AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂ.ಸಿ. ಮನಗೂಳಿ ಬದಲು ಅಶೋಕ‌ ಮನಗೂಳಿ ನಿಧನರಾದರು ಎಂದ ಸಿದ್ದರಾಮಯ್ಯ; ಭಾಷಣ ವೇಳೆ ಎಡವಟ್ಟು

Siddaramaiah: ಬಸವರಾಜ ಬೊಮ್ಮಾಯಿ ಆರ್​ಎಸ್​ಎಸ್ ಮಾಡಿದ ಮುಖ್ಯಮಂತ್ರಿ. ಸರ್ಕಾರದ ರಿಮೋಟ್ ಆರ್​ಎಸ್​ಎಸ್ ಕೈಯಲ್ಲಿ ಇದೆ. ಸರ್ಕಾರ ಆರ್​ಎಸ್​ಎಸ್​ ಹೇಳಿದಂತೆಯೇ ಕೇಳಬೇಕು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಎಂ.ಸಿ. ಮನಗೂಳಿ ಬದಲು ಅಶೋಕ‌ ಮನಗೂಳಿ ನಿಧನರಾದರು ಎಂದ ಸಿದ್ದರಾಮಯ್ಯ; ಭಾಷಣ ವೇಳೆ ಎಡವಟ್ಟು
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Oct 18, 2021 | 9:43 PM

Share

ವಿಜಯಪುರ: ಕರ್ನಾಟಕ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಪ್ರಚಾರ ಭಾಷಣ ವೇಳೆ ಮತ್ತೆ ಸಿದ್ದರಾಮಯ್ಯರಿಂದ ಎಡವಟ್ಟಾಗಿದೆ. ಎಂ.ಸಿ. ಮನಗೂಳಿ ನಿಧನರಾದರು ಅನ್ನುವ ಬದಲು ಅಶೋಕ‌ ಮನಗೂಳಿ ನಿಧನರಾದರು ಎಂದು ಹೇಳಿ ಸಿದ್ದರಾಮಯ್ಯ ಎಡವಟ್ಟು ಮಾಡಿಕೊಂಡಿದ್ದಾರೆ. ಬಳಿಕ ಎಂ.ಸಿ. ಮನಗೂಳಿ ನಿಧನ ಎಂದು ಸಿದ್ದರಾಮಯ್ಯ ವಿಷಯ ಸರಿದೂಗಿಸಿಕೊಂಡಿದ್ದಾರೆ. ವಿಜಯಪುರ ಜಿಲ್ಲೆ ಆಲಮೇಲ ಪಟ್ಟಣದಲ್ಲಿ ಪ್ರಚಾರ ಸಭೆ ವೇಳೆ ಹೀಗಾಗಿದೆ.

ಇದೇ ವೇಳೆ ಬಿ.ಎಸ್. ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ಹಣಕ್ಕೆ ಶಾಸಕರನ್ನ ಕೊಂಡು ಅಧಿಕಾರಕ್ಕೆ ಬಂದಿದ್ದಾರೆ. ಮುಂಬಾಗಿಲಿಂದ ಯಡಿಯೂರಪ್ಪ ಅಧಿಕಾರಕ್ಕೆ ಬಂದಿಲ್ಲ. ಬಸವರಾಜ ಬೊಮ್ಮಾಯಿ ಆರ್​ಎಸ್​ಎಸ್ ಮಾಡಿದ ಮುಖ್ಯಮಂತ್ರಿ. ಸರ್ಕಾರದ ರಿಮೋಟ್ ಆರ್​ಎಸ್​ಎಸ್ ಕೈಯಲ್ಲಿ ಇದೆ. ಸರ್ಕಾರ ಆರ್​ಎಸ್​ಎಸ್​ ಹೇಳಿದಂತೆಯೇ ಕೇಳಬೇಕು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮೋದಿ ಪ್ರಧಾನ ಮಂತ್ರಿ ಆದ ಬಳಿಕ ಕೊರೊನಾ ಬಂತು. ಕೊರೊನಾಗೆ ಚಪ್ಪಾಳೆ ಹೊಡೀರಿ, ದೀಪಾ ಹಚ್ಚಿ ಅಂದರು. ಇಷ್ಟೆಲ್ಲಾ ಮಾಡಿಸಿದರು ಕೊರೊನಾ ಏನಾದ್ರು ಹೋಯ್ತಾ? ಈ ನರೇಂದ್ರ ಮೋದಿ ಹೇಳುವುದೆಲ್ಲಾ ಉಲ್ಟಾ ಆಗಿದೆ ಎಂದು ವಿಜಯಪುರ ಜಿಲ್ಲೆ ಆಲಮೇಲದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಧಾನಿ ಅಚ್ಛೇ ದಿನ್ ಬರುತ್ತೆ ಅಂದ್ರು ಅಚ್ಛೇ ದಿನ್​ ಬಂತಾ? ತೈಲ ಬೆಲೆ ಸೇರಿದಂತೆ ಎಲ್ಲಾ ಬೆಲೆಗಳೂ ಏರಿಕೆಯಾಗಿವೆ. ಬಿಜೆಪಿ ದರಿದ್ರ ಸರ್ಕಾರ, ಎಲ್ಲರ ರಕ್ತ ಕುಡಿಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ ಮೈ ಶುಗರ್ ಕಾರ್ಖಾನೆ: ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ನಡೆಸಲು ತೀರ್ಮಾನ – ಸಿಎಂ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: ಸಿದ್ದರಾಮಯ್ಯ ಜೆಡಿಎಸ್​ನಲ್ಲಿದ್ದಾಗಲೂ ಕುಮಾರಸ್ವಾಮಿ ವಿಷ ಕಾರುತ್ತಿದ್ದರು: ಜಮೀರ್ ಅಹ್ಮದ್

Published On - 9:42 pm, Mon, 18 October 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ