AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದನ್ನು ಸೋಲು ಎಂದು ಕರೆಯುವುದಿಲ್ಲ: ಸಿಂದಗಿಯ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ

ಈಗ ಸೋತಿರಬಹುದು, ಆದರೆ ಹೆಚ್ಚು ಮತ ಪಡೆಯುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಎತ್ತರಕ್ಕೆ ಒಯ್ದಿದ್ದೇನೆ ಎಂಬ ಸಮಾಧಾನವಿದೆ. ಇನ್ನಷ್ಟು ಗಟ್ಟಿಯಾಗಿ ಕೆಲಸ ಮಾಡುತ್ತೇನೆ ಎಂದು ನುಡಿದರು

ಇದನ್ನು ಸೋಲು ಎಂದು ಕರೆಯುವುದಿಲ್ಲ: ಸಿಂದಗಿಯ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ
ಸಿಂದಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶ್ರೀನಿವಾಸ ಮಾನೆ
TV9 Web
| Edited By: |

Updated on:Nov 02, 2021 | 4:06 PM

Share

ವಿಜಯಪುರ: ಕ್ಷೇತ್ರದ ಜನ 60 ಸಾವಿರಕ್ಕೂ ಹೆಚ್ಚು ಮತ ನೀಡಿದ್ದಾರೆ‌‌. ಬಿಜೆಪಿಯವರು ದುಡ್ಡಿನಿಂದ ಉಪಚುನಾವಣೆ ಗೆದ್ದಿದ್ದಾರೆ. ನನಗೆ ಮತ ನೀಡಿದ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಿಂದಗಿ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಹೇಳಿದರು. ಉಪಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಮಾತನಾಡಿದ ಅವರು, ನಾನು ಇದನ್ನು ಸೋಲು ಎಂದು ಕರೆಯುವುದಿಲ್ಲ. ನನಗೆ ಸ್ವಲ್ಪ ಅನುಭವದ ಕೊರತೆಯೂ ಇರಬಹುದು. ಎಲ್ಲಿ ಎಡವಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.

ಅನುಕಂಪದ ಆಧಾರದ ಮೇಲೆ ಸೋತವರು ಈ ಹಿಂದೆಯೂ ಬಹಳಷ್ಟು ಜನರಿದ್ದಾರೆ‌‌. ಇದು ನನಗೆ ಮೊದಲ ಚುನಾವಣೆ. ಸ್ವಲ್ಪ ಅನುಭವದ ಕೊರತೆಯೂ ಇರಬಹುದು. ಈಗ ಸೋತಿರಬಹುದು, ಆದರೆ ಹೆಚ್ಚು ಮತ ಪಡೆಯುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಎತ್ತರಕ್ಕೆ ಒಯ್ದಿದ್ದೇನೆ ಎಂಬ ಸಮಾಧಾನವಿದೆ. ಇನ್ನಷ್ಟು ಗಟ್ಟಿಯಾಗಿ ಕೆಲಸ ಮಾಡುತ್ತೇನೆ ಎಂದು ನುಡಿದರು.

ಬಿಜೆಪಿ ವಿರುದ್ಧ ಹಣಹಂಚಿಕೆ ಆರೋಪ ಮಾಡಿದ ಕಾಂಗ್ರೆಸ್ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಸಿಕ್ಕಿದೆ. ಬಿಜೆಪಿಯು ಹಣ ಹಂಚಿಕೆ ಮಾಡಿದ್ದೇ ಕಾಂಗ್ರೆಸ್ ಸೋಲಿಗೆ ಕಾರಣ ವಿಜಯಪುರದಲ್ಲಿ ಮಾಜಿ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಸಹ ಇಂಥದ್ದೇ ಆರೋಪ ಮಾಡಿದೆ.

ಬಿಜೆಪಿಯವರು ಹಣ ಹಂಚಿ ಉಪಚುನಾವಣೆ ಗೆದ್ದಿದ್ದಾರೆ‌. ಸಿಂದಗಿ ಕ್ಷೇತ್ರದಲ್ಲಿ ಈ ಹಿಂದೆ ಎಂದಿಗೂ ಕಾಂಗ್ರೆಸ್ ಇಷ್ಟು ಮತ ಪಡೆದಿರಲಿಲ್ಲ. ಆದರೆ ಈ ಬಾರಿ 60 ಸಾವಿರಕ್ಕೂ ಹೆಚ್ಚು ಮತ ಪಡೆದಿದೆ. ಅಧಿಕ ಮತ ಪಡೆದು ಕಾಂಗ್ರೆಸ್​​ ಪಕ್ಷದ ಮುಂದಿನ ಗೆಲುವಿಗೆ ಈ ಉಪ ಚುನಾವಣೆಯು ಬುನಾದಿ ಹಾಕಿದೆ. ಮುಂದಿನ ದಿನಗಳಲ್ಲಿ ಖಂಡಿತ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಅವರು ನುಡಿದರು.

ನಮ್ಮ ಅಭ್ಯರ್ಥಿ ಅಶೋಕ ಮನಗೂಳಿ ನಾವು ಸೋತಿದ್ದರೂ ಇದು ನಮ್ಮ ಸೋಲಲ್ಲ. ಎಂ.ಸಿ.ಮನಗೂಳಿ ಅಕಾಲಿಕ ಮರಣದಿಂ ಅವರ ಪುತ್ರನಿಗೆ ಆಸರೆಯಾಗಬೇಕಿದ್ದ ಒದಗಬೇಕಿದ್ದ ಅನುಕಂಪದ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಅವರು, ಎಲ್ಲ ಕಾಲದಲ್ಲೂ ಅನುಕಂಪ ಫಲ ಕೊಡುವುದಿಲ್ಲ. ಆದರೂ ಮತದಾರರು ಇಷ್ಟೊಂದು ಸಂಖ್ಯೆಯಲ್ಲಿ ಮತ ನೀಡಿದ್ದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಶಿವಾನಂದ ಪಾಟಿಲ್ ಹೇಳಿದರು.

ಇದನ್ನೂ ಓದಿ: Sindagi By Election Winner: ಸಿಂದಗಿ ಅಸೆಂಬ್ಲಿ ಗದ್ದುಗೆ ಬಿಜೆಪಿಗೆ, ರಮೇಶ ಭೂಸನೂರ ಜಯಭೇರಿ ಇದನ್ನೂ ಓದಿ:

Published On - 4:05 pm, Tue, 2 November 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್