Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah Dance: ಲಂಬಾಣಿ ಮಹಿಳೆಯರ ಜೊತೆ ಹೆಜ್ಜೆ ಹಾಕಿದ ಸಿದ್ದರಾಮಯ್ಯ

ಕಲ್ಯಾಣ ಮಂಟಪದ ಹೊರಗೆ ಲಂಬಾಣಿ ಮಹಿಳೆಯರು ನೃತ್ಯ ಮಾಡಿ ಗಮನ ಸೆಳೆದಿದ್ದು ಲಂಬಾಣಿ ನೃತ್ಯಕ್ಕೆ ಸಿದ್ದರಾಮಯ್ಯ ಸಾಥ್ ನೀಡಿದ್ದಾರೆ. ಲಂಬಾಣಿ ಸಮಾವೇಶದಲ್ಲಿ ಭಾಗಿಯಾಗಲು ಆಗಮಿಸಿದ ಸಿದ್ದರಾಮಯ್ಯ, ಶಾಸಕ ಭೀಮಾನಾಯ್ಕ್ ಮನವಿ ಮೇರೆಗೆ ಕೈಗಳನ್ನು ಮೇಲತ್ತಿ ಹೆಜ್ಜೆ ಹಾಕಿದ್ರು.

Siddaramaiah Dance: ಲಂಬಾಣಿ ಮಹಿಳೆಯರ ಜೊತೆ ಹೆಜ್ಜೆ ಹಾಕಿದ ಸಿದ್ದರಾಮಯ್ಯ
ಲಂಬಾಣಿ ಮಹಿಳೆಯರ ಜೊತೆ ಹೆಜ್ಜೆ ಹಾಕಿದ ಸಿದ್ದರಾಮಯ್ಯ
Follow us
TV9 Web
| Updated By: ಆಯೇಷಾ ಬಾನು

Updated on: Oct 25, 2021 | 1:20 PM

ವಿಜಯಪುರ: ಸಿಂದಗಿ ಬೈಎಲೆಕ್ಷನ್ ಅಖಾಡ(Sindagi By Election) ಇಂದು ಮತ್ತಷ್ಟು ರಂಗೇರಿದೆ. ಮಾಜಿ ಸಿಎಂ ಸಿದ್ದರಾಮಯ್ಯ(siddaramaiah) ಪ್ರಚಾರಕ್ಕಾಗಿ ವಿಜಯಪುರಕ್ಕೆ ಆಗಮಿಸಿದ್ದು ಈ ವೇಳೆ ಅಭಿಮಾನಿಗಳು ಜಯಘೋಷ ಕೂಗಿದ್ದಾರೆ. ಸಿದ್ದರಾಮಯ್ಯ ಸಿಂದಗಿಯಲ್ಲಿ ಪ್ರಚಾರಕ್ಕೆ ತೆರಳುವ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ ಸಿದ್ದರಾಯ್ಯ ಸಾಹೇಬ್ರಗೆ ಜಯ್ ಎಂದು ಅಭಿಮಾನಿಗಳು ಜಯಘೋಷ ಕೂಗಿ ಸ್ವಾಗತಿಸಿದ್ದಾರೆ.

ಲಂಬಾಣಿ ನೃತ್ಯ ಮಾಡಿದ ಸಿದ್ದರಾಮಯ್ಯ ಸಿಂದಗಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಲಂಬಾಣಿ ಸಮಾಜದ ಮತಗಳನ್ನು ಸೆಳೆಯಲು ಕೈ ತಂತ್ರ ರೂಪಿಸಿದ್ದು ಇಂದು‌ ಸಿಂದಗಿ ಪಟ್ಟಣದ ಆಶೀರ್ವಾದ ಕಲ್ಯಾಣ ಮಂಟಪದಲ್ಲಿ ಲಂಬಾಣಿ ಸಮಾಜದ ಕಾರ್ಯಕರ್ತರ ಸಭೆ ನಡೆಯುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಸಭೆಯಲ್ಲಿ ಭಾಗಿಯಾಗಿದ್ದಾರೆ. ಕಲ್ಯಾಣ ಮಂಟಪದ ಹೊರಗೆ ಲಂಬಾಣಿ ಮಹಿಳೆಯರು ನೃತ್ಯ ಮಾಡಿ ಗಮನ ಸೆಳೆದಿದ್ದು ಲಂಬಾಣಿ ನೃತ್ಯಕ್ಕೆ ಸಿದ್ದರಾಮಯ್ಯ ಸಾಥ್ ನೀಡಿದ್ದಾರೆ.

ಲಂಬಾಣಿ ಸಮಾವೇಶದಲ್ಲಿ ಭಾಗಿಯಾಗಲು ಆಗಮಿಸಿದ ಸಿದ್ದರಾಮಯ್ಯ, ಶಾಸಕ ಭೀಮಾನಾಯ್ಕ್ ಮನವಿ ಮೇರೆಗೆ ಕೈಗಳನ್ನು ಮೇಲತ್ತಿ ಹೆಜ್ಜೆ ಹಾಕಿದ್ರು. ಇನ್ನು ಸಮಾವೇಶದಲ್ಲಿ ಭಾಗಿಯಾದ ಮಾಜಿ ಸಿಎಂ ಸಿದ್ದರಾಮಯ್ಯಗೆ ಲಂಬಾಣಿ ಸಂಸ್ಕೃತಿ ಬಿಂಬಿಸೋ ಶಾಲ್ ಹಾಕಿ ಸಮಾಜದ ಜನರು ಸಂತ್ಕರಿಸಿದ್ರು.

ಚುನಾವಣೆ ಇದ್ದಾಗ ಎದುರಾಳಿಗಳ ವಿರುದ್ಧ ಪ್ರಚಾರ ಮಾಡಲೇಬೇಕು ಇನ್ನು ಪ್ರಾದೇಶಿಕ ಪಕ್ಷಗಳನ್ನು ಬಿಜೆಪಿ ಹಾಗೂ ಕಾಂಗ್ರೆಸ್ ಮುಗಿಸಲು ಮುಂದಾಗಿವೆ ಎಂಬ ಮಾಜಿ ಪಿಎಂ ದೇವೇಗೌಡರ ಆರೋಪಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುಮ್ಮನೆ ಸುಳ್ಳು ಹೇಳುತ್ತಿದ್ದಾರೆ ನಾವ್ಯಾಕೆ ಪ್ರಾದೇಶಿಕ ಪಕ್ಷಗಳನ್ನು ಮುಗಿಸೋಕೆ ಹೋಗೋಣ. ಅವರ ನಡವಳಿಕೆಗಳಿಂದ ಅವರ ತತ್ವ ಸಿದ್ಧಾಂತ ಇಲ್ಲದೇ ಅವರೇ ಮುಗಿದು ಹೋಗುತ್ತಾರೆ. ನಾವ್ಯಾರು ಅವರನ್ನು ಮುಗಿಸೋಕೆ ಹೋಗಲ್ಲಾ ಎಂದು ಸಿದ್ದು ಟಾಂಗ್ ಕೊಟ್ಟಿದ್ದಾರೆ.

ಚುನಾವಣೆ ಇದ್ದಾಗ ಎದುರಾಳಿಗಳ ವಿರುದ್ಧ ಪ್ರಚಾರ ಮಾಡಲೇಬೇಕು. ನಮ್ಮ ಅಭ್ಯರ್ಥಿಗಳ ಪರ ಪ್ರಚಾರ ಮಾಡಲೇಬೇಕು ಎಂದರು. ಹಾಗೂ ನಂಬಿಕೆಗೆ ಕಾಂಗ್ರೆಸ್ ಪಕ್ಷ ಅರ್ಹವಲ್ಲವೆಂಬ ಹೆಚ್ಡಿ ರೇವಣ್ಣ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಸಿದ್ದರಾಮಯ್ಯ, ಅವರ ತಂದೆ ಇದ್ದರಲ್ಲಾ ದೇವೇಗೌಡರು ಅವರು ಕಾಂಗ್ರೆಸ್ ನಲ್ಲಿ ಇದ್ದವರು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಜನರ ನಂಬಿಕೆಗೆ ಅರ್ಹವಲ್ಲವಾ? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿ, ಜೆಡಿಎಸ್​ಗೆ ನಾನೇ ಟಾರ್ಗೆಟ್; ಇಬ್ಬರಿಗೂ ನನ್ನನ್ನು ಕಂಡರೆ ಭಯ: ಸಿದ್ದರಾಮಯ್ಯ ಹೇಳಿಕೆ

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ