೀಗ ಪ್ರಗತಿಪರ ಮತ್ತು ದಲಿತ ಸಂಘಟನೆಗಳು ಅಕ್ಟೋಬರ್ 16 ರಂದು ವಿಜಯಪುರ ಬಂದ್‌ಗೆ ಕರೆ ನೀಡಿವೆ. ವಕೀಲ ರಾಕೇಶ್ ಕಿಶೋರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿವೆ.

ಸಿಜೆಐ ಮೇಲೆ ಶೂ ಎಸೆತ ಕೇಸ್​​​: ಅ 16ರಂದು ವಿಜಯಪುರ ನಗರ ಬಂದ್​ಗೆ ಕರೆ
ವಿಜಯಪುರ ನಗರ ಬಂದ್​ಗೆ ನಿರ್ಧಾರ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Oct 08, 2025 | 3:11 PM

Share

ವಿಜಯಪುರ, ಅಕ್ಟೋಬರ್​ 08: ಸುಪ್ರೀಂಕೋರ್ಟ್ (Supreme Court) ಸಿಜೆ ಬಿ.ಆರ್. ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆತ ಪ್ರಕರಣ ದೇಶಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ನ್ಯಾಯವಾದಿಯ ವರ್ತನೆಗೆ ಎಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಸದ್ಯ ಘಟನೆಯನ್ನು ಖಂಡಿಸಿ ಅಕ್ಟೋಬರ್ 16 ರಂದು ವಿಜಯಪುರ (Vijayapura) ನಗರ ಬಂದ್​ಗೆ ಪ್ರಗತಿ ಪರ ಸಂಘಟನೆಗಳು ಮತ್ತು ದಲಿತ ಪರ ಸಂಘಟನೆಗಳಿಂದ ಕರೆ ನೀಡಲಾಗಿದೆ.

ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ರಾಜೂ ಆಲಗೂರು ಹಾಗೂ ವಿವಿಧ ದಲಿತ ಪರ ಪ್ರಗತಿ ಪರ ಸಂಘಟನೆಗಳ ಮುಖಂಡರು ನಗರದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ, ಅಕ್ಟೋಬರ್ 16 ರಂದು ವಿಜಯಪುರ ಬಂದ್​​ ನಿರ್ಧಾರವನ್ನು ತಿಳಿಸಿದರು.

ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕಪ್ಪು ಚುಕ್ಕೆ

ಸಿಜೆಐ ಅವರ ಮೇಲೆ ಶೂ ಎಸೆಯುವ ಪ್ರಯತ್ನ ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕಪ್ಪು ಚುಕ್ಕೆಯಾಗಿದೆ. ಮನುವಾದಿ ಸಂಸ್ಕೃತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಮಾಜದವಾದ ಸಿದ್ದಾಂತ ಹೇಳುವ ಆರ್​ಎಸ್​ಎಸ್​ ಹಾಗೂ ಇತರೆ ನಾಯಕರು ಸಿಐಜೆ ಅವರ ಮೇಲೆ ನಡೆದ ಘಟನೆ ಕುರಿತು ನಾಳೆಯ ಸಭೆಯಲ್ಲಿ ಖಂಡಿಸಿಲಿ ಎಂದು ಮುಖಂಡರು ಸವಾಲು ಹಾಕಿದರು.

ಇದನ್ನೂ ಓದಿ: ಸುಪ್ರೀಂ ಕೋರ್ಟ್​ನಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ಶೂ ಬಿಸಾಡಲೆತ್ನಿಸಿದ ವಕೀಲ

ದೇಶದ ಪ್ರಧಾನಿ ಮೋದಿ ಅವರು ಘಟನೆ ನಡೆದು 10 ಗಂಟೆಗಳ ಬಳಿಕ ಅನಿವಾರ್ಯವಾಗಿ ಪ್ರತಿಕ್ರಿಯೆ ನೀಡಿದರು. ಅದು ಬಿಹಾರದ ಚುನಾವಣೆ ಕಾರಣ ಮಾತ್ರ ಮಾತನಾಡಿದರು ಎಂದು ಮಾಜಿ ಶಾಸಕ ರಾಜೂ ಆಲಗೂರು ಆರೋಪಿಸಿದರು. ಇದೇ ರೀತಿ ಘಟನೆ ನಡೆದರೆ ಇದಕ್ಕೆ ಉತ್ತರ ಕೊಡುವ ಪರಸ್ಥಿತಿ ನಿರ್ಮಾಣ ಆಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇನ್ನು ಅವಕಾಶ ಕೊಟ್ಟರೆ ಸಿಐಜೆ ಗವಾಯಿ ಅವರ ಎದೆ ಸೀಳುತ್ತೇನೆಂದು ಹೇಳಿದ ಕಥಾವಾಚಕರೊಬ್ಬರು ಹೇಳಿದ್ದು ದುರ್ದೈವ ಎಂದು ಮಾಜಿ ಶಾಸಕ ರಾಜೂ ಆಲಗೂರ ಕಿಡಿಕಾರಿದರು. ಓರ್ವ ಯೂಟ್ಯೂಬರ್ ಸಹ ಸಿಐಜೆ ಗವಾಯಿ ಅವರ ವಿರುದ್ಧ ಮೊದಲಿನಿಂದಲೂ ಅವಮಾನಕಾರಿ ವಿಡಿಯೋ ಹಾಕಿದ್ಧಾನೆಂದು ಆರೋಪ ಮಾಡಿದರು.

ಇದನ್ನೂ ಓದಿ: ಶೂ ಎಸೆತ: CJI ಬಿಆರ್ ಗವಾಯಿ ಜೊತೆ ಮಾತನಾಡಿದ ಬಳಿಕ ಪ್ರಧಾನಿ ಮೋದಿ ಹೇಳಿದ್ದೇನು?

ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆಯುವ ಪ್ರಯತ್ನ ಮಾಡಿರುವ ನ್ಯಾಯವಾದಿ ಹಿಂದೆ ದೊಡ್ಡ ಶಕ್ತಿಯಿದೆ. ಆ ಶಕ್ತಿಯ ಧೈರ್ಯದಿಂದ ಶೂ ಎಸೆದಿದ್ದಾರೆ. ಇದೇ ವೇಳೆ ದಲಿತ ಪರ ಮುಖಂಡರು ಆರ್​​ಎಸ್​ಎಸ್​ ವಿರುದ್ದ ಗುಡುಗಿದರು. ಈ ಘಟನೆಯನ್ನು ಖಂಡಿಸಿ ವಿಜಯಪುರ ಜಿಲ್ಲೆಯ ದಲಿತ ಪರ ಸಂಘಟನೆಗಳು, ಪ್ರಗತಿ ಪರ ಸಂಘಟನೆಗಳು ಅಕ್ಟೋಬರ್ 16 ರಂದು ವಿಜಯಪುರ ಜಿಲ್ಲೆ ಬಂದ್ ಮಾಡಲಾಗುತ್ತದೆ. ಅಂದು ಶಾಲಾ ಕಾಲೇಜು, ಅಂಗಡಿ ಮುಂಗಟ್ಟು ಬಂದ್ ಆಗಲಿದೆ. ಜನರು, ವ್ಯಾಪಾರಿಗಳು, ಸಂಘಸಂಸ್ಥೆಗಳು ಸಹಕರಿಸುವಂತೆ ಮುಖಂಡರು ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:09 pm, Wed, 8 October 25

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ