AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಧರ್ಮಗುರು ವಿರುದ್ಧ ಮತ್ತೆ ಗುಡುಗಿದ ಯತ್ನಾಳ್​​: ತನ್ವೀರ್​​​ ಪೀರಾ ಕೊಲೆ ಆರೋಪಿ ಎಂದು ಟ್ವೀಟ್​

ವಿಜಯಪುರದ ಹಾಸೀಂಪೀರಾ ದರ್ಗಾದ ಧರ್ಮ ಗುರು ಸಯ್ಯದ್ ಮೊಹಮ್ಮದ್ ತನ್ವೀರ್​​​ ಪೀರಾ ಹಾಸ್ಮೀಂ ಅವರಿಗೆ ಉಗ್ರರ ಜೊತೆ ನಂಟಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಆರೋಪ ಮಾಡಿದ್ದರು. ಇದೀಗ ಬಸನಗೌಡ ಪಾಟೀಲ್​ ಯತ್ನಾಳ್ ಅವರು ತನ್ವೀರ್​​​ ಪೀರಾ ವಿರುದ್ಧ ಮತ್ತೊಂದು ಆರೋಪ ಮಾಡಿದ್ದಾರೆ.

ಮುಸ್ಲಿಂ ಧರ್ಮಗುರು ವಿರುದ್ಧ ಮತ್ತೆ ಗುಡುಗಿದ ಯತ್ನಾಳ್​​: ತನ್ವೀರ್​​​ ಪೀರಾ ಕೊಲೆ ಆರೋಪಿ ಎಂದು ಟ್ವೀಟ್​
ಬಸನಗೌಡ ಪಾಟೀಲ್​ ಯತ್ನಾಳ್​, ತನ್ವಿರ್​ ಪೀರಾ
TV9 Web
| Edited By: |

Updated on:Dec 08, 2023 | 9:58 AM

Share

ವಿಜಯಪುರ, ಡಿಸೆಂಬರ್​ 08: ಹುಬ್ಬಳ್ಳಿಯಲ್ಲಿ (Hubballi) ನಡೆದ ಮುಸ್ಲಿಂ ಸಮಾವೇಶದಲ್ಲಿ ಮುಖ್ಯ ಸಿದ್ದರಾಮಯ್ಯ (Siddaramaiah) ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಸಯ್ಯದ್ ಮೊಹಮ್ಮದ್ ತನ್ವೀರ್​​​ ಪೀರಾ ಹಾಸ್ಮೀಂ ಅವರಿಗೆ ಉಗ್ರರ ಜೊತೆ ನಂಟಿದೆ ಎಂದು ವಿಜಯಪುರದ (Vijyapura) ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Basangouda Patil Yatnal)​ ಆರೋಪ ಮಾಡಿದ್ದರು. ಇದೀಗ ಬಸನಗೌಡ ಪಾಟೀಲ್​ ಯತ್ನಾಳ್​ ಅವರು ತನ್ವೀರಾ ಪೀರಾ (Tanveer Peera) ಅವರ ವಿರುದ್ಧ ಮತ್ತೊಂದು ಆರೋಪ ಮಾಡಿದ್ದಾರೆ. ಧರ್ಮಗುರು ತನ್ವೀರ್​ ಪೀರಾ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದಾರೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಆರೋಪಿಸಿದ್ದಾರೆ.

ಈ ಕುರಿತು ಎಕ್ಸ್ (ಹಿಂದಿನ ಟ್ವಿಟರ್​) ನಲ್ಲಿ ಪೋಸ್ಟ್​​ ಮಾಡಿದ್ದಾರೆ. “ತನ್ವೀರ್ ಪೀರಾ ಕೊಲೆ ಕೇಸ್ ಒಂದರಲ್ಲಿ ಆರೋಪಿತನಾಗಿದ್ದು, ಕೊಲೆಯಾದ ವ್ಯಕ್ತಿಯ ಪತ್ನಿಯು ಸಾಕ್ಷಿ ನಾಶ ಮಾಡುವುದಲ್ಲದೆ, ನಮ್ಮ ಕುಟುಂಬಕ್ಕೆ, ಕಾರ್ಯಕರ್ತರಿಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿರುವ ಪತ್ರ” ಸಮೇತ ಟ್ವೀಟ್​ ಮಾಡಿದ್ದಾರೆ.

“ಕೊಲೆ ಪ್ರಕರಣದಲ್ಲಿ ಈತನ ಮೇಲೆ ಪೊಲೀಸರು ಹಾಕಿದ್ದ ದೋಷಾರೋಪ ಪಟ್ಟಿ (ಚಾರ್ಜಶೀಟ್) ನಿಂದ ಈತನ ಹೆಸರು ಕೈಬಿಟ್ಟಿದ್ದು ಏಕೆ ? ಯಾರ ಒತ್ತಡದಿಂದ ಈತನ ಹೆಸರನ್ನು ಚಾರ್ಜಶೀಟ್​ನಿಂದ ತೆಗಿಸಲಾಯಿತು? ತನಿಖೆ ವೇಳೆ ಕೊಲೆಯಲ್ಲಿ ಈತ ಭಾಗಿಯಾಗಿದ್ದ ಎಂಬ ಶಂಕೆಯಿಂದ ಚಾರ್ಜಶೀಟ್​ನಲ್ಲಿ ಮೊದಲು ಈತನ ಹೆಸರನ್ನು ಹಾಕಿ, ನಂತರ ತೆಗೆದು ಹಾಕಿದ್ದು ಯಾರ ಒತ್ತಡದಿಂದ ಎಂದು ಸರ್ಕಾರ ಹೇಳಲಿ” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ತನ್ವೀರ್ ಪೀರಾಗೆ ಐಸಿಸ್ ನಂಟು: ಯತ್ನಾಳ್​ ಸಾಬೀತುಪಡಿಸಿದರೆ ದೇಶ ಬಿಟ್ಟು ಹೋಗುತ್ತೇನೆ ಎಂದ ಮುಸ್ಲಿಂ ಧರ್ಮಗುರು

“ವೇದಿಕೆ ಮೇಲೆ ಕೊಲೆ ಆರೋಪಿತನಿಗೆ ಏನು ಕೆಲಸ ? ಇವನನ್ನು ವೇದಿಕೆ ಮೇಲೆ ಏಕೆ ಬಿಟ್ಟರು ? ಒಂದು ಬಡ ಕುಟುಂಬಕ್ಕೆ ಬೆದರಿಕೆ ಒಡ್ಡುವ ವ್ಯಕ್ತಿ ಅಥವಾ ವ್ಯಕ್ತಿಗಳೊಂದಿಗೆ ವೇದಿಕೆ ಹಂಚಿಕೊಳ್ಳುವ ಅವಶ್ಯಕತೆ ಏನಿತ್ತು? ಈತನ ಬಗ್ಗೆ ಇನ್ನಷ್ಟು ಮಾಹಿತಿ ಅತಿ ಶೀಘ್ರದಲ್ಲೇ ಹಂಚಿಕೊಳ್ಳಲಿದ್ದೇನೆ. ಈತ ದೇಶದಿಂದ ಕಾಲ್ಕಿತ್ತುವ ಸಾಧ್ಯತೆಗಳಿದ್ದು ಪೊಲೀಸರು ಹಾಗೂ ಗುಪ್ತಚರ ಇಲಾಖೆ ತನ್ವೀರ್​ ಪೀರಾನ ಮೇಲೆ ನಿಗಾ ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯನವರು “ನಮ್ಮ ಪೊಲೀಸರು ತನ್ವೀರ್​ ಪೀರಾ ಮನೆಗೆ ಹೋಗೋದು ಬೇಡ ಅಂತಾರೆ”. ಹೀಗೆ ಅಂದ ಮೇಲೂ ಸ್ವತಃ ಸಿದ್ದರಾಮಯ್ಯನವರೇ ತನ್ವೀರ್​ ಪೀರಾ ಅವರ ಮನೆಗೆ ಹೋಗಿರುವುದು ಓಲೈಕೆ ಅಲ್ಲದೆ ಮತ್ತೇನು? ಪೊಲೀಸರು ಸೂಕ್ಷ್ಮವಾಗಿ ಅವರ ಮನೆಗೆ ಹೋಗೋದು ಬೇಡ ಸಮಯ ಆಗಿದೆ ಅಂತ ಹೇಳಿದ ಮೇಲೂ ಸಿದ್ದರಾಮಯ್ಯನವರು ಪೀರಾ ಮನೆಗೆ ಭೇಟಿ ಕೊಟ್ಟಿದ್ದರು” ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:56 am, Fri, 8 December 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!