AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯತ್ನಾಳ್​ ವಿರುದ್ದ ನಕಲಿ ಮತದಾನ ಆರೋಪ ಮಾಡಿದ್ದ ಅಬ್ದುಲ್​ಗೆ 1 ಲಕ್ಷ ದಂಡ ವಿಧಿಸಿದ ಕೋರ್ಟ್

2023 ರ ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ಮಾಡಿರುವ ಆರೋಪದ ಮೇಲೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಯತ್ನಾಳ್​ ವಿರುದ್ದ ಪ್ರತಿಸ್ಪರ್ಧಿ ಕಾಂಗ್ರೆಸ್​ನ ಅಬ್ದುಲ್ ಹಮೀದ್ ಮುಶ್ರೀಫ್ ಚುನಾವಣಾ ಆಯೋಗಕ್ಕೆ ದೂರು‌ ನೀಡಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ‌ ಇದೀಗ ಅರ್ಜಿಯನ್ನು ವಜಾಗೊಳಿಸಿ, ದೂರುದಾರರಿಗೆ ದಂಡ ವಿಧಿಸಿದೆ.

ಯತ್ನಾಳ್​ ವಿರುದ್ದ ನಕಲಿ ಮತದಾನ ಆರೋಪ ಮಾಡಿದ್ದ ಅಬ್ದುಲ್​ಗೆ 1 ಲಕ್ಷ ದಂಡ ವಿಧಿಸಿದ ಕೋರ್ಟ್
ಯತ್ನಾಳ್​ ವಿರುದ್ದ ನಕಲಿ ಮತದಾನ ಆರೋಪ ಮಾಡಿದ್ದ ಅಬ್ದುಲ್​ಗೆ 1 ಲಕ್ಷ ದಂಡ ವಿಧಿಸಿದ ಕೋರ್ಟ್
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jul 12, 2024 | 9:50 PM

Share

ವಿಜಯಪುರ, ಜು.12: ನಕಲಿ ಮತದಾನ ಮಾಡಿದ್ದರೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal)​ ವಿರುದ್ದದ ಆರೋಪವನ್ನು​ ವಜಾ ಮಾಡಿ, ದೂರುದಾರ ಅಬ್ದುಲ್ ಹಮೀದ್ ಮುಶ್ರೀಫ್​ಗೆ ಹೈಕೋರ್ಟ್(High Court) ದಂಡ ವಿಧಿಸಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ಮಾಡಿರುವ ಆರೋಪದ ಮೇಲೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಯತ್ನಾಳ್​ ವಿರುದ್ದ ಪ್ರತಿಸ್ಪರ್ಧಿ ಕಾಂಗ್ರೆಸ್​ನ ಅಬ್ದುಲ್ ಹಮೀದ್ ಮುಶ್ರೀಫ್ ಚುನಾವಣಾ ಆಯೋಗಕ್ಕೆ ದೂರು‌ ನೀಡಿದ್ದರು.

ಪ್ರಕರಣ ವಜಾ ಮಾಡಿದ ಹೈಕೋರ್ಟ್

ಈ ಕುರಿತು ಇಂದು(ಶುಕ್ರವಾರ) ವಿಚಾರಣೆ ನಡೆಸಿದ್ದ ಹೈಕೋರ್ಟ‌್, ಯತ್ನಾಳ್​ ವಿರುದ್ಧದ ಪ್ರಕರಣ ವಜಾ ಮಾಡಿ, ದೂರುದಾರ ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಅಬ್ದುಲ್ ಹಮೀದ್ ಮುಶ್ರೀಫ್​ಗೆ 1 ಲಕ್ಷ ರೂ. ದಂಡ ಕಟ್ಟುವಂತೆ ನ್ಯಾಯಾಧೀಶೆ ಹೇಮಲೇಖಾ ಅವರು ಆದೇಶಿಸಿದ್ದಾರೆ. ಈ ಕುರಿತು ಶಾಸಕ ಯತ್ನಾಳ್​ ತಮ್ಮ ಟ್ವಿಟ್ಟರ್, ಪೇಸ್ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಯತ್ನಾಳ್​ ಟ್ವೀಟ್​

ಇದನ್ನೂ ಓದಿ:ಉಚಿತ ಭಾಗ್ಯಗಳಿಂದ ಕರ್ನಾಟಕದ ಹಣಕಾಸು ಸ್ಥಿತಿ ಗಂಭೀರ: ಕ್ರಮಕ್ಕೆ ಆಗ್ರಹಿಸಿ ನಿರ್ಮಲಾ ಸೀತಾರಾಮನ್​ಗೆ ಯತ್ನಾಳ್ ಪತ್ರ

‘ನನ್ನ ವಿರುದ್ದ ರಾಜಕೀಯ ಪ್ರೇರಿತವಾಗಿ ದುರುದ್ದೇಶದಿಂದ ದಾಖಲಿಸಿದ್ದ “ಚುನಾವಣಾ ಅರ್ಜಿಯನ್ನು”  ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ವಜಾಗೊಳಿಸಿದೆ ಹಾಗೂ ಅರ್ಜಿದಾರರಿಗೆ 1ಲಕ್ಷ ದಂಡ ಹಾಕಿದೆ. ಸತ್ಯಮೇವ ಜಯತೆ ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More