AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂ.ಸಿ. ಮನಗೂಳಿ ಬದಲು ಅಶೋಕ‌ ಮನಗೂಳಿ ನಿಧನರಾದರು ಎಂದ ಸಿದ್ದರಾಮಯ್ಯ; ಭಾಷಣ ವೇಳೆ ಎಡವಟ್ಟು

Siddaramaiah: ಬಸವರಾಜ ಬೊಮ್ಮಾಯಿ ಆರ್​ಎಸ್​ಎಸ್ ಮಾಡಿದ ಮುಖ್ಯಮಂತ್ರಿ. ಸರ್ಕಾರದ ರಿಮೋಟ್ ಆರ್​ಎಸ್​ಎಸ್ ಕೈಯಲ್ಲಿ ಇದೆ. ಸರ್ಕಾರ ಆರ್​ಎಸ್​ಎಸ್​ ಹೇಳಿದಂತೆಯೇ ಕೇಳಬೇಕು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಎಂ.ಸಿ. ಮನಗೂಳಿ ಬದಲು ಅಶೋಕ‌ ಮನಗೂಳಿ ನಿಧನರಾದರು ಎಂದ ಸಿದ್ದರಾಮಯ್ಯ; ಭಾಷಣ ವೇಳೆ ಎಡವಟ್ಟು
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Updated By: ganapathi bhat|

Updated on:Oct 18, 2021 | 9:43 PM

Share

ವಿಜಯಪುರ: ಕರ್ನಾಟಕ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಪ್ರಚಾರ ಭಾಷಣ ವೇಳೆ ಮತ್ತೆ ಸಿದ್ದರಾಮಯ್ಯರಿಂದ ಎಡವಟ್ಟಾಗಿದೆ. ಎಂ.ಸಿ. ಮನಗೂಳಿ ನಿಧನರಾದರು ಅನ್ನುವ ಬದಲು ಅಶೋಕ‌ ಮನಗೂಳಿ ನಿಧನರಾದರು ಎಂದು ಹೇಳಿ ಸಿದ್ದರಾಮಯ್ಯ ಎಡವಟ್ಟು ಮಾಡಿಕೊಂಡಿದ್ದಾರೆ. ಬಳಿಕ ಎಂ.ಸಿ. ಮನಗೂಳಿ ನಿಧನ ಎಂದು ಸಿದ್ದರಾಮಯ್ಯ ವಿಷಯ ಸರಿದೂಗಿಸಿಕೊಂಡಿದ್ದಾರೆ. ವಿಜಯಪುರ ಜಿಲ್ಲೆ ಆಲಮೇಲ ಪಟ್ಟಣದಲ್ಲಿ ಪ್ರಚಾರ ಸಭೆ ವೇಳೆ ಹೀಗಾಗಿದೆ.

ಇದೇ ವೇಳೆ ಬಿ.ಎಸ್. ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ಹಣಕ್ಕೆ ಶಾಸಕರನ್ನ ಕೊಂಡು ಅಧಿಕಾರಕ್ಕೆ ಬಂದಿದ್ದಾರೆ. ಮುಂಬಾಗಿಲಿಂದ ಯಡಿಯೂರಪ್ಪ ಅಧಿಕಾರಕ್ಕೆ ಬಂದಿಲ್ಲ. ಬಸವರಾಜ ಬೊಮ್ಮಾಯಿ ಆರ್​ಎಸ್​ಎಸ್ ಮಾಡಿದ ಮುಖ್ಯಮಂತ್ರಿ. ಸರ್ಕಾರದ ರಿಮೋಟ್ ಆರ್​ಎಸ್​ಎಸ್ ಕೈಯಲ್ಲಿ ಇದೆ. ಸರ್ಕಾರ ಆರ್​ಎಸ್​ಎಸ್​ ಹೇಳಿದಂತೆಯೇ ಕೇಳಬೇಕು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮೋದಿ ಪ್ರಧಾನ ಮಂತ್ರಿ ಆದ ಬಳಿಕ ಕೊರೊನಾ ಬಂತು. ಕೊರೊನಾಗೆ ಚಪ್ಪಾಳೆ ಹೊಡೀರಿ, ದೀಪಾ ಹಚ್ಚಿ ಅಂದರು. ಇಷ್ಟೆಲ್ಲಾ ಮಾಡಿಸಿದರು ಕೊರೊನಾ ಏನಾದ್ರು ಹೋಯ್ತಾ? ಈ ನರೇಂದ್ರ ಮೋದಿ ಹೇಳುವುದೆಲ್ಲಾ ಉಲ್ಟಾ ಆಗಿದೆ ಎಂದು ವಿಜಯಪುರ ಜಿಲ್ಲೆ ಆಲಮೇಲದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಧಾನಿ ಅಚ್ಛೇ ದಿನ್ ಬರುತ್ತೆ ಅಂದ್ರು ಅಚ್ಛೇ ದಿನ್​ ಬಂತಾ? ತೈಲ ಬೆಲೆ ಸೇರಿದಂತೆ ಎಲ್ಲಾ ಬೆಲೆಗಳೂ ಏರಿಕೆಯಾಗಿವೆ. ಬಿಜೆಪಿ ದರಿದ್ರ ಸರ್ಕಾರ, ಎಲ್ಲರ ರಕ್ತ ಕುಡಿಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ ಮೈ ಶುಗರ್ ಕಾರ್ಖಾನೆ: ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ನಡೆಸಲು ತೀರ್ಮಾನ – ಸಿಎಂ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: ಸಿದ್ದರಾಮಯ್ಯ ಜೆಡಿಎಸ್​ನಲ್ಲಿದ್ದಾಗಲೂ ಕುಮಾರಸ್ವಾಮಿ ವಿಷ ಕಾರುತ್ತಿದ್ದರು: ಜಮೀರ್ ಅಹ್ಮದ್

Published On - 9:42 pm, Mon, 18 October 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?