AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ಉಪ‌ನೋಂದಣಾಧಿಕಾರಿಗಳ ಕಚೇರಿಯಲ್ಲಿ ಲಂಚಾವತಾರ; ಸರ್ಕಾರಿ ಶುಲ್ಕಕ್ಕಿಂತಲು ಹೆಚ್ಚಿಗೆ ಹಣ ಪಡೆಯುತ್ತಿರುವ ಆರೋಪ

ವಿಜಯಪುರ ಜಿಲ್ಲೆಯ ಇಂಡಿ (Indi) ಉಪ‌ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮತ್ತೆ ಏಜೆಂಟರ್ ಹಾವಳಿ ಹೆಚ್ಚಾಗಿದ್ದು, ಸರ್ಕಾರಿ ಶುಲ್ಕದ ಹೊರತಾಗಿಯೂ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ.

ವಿಜಯಪುರ ಉಪ‌ನೋಂದಣಾಧಿಕಾರಿಗಳ ಕಚೇರಿಯಲ್ಲಿ ಲಂಚಾವತಾರ;  ಸರ್ಕಾರಿ ಶುಲ್ಕಕ್ಕಿಂತಲು ಹೆಚ್ಚಿಗೆ ಹಣ ಪಡೆಯುತ್ತಿರುವ ಆರೋಪ
ವಿಜಯಪುರ
TV9 Web
| Edited By: |

Updated on: Jun 06, 2022 | 7:56 PM

Share

ವಿಜಯಪುರ: ಜಿಲ್ಲೆಯ ಇಂಡಿ (Indi) ಉಪ‌ನೋಂದಣಾಧಿಕಾರಿಗಳ (sub registrar) ಕಚೇರಿಯಲ್ಲಿ ಮತ್ತೆ ಏಜೆಂಟರ್ ಹಾವಳಿ ಹೆಚ್ಚಾಗಿದ್ದು, ಸರ್ಕಾರಿ ಶುಲ್ಕದ ಹೊರತಾಗಿಯೂ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ. ಹಕ್ಕು ಪತ್ರ ಬದಲಾವಣೆಗೆ ಇಂಡಿ ನಿವಾಸಿ ಗಣೇಶ್ ಎಂಬುವರ ಬಳಿ ಏಜೆಂಟ್ ಸಿದ್ದಪ್ಪ ಕೊಪ್ಪ‌ ಎಂಬುವವರಿಂದ 10-11 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಡಲಾಗಿದೆ. ಉಪನೋಂದಣಾಧಿಕಾರಿ ಮೊಹಮ್ಮದ ಪಟೇಲ್​ ಅನತಿಯಂತೆ ಲಂಚಾವತಾರ ನಡೆಯುತ್ತಿದೆ ಎಂದು ಸ್ಥಳಿಯರ ಆರೋಪ ಮಾಡುತ್ತಿದ್ದಾರೆ.

ಇದನ್ನು ಓದಿ: ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ: ನೂಪುರ್ ಶರ್ಮಾಗೆ ಸಮನ್ಸ್ ಕಳಿಸಲಿದೆ ಮುಂಬೈ ಪೊಲೀಸ್

ಏಜೆಂಟರುಗಳೇ ಕೂಡಿಕೊಂಡು ಸದ್ಗುರು ಸಮರ್ಥ ಸೌಹಾರ್ದ ಸಹಕಾರಿ‌ ಬ್ಯಾಂಕ್‌ ಸ್ಥಾಪಿಸಿಕೊಂಡಿದ್ದಾರೆ. ಅದೇ ಬ್ಯಾಂಕ್​ನಲ್ಲಿ ಕೆ2 ಚಲನ್ ಕಟ್ಟಬೇಕೆಂದು ನಿಯಮ ಜಾರಿ ಮಾಡಿದ್ದಾರೆ.  ಈ ಬಗ್ಗೆ ಮೊಹಮ್ಮದ್ ಪಟೇಲ್ ಮೇಲೆ ಜಿಲ್ಲಾ ನೋಂದಣಾಧಿಕಾರಿ ಯಾವುದೆ ಕ್ರಮ‌ ಕೈಗೊಂಡಿಲ್ಲ. ಜಿಲ್ಲಾ ನೋಂದಣಾಧಿಕಾರಿ ನಾಡಗೌಡ ಸಹ ಶಾಮೀಲು ಆಗಿರುವ  ಆರೋಪ ಕೇಳಿ ಬರುತ್ತಿದೆ. ಎಜೆಂಟರ್ ಮೂಲಕ ಸಬ್ ರೆಜಿಸ್ಟಾರ್ ಲಂಚದ ಹಣ ವಸೂಲಿ ಮಾಡುತ್ತಿದ್ದಾರಾ? ಕಳೆದ ಕೆಲ ದಿನಗಳ ಹಿಂದಷ್ಟೇ ತನ್ನ ‌ಕಿರಿಯ ಸಹೋದರ ಸಯ್ಯದ್‌ ಪಟೇಲ್ ಗೆ ಉಪ‌ನೋಂದಣಾಧಿಕಾರಿ ಕಚೇರಿಯಲ್ಲೇ ಕೆಲಸ ಮಾಡಲು ಅನಧಿಕೃತವಾಗಿ ಸಬ್ ರೆಜಿಸ್ಟಾರ್ ಮಹಮ್ಮದರಫಿ ಪಟೇಲ್ ಒಳ ಬಿಟ್ಟಿದ್ದರು.

ಇದನ್ನು ಓದಿ: ಕರೆನ್ಸಿಗಳಲ್ಲಿ ಗಾಂಧಿ ಚಿತ್ರವನ್ನು ಬದಲಿಸುವ ಪ್ರಸ್ತಾವ ಇಲ್ಲ ಎಂದ ಆರ್​ಬಿಐ

ಶಾಸಕರ ಕೊಠಡಿಯಲ್ಲಿ ಮಹಿಳಾ ಅಧಿಕಾರಿಯಿಂದ ಗದ್ದಲ

ಬೆಂಗಳೂರು: ಶಾಸಕ ದಡೆಸುಗೂರು ಕೊಠಡಿಗೆ ನುಗ್ಗಿ ಮಹಿಳಾ ಅಧಿಕಾರಿ ನ್ಯಾಯ ಕೊಡಿಸುವಂತೆ ಗದ್ದಲ ಎಬ್ಬಿಸಿದ್ದಾರೆ. ಅನ್ಯಾಯವಾಗಿದೆ ಎಂದು ಮಹಿಳೆ ಗದ್ದಲ ಮಾಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಶಾಸಕರ ಭವನದ ಭದ್ರತಾ ಪೊಲೀಸ್, ಮಹಿಳೆಯನ್ನ ಶಾಸಕರ ಭವನದಿಂದ ಕಳುಹಿಸಿದ್ದಾರೆ. ಮಹಿಳಾ ಅಧಿಕಾರಿ ಗದ್ದಲ ಹಿನ್ನೆಲೆ  ಶಾಸಕರ ಭವನದಿಂದ ಹೊರನಡೆದ ಶಾಸಕ ದಡೆಸುಗೂರುಬೀಗ ಹಾಕಿಕೊಂಡು ಹೊರಟು ಹೋಗಿದ್ದಾರೆ.

ಈ ಸಂಬಂಧ ಬಿಜೆಪಿ ಶಾಸಕ ದಡೆಸಗೂರು ಶಾಸಕ ಭವನದ ಕೊಠಡಿಗೆ ಪೊಲೀಸ್ ಭದ್ರತೆ ಹೆಚ್ಚಿದೆ. ಶಾಸಕರ ಕೊಠಡಿಯಲ್ಲಿ ಮಹಿಳಾ ಅಧಿಕಾರಿಯಿಂದ ಮಾತಿ‌ನ ಚಕಮಕಿ ನಡೆದಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ