Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯತ್ನಾಳ್​ ವಿರುದ್ದ ನಕಲಿ ಮತದಾನ ಆರೋಪ ಮಾಡಿದ್ದ ಅಬ್ದುಲ್​ಗೆ 1 ಲಕ್ಷ ದಂಡ ವಿಧಿಸಿದ ಕೋರ್ಟ್

2023 ರ ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ಮಾಡಿರುವ ಆರೋಪದ ಮೇಲೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಯತ್ನಾಳ್​ ವಿರುದ್ದ ಪ್ರತಿಸ್ಪರ್ಧಿ ಕಾಂಗ್ರೆಸ್​ನ ಅಬ್ದುಲ್ ಹಮೀದ್ ಮುಶ್ರೀಫ್ ಚುನಾವಣಾ ಆಯೋಗಕ್ಕೆ ದೂರು‌ ನೀಡಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ‌ ಇದೀಗ ಅರ್ಜಿಯನ್ನು ವಜಾಗೊಳಿಸಿ, ದೂರುದಾರರಿಗೆ ದಂಡ ವಿಧಿಸಿದೆ.

ಯತ್ನಾಳ್​ ವಿರುದ್ದ ನಕಲಿ ಮತದಾನ ಆರೋಪ ಮಾಡಿದ್ದ ಅಬ್ದುಲ್​ಗೆ 1 ಲಕ್ಷ ದಂಡ ವಿಧಿಸಿದ ಕೋರ್ಟ್
ಯತ್ನಾಳ್​ ವಿರುದ್ದ ನಕಲಿ ಮತದಾನ ಆರೋಪ ಮಾಡಿದ್ದ ಅಬ್ದುಲ್​ಗೆ 1 ಲಕ್ಷ ದಂಡ ವಿಧಿಸಿದ ಕೋರ್ಟ್
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 12, 2024 | 9:50 PM

ವಿಜಯಪುರ, ಜು.12: ನಕಲಿ ಮತದಾನ ಮಾಡಿದ್ದರೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal)​ ವಿರುದ್ದದ ಆರೋಪವನ್ನು​ ವಜಾ ಮಾಡಿ, ದೂರುದಾರ ಅಬ್ದುಲ್ ಹಮೀದ್ ಮುಶ್ರೀಫ್​ಗೆ ಹೈಕೋರ್ಟ್(High Court) ದಂಡ ವಿಧಿಸಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ಮಾಡಿರುವ ಆರೋಪದ ಮೇಲೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಯತ್ನಾಳ್​ ವಿರುದ್ದ ಪ್ರತಿಸ್ಪರ್ಧಿ ಕಾಂಗ್ರೆಸ್​ನ ಅಬ್ದುಲ್ ಹಮೀದ್ ಮುಶ್ರೀಫ್ ಚುನಾವಣಾ ಆಯೋಗಕ್ಕೆ ದೂರು‌ ನೀಡಿದ್ದರು.

ಪ್ರಕರಣ ವಜಾ ಮಾಡಿದ ಹೈಕೋರ್ಟ್

ಈ ಕುರಿತು ಇಂದು(ಶುಕ್ರವಾರ) ವಿಚಾರಣೆ ನಡೆಸಿದ್ದ ಹೈಕೋರ್ಟ‌್, ಯತ್ನಾಳ್​ ವಿರುದ್ಧದ ಪ್ರಕರಣ ವಜಾ ಮಾಡಿ, ದೂರುದಾರ ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಅಬ್ದುಲ್ ಹಮೀದ್ ಮುಶ್ರೀಫ್​ಗೆ 1 ಲಕ್ಷ ರೂ. ದಂಡ ಕಟ್ಟುವಂತೆ ನ್ಯಾಯಾಧೀಶೆ ಹೇಮಲೇಖಾ ಅವರು ಆದೇಶಿಸಿದ್ದಾರೆ. ಈ ಕುರಿತು ಶಾಸಕ ಯತ್ನಾಳ್​ ತಮ್ಮ ಟ್ವಿಟ್ಟರ್, ಪೇಸ್ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಯತ್ನಾಳ್​ ಟ್ವೀಟ್​

ಇದನ್ನೂ ಓದಿ:ಉಚಿತ ಭಾಗ್ಯಗಳಿಂದ ಕರ್ನಾಟಕದ ಹಣಕಾಸು ಸ್ಥಿತಿ ಗಂಭೀರ: ಕ್ರಮಕ್ಕೆ ಆಗ್ರಹಿಸಿ ನಿರ್ಮಲಾ ಸೀತಾರಾಮನ್​ಗೆ ಯತ್ನಾಳ್ ಪತ್ರ

‘ನನ್ನ ವಿರುದ್ದ ರಾಜಕೀಯ ಪ್ರೇರಿತವಾಗಿ ದುರುದ್ದೇಶದಿಂದ ದಾಖಲಿಸಿದ್ದ “ಚುನಾವಣಾ ಅರ್ಜಿಯನ್ನು”  ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ವಜಾಗೊಳಿಸಿದೆ ಹಾಗೂ ಅರ್ಜಿದಾರರಿಗೆ 1ಲಕ್ಷ ದಂಡ ಹಾಕಿದೆ. ಸತ್ಯಮೇವ ಜಯತೆ ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್