ವಿಜಯಪುರ: ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ರಸ್ತೆ ಬದಿ ನಿಲ್ಲಿಸಲಾಗಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದಿದೆ. ಇನ್ನೊಂದೆಡೆ, ಬೈಕಿನಿಂದ ಬಿದ್ದ ಬೈಕ್ ಸವಾರನ ಮೇಲೆ KSRTC ಬಸ್ ಹರಿದು ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿಜಯಪುರ: ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು
ಮುದ್ದೇಬಿಹಾಳದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಸಾವು (ಸಾಂದರ್ಭಿಕ ಚಿತ್ರ)
Edited By: Rakesh Nayak Manchi

Updated on: Nov 30, 2023 | 9:08 AM

ವಿಜಯಪುರ, ನ.30: ರಸ್ತೆ ಬದಿ ನಿಲ್ಲಿಸಲಾಗಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ (Accident) ಹೊಡೆದು ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ವಿಜಯಪುರ (Vijayapura) ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುಲಗಬಾಲ್ ಕ್ರಾಸ್ ಬಳಿ ನಡೆದಿದೆ. ತುಂಬಗಿ ಗ್ರಾಮದ ಮೆಹಬೂಬ್ (35) ಮತ್ತು ಹುಸೇನ್ ​(38) ಮೃತ ದುರ್ದೈವಿಗಳು.

ಮೆಹಬೂಬ್ ಮತ್ತು ಹುಸೇನ್ ಬೈಕ್ ಮೂಲಕ ತಾಳಿಕೋಟೆಯಿಂದ ಮುದ್ದೇಬಿಹಾಳಕ್ಕೆ ತೆರಳುತ್ತಿದ್ದಾಗ ರಸ್ತೆ ಬದಿ ನಿಲ್ಲಿಸಲಾಗಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ತಾಳಿಕೋಟೆ ಠಾಣಾ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ಅಂಗಾಂಗ ರವಾನೆ ವೇಳೆ ಆಂಬುಲೆನ್ಸ್ ಅಪಘಾತ; ಸ್ವಂತ ಗಾಯ ಲೆಕ್ಕಿಸದೆ ರೋಗಿಗೆ ಶ್ವಾಸಕೋಶ ಕಸಿ ಶಸ್ತ್ರಕ್ರಿಯೆ ನಡೆಸಿದ ವೈದ್ಯ

ಬೈಕ್ ಸವಾರನ ಮೇಲೆ ಹರಿದ ಕೆಎಸ್​ಆರ್​ಟಿಸಿ ಬಸ್

ಬೆಂಗಳೂರು: ಬೈಕಿನಿಂದ ಬಿದ್ದ ಸವಾರನ ಮೇಲೆ ಕೆಎಸ್​ಆರ್​ಟಿಸಿ ಬಸ್ ಹರಿದಿದ್ದು, ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಬೆಂಗಳೂರು ನಗರದ ಮೈಸೂರು ಸ್ಯಾಂಡಲ್ ಸೋಫ್ ಪ್ಯಾಕ್ಟರಿ ಬಳಿ ನಡೆದಿದೆ. ಸಿದ್ದಾನಂಜಪ್ಪ (68) ಮೃತ ದುರ್ದೈವಿ.

ನವೆಂಬರ್ 21 ರಂದು ಸಂಜೆ 6 ಗಂಟೆ ಸುಮಾರಿಗೆ ನಡೆದಿದ್ದ ಅಫಘಾತ ಇದಾಗಿದ್ದು, ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಅಪಘಾತದ ದೃಶ್ಯವಾಳಿ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us