AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಧರ್ಮಗುರು, ಯತ್ನಾಳ್ ಮಧ್ಯೆ ಇತ್ತೇ ಪೂರ್ವದ್ವೇಷ? ಪ್ರಶ್ನೆ ಉದ್ಭವಕ್ಕೆ ಕಾರಣವಾಯ್ತು ಈ ಎರಡು ಪ್ರಸಂಗ

ಮುಸ್ಲಿಂ ಧರ್ಮಗುರು ಸಯ್ಯದ್ ಮೊಹಮ್ಮದ್ ತನ್ವೀರಾ ಪೀರಾ ಹಾಸ್ಮೀಂ ಐಸಿಸ್​ ಜೊತೆ ನಂಟು ಹೊಂದಿದ್ದಾನೆ ಎಂದು ಬಸನಗೌಡ ಪಾಟೀಲ್​​ ಯತ್ನಾಳ್​ ಆರೋಪ ಮಾಡಿದ್ದಾರೆ. ಹೀಗೆ ​ಆರೋಪ ಮಾಡಲು ಬಸನಗೌಡ ಪಾಟೀಲ್​ ಯತ್ನಾಳ್​ ಅವರಿಗೆ ಧರ್ಮಗುರು ಮೇಲೆ ವೈಯಕ್ತಿ ಧ್ವೇಷವಿದೆಯಾ? ಎಂಬ ಪ್ರಶ್ನೆಯೂ ಉದ್ಭವವಾಗಿದೆ. ಏನದು ವೈಯಕ್ತಿಕ ಧ್ವೇಷ ಇಲ್ಲಿದೆ ಓದಿ..

ಮುಸ್ಲಿಂ ಧರ್ಮಗುರು, ಯತ್ನಾಳ್ ಮಧ್ಯೆ ಇತ್ತೇ ಪೂರ್ವದ್ವೇಷ? ಪ್ರಶ್ನೆ ಉದ್ಭವಕ್ಕೆ ಕಾರಣವಾಯ್ತು ಈ ಎರಡು ಪ್ರಸಂಗ
ಬಸನಗೌಡ ಪಾಟೀಲ್​ ಯತ್ನಾಳ್, ಸಯ್ಯದ್ ಮೊಹಮ್ಮದ್​​ ತನ್ವೀರ್​ ಪೀರಾ ಹಾಸ್ಮೀ
Jagadisha B
| Edited By: ವಿವೇಕ ಬಿರಾದಾರ|

Updated on:Dec 08, 2023 | 9:45 AM

Share

ವಿಜಯಪುರ ಡಿ.06: ಕಳೆದ ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದ್ದ ಮುಸ್ಲಿಂ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಐಸಿಸ್​ ಜೊತೆ ನಂಟು ಹೊಂದಿದ್ದ ವ್ಯಕ್ತಿಯ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ (Basangouda Patil Yatnal) ಆರೋಪ ಮಾಡಿದ್ದರು. ಇದಾದ ಬಳಿಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಇವರೇ ನೋಡಿ ಐಸಿಸ್​ ಜೊತೆ ನಂಟು ಹೊಂದಿರವ ವ್ಯಕ್ತಿ ಎಂದು ವಿಜಯಪುರದ (Vijaypura) ಹಾಸೀಂಪೀರಾ ದರ್ಗಾದ ಧರ್ಮ ಗುರುಗಳಲ್ಲಿ ಒಬ್ಬರಾದ ಸಯ್ಯದ್ ಮೊಹಮ್ಮದ್ ತನ್ವೀರ್​​​ ಪೀರಾ ಹಾಸ್ಮೀಂ ಅವರ ಫೋಟೋವನ್ನು ಸಾಮಾಜಿಕ ಜಾಲತಾಣ ಅಕೌಂಟ್​​ನಲ್ಲಿ ಹಂಚಿಕೊಂಡರು. ಸದ್ಯ ಈ ವಿಚಾರ ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಅಲ್ಲದೆ ಅಧಿವೇಶನದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಆದರೆ ಇದೀಗ ಬಸನಗೌಡ ಪಾಟೀಲ್​​ ಯತ್ನಾಳ್​ ಅವರು ವೈಯಕ್ತಿಕ ದ್ವೇಷದಿಂದ ಈ ರೀತಿ ಆರೋಪ ಮಾಡಿದ್ರಾ? ಎಂಬ ಪ್ರಶ್ನೆ ಉದ್ಭವಾಗಲು ಈ ಕೆಳಗಿನ ಸನ್ನೀವೇಶಗಳು ಪುಷ್ಠಿ ನೀಡುವಂತಿವೆ.

ಹೌದು 2018ರ ವಿಧಾನಸಭೆ ಚುನಾವಣೆ ಬಳಿಕ ಜೂನ್​​​ ತಿಂಗಳಲ್ಲಿ ಶಾಸಕ ಬಸನಗೌಡ ಪಾಟೀಲ್ ವಿಜಯಪುರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. “ಬುರ್ಖಾಧಾರಿಗಳು, ಸ್ಕಲ್​ ಟೋಪಿ ಹಾಕಿದವರು‌ ಮತ್ತು ಗಡ್ಡದವರು ನನ್ನ ಹಿಂದೆ ಮುಂದೆ ಬರಬೇಡಿ” ಎಂದು ಹೇಳಿದ್ದರು. ಈ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು.

ಇದನ್ನೂ ಓದಿ: ಐಸಿಸ್ ನಂಟು ಹೊಂದಿರುವನ ಜತೆ ವೇದಿಕೆ ಹಂಚಿಕೊಂಡ ಸಿಎಂ: ಫೋಟೋ ಬಿಡುಗಡೆ ಮಾಡಿದ ಯತ್ನಾಳ್​

ಈ ಹೇಳಿಕೆ ಬಳಿಕ ನಡೆದ ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಕಾರ್ಯಕ್ರಮದಲ್ಲಿ “ಸಂದರ್ಭ ಬಂದರೇ ಬಕ್ರೀದಗೆ ಬಲಿ ಕಡಿಯುತ್ತೇವೆ” ಎಂದು ಪರೋಕ್ಷವಾಗಿ ಬಸನಗೌಡ ಪಾಟೀಲ್​ ಯತ್ನಾಳ್​ ಅವರಿಗೆ ಧರ್ಮಗುರು ಸಯ್ಯದ್ ಮೊಹಮ್ಮದ್​​ ತನ್ವೀರ್​ ಪೀರಾ ಹಾಸ್ಮೀ ಟಾಂಗ್ ಕೊಟ್ಟಿದ್ದರು.

ಈ ಕಾರಣದಿಂದ ಧರ್ಮಗುರು ಸಯ್ಯದ್ ಮೊಹಮ್ಮದ್​​ ತನ್ವೀರ್​ ಪೀರಾ ಹಾಸ್ಮೀ ಐಸಿಸ್​ ಜೊತೆ ನಂಟು ಹೊಂದಿದ್ದಾನೆ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ವೈಯಕ್ತಿಕ ದ್ವೇಷದಿಂದ​ಆರೋಪ ಮಾಡಿದರೇ ಎಂಬ ಪ್ರಶ್ನೆ ಉದ್ಭವವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:40 pm, Wed, 6 December 23

Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ