AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಬಿಎಸ್​ಎನ್​ಎಲ್ ಜನರಲ್ ಮ್ಯಾನೇಜರ್ ಕಾರು ಜಪ್ತಿ

ಭಾರತ ಸಂಚಾರ ನಿಗಮ ಲಿಮಿಟೆಡ್​ನ (BSNL) ಬೆಳಗಾವಿ ವಿಜಯಪುರ ಬಾಗಲಕೋಟೆ ಜಿಲ್ಲೆಗಳ ಜನರಲ್ ಮ್ಯಾನೇಜರ್ ವಿಕಾಸ್ ಜೈಕರ್ ಅವರ ಕಾರು ಜಪ್ತಿ ಮಾಡಲಾಗಿದೆ. ನಿಗಮದಿಂದ ನೀಡಿದ ಕಾರಿನ ಬದಲು ಬೇರೆ ಕಾರು ಬಳಕೆ ಮಾಡುತ್ತಿದ್ದ ಬಗ್ಗೆ ಸಿಬ್ಬಂದಿ ನೀಡಿದ ದೂರಿನ ಅನ್ವಯ ಪೊಲೀಸರು ವಿಕಾಸ್ ಜೈಕರ್ ಬಳಸುತ್ತಿದ್ದ ಕಾರನ್ನು ಜಪ್ತಿ ಮಾಡಿದ್ದಾರೆ.

ವಿಜಯಪುರ: ಬಿಎಸ್​ಎನ್​ಎಲ್ ಜನರಲ್ ಮ್ಯಾನೇಜರ್ ಕಾರು ಜಪ್ತಿ
ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಜನರಲ್ ಮ್ಯಾನೇಜರ್ ವಿಕಾಸ್ ಜೈಕರ್ ಬಳಕೆ ಮಾಡುತ್ತಿದ್ದ ವೈಟ್ ಬೋರ್ಡ್ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Feb 12, 2024 | 2:49 PM

Share

ವಿಜಯಪುರ, ಫೆ.12: ಭಾರತ ಸಂಚಾರ ನಿಗಮ ಲಿಮಿಟೆಡ್ (BSNL) ಜನರಲ್ ಮ್ಯಾನೇಜರ್ ಬಳಕೆ ಮಾಡುತ್ತಿದ್ದ ಕಾರು ಜಪ್ತಿ ಮಾಡಲಾಗಿದೆ. ನಿಗಮದಿಂದ ನೀಡಿದ ಕಾರಿನ ಬದಲು ಬೇರೆ ಕಾರು ಬಳಕೆ ಮಾಡುತ್ತಿದ್ದ ಬಗ್ಗೆ ಸಿಬ್ಬಂದಿ ನೀಡಿದ ದೂರಿನ ಅನ್ವಯ ಪೊಲೀಸರು ವಿಕಾಸ್ ಜೈಕರ್ ಬಳಸುತ್ತಿದ್ದ ಕಾರನ್ನು ಜಪ್ತಿ ಮಾಡಿದ್ದಾರೆ.

ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಜನರಲ್ ಮ್ಯಾನೇಜರ್ ಆಗಿ ವಿಕಾಸ್ ಜೈಕರ್ ಕೆಲಸ ಮಾಡುತ್ತಿದ್ದಾರೆ. ಬಿಎಸ್​ಎಲ್​ನಿಂದ ಕಾರು ನೀಡಿದ್ದರೂ ವಿಕಾಸ್ ಜೈಕರ್ ಅವರು ಬೆಳಗಾವಿಯಿಂದ ಖಾಸಗಿ (ವೈಟ್ ಬೋರ್ಡ್) ಕಾರು ಮೂಲಕ ವಿಜಯಪುರದ ಕಚೇರಿಗೆ ಹೋಗಿದ್ದರು.

ಇದನ್ನೂ ಓದಿ: ಕಲಬುರಗಿ: ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡ್ತಿದ್ದ ಲಾರಿ ಜಪ್ತಿ: ಹಿಂದಿದೆಯಾ ಸ್ಥಳೀಯ ಜನಪ್ರತಿನಿಧಿಗಳ ಕೈವಾಡ?

ಬಿಎಸ್ಎನ್ಎಲ್​ನಿಂದ KA 22 C 8059 ಎಲೋ ಬೋರ್ಡ್ ಕಾರ್ ನೀಡಲಾಗಿತ್ತು. ಈ ಕಾರಿನ ಬದಲಾಗಿ ವಿಕಾಸ್ ಜೈಕರ್ ಅವರು KA 22 MB 0494 ನಂಬರಿನ ಕಾರ್ ಬಳಕೆ ಮಾಡುತ್ತಿದ್ದರು. ಈ ವಿಕಾಸ್ ಜೈಕರ್ ಅವರನ್ನು ಬಿಎಸ್ಎನ್ಎಲ್ ಸಿನೀಯರ್ ಆಫೀಸ್ ಅಸೋಸಿಯೇಟ್ ಸುರೇಶ ಬಿರಾದಾರ್ ಅವರು ಪ್ರಶ್ನೆ ಮಾಡಿದ್ದರು.

ಬೆಳಗಾವಿಂದ ವಿಜಯಪುರಕ್ಕೆ ಪ್ರತಿಬಾರಿ ಪತ್ನಿಯನ್ನು ಕರೆದುಕೊಂಡು ಹೋಗುತ್ತಾರೆ ಎಂಬ ಆರೋಪವೂ ಕೇಳಿಬಂದಿದೆ. ಅಲ್ಲದೆ, ಜನರಲ್ ಮ್ಯಾನೇಜರ್ ಬೇರೆ ಕಾರು ಬಳಕೆ ಮಾಡುತ್ತಿರುವ ಕುರಿತು ಬಿಎಸ್ಎನ್ಎಲ್ ನೌಕರರೊಬ್ಬರು 112 ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ 112 ಪೊಲೀಸರು ಪರಿಶೀಲನೆ ನಡೆಸಿ ವಿಕಾಸ್ ಜೈಕರ್ ಬಳಕೆ ಮಾಡುತ್ತಿದ್ದ ಬೇರೆ ಕಾರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಗಾಂಧಿಚೌಕ್ ಠಾಣೆಯ ಪೊಲೀಸರು ವಿಚಾರಣೆ ಕೂಡ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು