AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddeshwar Swamiji Health : ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಹೇಗಿದೆ? ಮಾಹಿತಿ ನೀಡಿದ ಡಿಸಿ, ಎಸ್ಪಿ, ವೈದ್ಯ, ಊಹಾಪೋಹಗಳಿಗೆ ತೆರೆ

ವಿಜಯಪುರ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಶ್ರಮಕ್ಕೆ ಡಿಸಿ ಡಾ. ಮಹಾಂತೇಶ ದಾನಮ್ಮನವರ, ಎಸ್ಪಿ ಹೆಚ್ ಡಿ ಆನಂದಕುಮಾರ, ವೈದ್ಯ ಡಾ. ಮಲ್ಲಣ್ಣ ಮೂಲಿಮನಿ ಮತ್ತು ಸುತ್ತೂರು ಶ್ರೀ ಭೇಟಿ ನೀಡಿದರು.

Siddeshwar Swamiji Health : ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಹೇಗಿದೆ? ಮಾಹಿತಿ ನೀಡಿದ ಡಿಸಿ, ಎಸ್ಪಿ, ವೈದ್ಯ, ಊಹಾಪೋಹಗಳಿಗೆ ತೆರೆ
ವಿಜಯಪುರ ಜ್ಞಾನಯೋಗಾಶ್ರಮಕ್ಕೆ ಸುತ್ತೂರು ಶ್ರೀಗಳ ಭೇಟಿ
TV9 Web
| Updated By: ವಿವೇಕ ಬಿರಾದಾರ|

Updated on: Jan 01, 2023 | 4:49 PM

Share

ವಿಜಯಪುರ: ವಿಜಯಪುರದ (Vijayapur) ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (Siddeshwar Swamiji) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಶ್ರಮಕ್ಕೆ ಜಿಲ್ಲಾಧಿಕಾರಿ ಡಾ. ಮಹಾಂತೇಶ ದಾನಮ್ಮನವರ, ಎಸ್ಪಿ ಹೆಚ್ ಡಿ ಆನಂದಕುಮಾರ, ವೈದ್ಯ ಡಾ. ಮಲ್ಲಣ್ಣ ಮೂಲಿಮನಿ ಮತ್ತು ಸುತ್ತೂರಿನ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಭೇಟಿ ನೀಡಿದರು. ಭೇಟಿ ಬಳಿಕ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ ಮಲ್ಲಣ್ಣ ಮೂಲಿಮನಿ ಮಾತನಾಡಿ ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಬೆಳಿಗ್ಗೆಯಿಂದ ನಾರ್ಮಲ್ ಇದ್ದಾರೆ. ಪಲ್ಸ್, ಬಿಪಿ, ಉಸಿರಾಟ ಸಹಜವಾಗಿದೆ. ಸ್ವಾಮೀಜಿ ಗಂಜಿ‌ ಕುಡಿದಿದ್ದಾರೆ. ನಿನ್ನೆ ಆಕ್ಸಿಜನ್ ಕಡಿಮೆಯಾಗಿತ್ತು. ಈಗ ನಾರ್ಮಲ್ ಇದೆ. ಕಳೆದ ಕೆಲ ದಿನಗಳಿಂದ ಊಟ ಮಾಡಿಲ್ಲ ಕಾರಣ ಅವರು ಹೊರಗೆ ಬರಲಾಗುತ್ತಿಲ್ಲ ಎಂದರು.

ಜಿಲ್ಲಾಧಿಕಾರಿ ಡಾ ಮಹಾಂತೇಶ ದಾನಮ್ಮನವರ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ದೇಶನದ ಮೇರೆಗೆ ಬಂದಿದ್ದೇವೆ. ನಿನ್ನೆ ಸಿಎಂ ಬೊಮ್ಮಾಯಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ದರ್ಶನ ಪಡೆದಿದ್ದಾರೆ. ಶ್ರೀಗಳ‌ಆರೋಗ್ಯದ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಬೇಕೆಂದು ಸೂಚನೆ ಇದೆ. ಅವರ ಸೂಚನೆ ಮೇರೆಗೆ ನಾವು ‌ನಿತ್ಯ ಭೇಟಿ ಮಾಡುತ್ತಿದ್ದೇವೆ. ಕೆಲ ಮಾದ್ಯಮದಲ್ಲಿ ತಪ್ಪು ಸಂದೇಶ ಬಂದಿದೆ. ತಪ್ಪು ಸಂದೇಶ ಬೇಡ. ವೈದ್ಯರು ಹೆಲ್ತ್ ಬುಲೆಟಿನ್ ನೀಡುತ್ತಾರೆ. ಶ್ರೀಗಳು ಊಟ ಮಾಡದ ಕಾರಣ ಅಶಕ್ತಿ ಇದೆ. ಭಕ್ತರು ಸಹಕಾರ ನೀಡಬೇಕು ಎಂದು ಹೇಳಿದರು.

ಇದನ್ನೂ ಓದಿ: ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ, ಮೋದಿ ಕೂಡ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ ಎಂದ ಸಚಿವ ಜೋಶಿ

ತಪ್ಪು ಸಂದೇಶ ಜನರಲ್ಲಿ ಹೋಗಿದ್ದು ಸುಳ್ಳು. ಭಕ್ತರ ನಿಯಂತ್ರಣಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ತಪ್ಪು ಸಂದೇಶದ ಕಾರಣ ಜನರು ಹೆಚ್ಚು ಬರುತ್ತಿದ್ದಾರೆ. ಈ ಕಾರಣ ನಾವು ಇಲ್ಲಿ ಬಂದಿದ್ದೇವೆ. ಅದನ್ನು ಬಿಟ್ಟು ಬೇರೆ ವಿಚಾರ ಇಲ್ಲ. ಶ್ರೀಗಳು ಆರೋಗ್ಯವಾಗಿದ್ದಾರೆ. ಏನೇ ಇದ್ದರೂ ಎಲ್ಲರ ಗಮನಕ್ಕೆ ತರುತ್ತೇವೆ. ಭಕ್ತರು ಗಾಬರಿಯಾಗಬೇಕಿಲ್ಲ. ಟ್ರಾಫಿಕ್, ಜನ ಸಂದನಿ, ಗದ್ದಲ ನಿವಾರಣೆಗೆ ಪೊಲೀಸ್ ಕ್ರಮ ತೆಗೆದುಕೊಳ್ಳುತ್ತಿದ್ದಾರೆ ಎಂದು ಎಸ್ಪಿ ಹೆಚ್ ಡಿ ಆನಂದಕುಮಾರ ಹೇಳಿದರು.

ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿರವಾಗಿದೆ.ಸಿದ್ದೇಶ್ವರ ಸ್ವಾಮೀಜಿರವರ ಪಲ್ಸ್ ರೇಟ್, ಬಿಪಿ ನಾರ್ಮಲ್ ಇದೆ. ಹೆಚ್ಚಿನ ಚಿಕಿತ್ಸೆಗೆ ಶ್ರೀಗಳು ಒಪ್ಪುತ್ತಿಲ್ಲ, ಆಹಾರವನ್ನೂ ಸ್ವೀಕರಿಸುತ್ತಿಲ್ಲ. ಸಿದ್ದೇಶ್ವರ ಶ್ರೀಗಳು ಆಹಾರ ಸೇವಿಸದ ಕಾರಣ ಅಶಕ್ತರಾಗಿದ್ದಾರೆ. ಸಿಎಂ ಬೊಮ್ಮಾಯಿ ಸೂಚನೆ ಮೇರೆಗೆ ಅಧಿಕಾರಿಗಳು ಓಡಾಡುತ್ತಿದ್ದಾರೆ. ಸಿಎಂ ಹಾಗೂ ಕೇಂದ್ರ ಸಚಿವರು ನಿನ್ನೆ ಶ್ರೀಗಳ ದರ್ಶನ ಪಡೆದಿದ್ದಾರೆ. ಪ್ರಧಾನಿ ಮೋದಿ ಕೂಡ ಸಿದ್ದೇಶ್ವರ ಶ್ರೀಗಳ ಜೊತೆ ಮಾತನಾಡಿದ್ದಾರೆ ಎಂದು ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ