AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಹೆಸರಿಗೆ ಮಾತ್ರ ಚೆಕ್​ಪೋಸ್ಟ್; ತಪಾಸಣೆ ನಡೆಸದೆ ಸಿಬ್ಬಂದಿ ನಿರ್ಲಕ್ಷ್ಯ

ಮಹಾರಾಷ್ಟ್ರ ಹಾಗೂ ಕರ್ನಾಟಕ ಸಂಪರ್ಕಿಸುವ ವಿಜಾಪುರದ 11 ರಸ್ತೆಗಳಲ್ಲಿ ಕೊರೊನಾ ಕುರಿತ ತಪಾಸಣೆ ನೆಪಮಾತ್ರಕ್ಕೆ ನಡೆಯುತ್ತಿದೆ. ಕೊವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆಯೇ ಇಲಾಖೆಗಳ ನಿರ್ಲಕ್ಷ್ಯಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಹೆಸರಿಗೆ ಮಾತ್ರ ಚೆಕ್​ಪೋಸ್ಟ್; ತಪಾಸಣೆ ನಡೆಸದೆ ಸಿಬ್ಬಂದಿ ನಿರ್ಲಕ್ಷ್ಯ
ಚೆಕ್​ಪೋಸ್ಟ್ ಸಮೀಪದ ದೃಶ್ಯ
TV9 Web
| Edited By: |

Updated on: Dec 05, 2021 | 6:09 PM

Share

ವಿಜಯಪುರ: ಕೊರೊನಾ (Corona) ಮೂರನೇ ಅಲೆ ಹಾಗೂ ಒಮಿಕ್ರಾನ್ ವೈರಸ್ (Omicron Virus) ಭೀತಿಯ ಕಾರಣ ರಾಜ್ಯದ ಗಡಿಭಾಗಗಳಲ್ಲಿ ಚೆಕ್​ಪೋಸ್ಟ್ ಸ್ಥಾಪಿಸಲಾಗಿದೆ. ವಿಜಯಪುರದಿಂದ (Vijayapura) ಮಹಾರಾಷ್ಟ್ರವನ್ನು (Maharastra) ಸಂಪರ್ಕಿಸುವ 11 ರಸ್ತೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ ಚೆಕ್ ಪೋಸ್ಟ್ ಸ್ಥಾಪಿಸಿದೆ. ಆದರೆ ಹೆಸರಿಗೆ ಮಾತ್ರ ಚೆಕ್ ಪೋಸ್ಟ್​ಗಳು ಕಾರ್ಯನಿರ್ವಹಿಸುತ್ತಿವೆ. ಚೆಕ್​​ಪೋಸ್ಟ್​ಗಳಿದ್ದರೂ ನೆರೆಯ ಮಹಾರಾಷ್ಟ್ರದಿಂದ ವಿಜಯಪುರ ನಗರದತ್ತ ಗಣನೀಯ ಪ್ರಮಾಣದಲ್ಲಿ ಜನರು ಆಗಮಿಸುತ್ತಿದ್ದಾರೆ. ಆದರೆ ಚೆಕ್ ಪೋಸ್ಟ್​​ಗಳಲ್ಲಿ (Check Post) ಯಾವುದೇ ತಪಾಸಣೆ ಮಾಡದೆ ಸಂಬಂಧಿಸಿದ ಇಲಾಖೆಗಳ ಸಿಬ್ಬಂದಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ.

ವಿಜಯಪುರ ತಾಲೂಕಿನ ಸಿದ್ದಾಪುರ ಗ್ರಾಮದ ಬಳಿಯಿರುವ ಚೆಕ್ ಪೋಸ್ಟ್​​ನಲ್ಲಿ ತಪಾಸಣೆ ನಡೆಸಲಾಗುತ್ತಿಲ್ಲ. ಕಂದಾಯ, ಆರೋಗ್ಯ ಇಲಾಖೆ, ಪೊಲೀಸ್ ಸಿಬ್ಬಂದಿ ಚೆಕ್​ ಪೋಸ್ಟ್​ನಲ್ಲಿ ಗೈರಾಗಿದ್ದಾರೆ. ಜನರು ಯಾವುದೇ ಅಂಜಿಕೆಯಿಲ್ಲದೇ ಮಹಾರಾಷ್ಟ್ರದಿಂದ ಓಡಾಡುತ್ತಿದ್ದಾರೆ. ಕೊರೊನಾ ಎರಡೂ ಲಸಿಕೆ ಹಾಕಿಸಿಕೊಂಡವರಿಗೆ ಅಥವಾ ಕೊರೊನಾ ನೆಗೆಟಿವ್ ರಿಪೋರ್ಟ್ ಇದ್ದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

Vijayapura check post no check

ಚೆಕ್​ಪೋಸ್ಟ್ ಸಮೀಪದ ದೃಶ್ಯ

ಎರಡೂ ಡೋಸ್ ವ್ಯಾಕ್ಸಿನ್ ಅಥವಾ, ನೆಗೆಟಿವ್ ರಿಪೋರ್ಟ್ ಇರದವರಿಗೆ ಕರ್ನಾಟಕ ಪ್ರವೇಶವನ್ನು ನಿಷೇಧಿಸಲಾಗಿದೆ. ಆದರೆ ಚೆಕ್​ಪೋಸ್ಟ್​​ಗಳಲ್ಲಿ ತಪಾಸಣೆ ಮಾಡುವವರೇ ಮಾಯವಾಗಿದ್ದಾರೆ. ಕೆಲ ಸಮಯದ ಬಳಿಕ ಚೆಕ್ ಪೋಸ್ಟ್​​ನತ್ತ ಆಗಮಿಸಿದ ಪೊಲೀಸ್ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ನೆಪ‌ ಮಾತ್ರಕ್ಕೆ ತಪಾಸಣೆ ನಡೆಸುತ್ತಿದ್ದಾರೆ.

ಇಲಾಖೆಗಳ ನಿರ್ಲಕ್ಷದಿಂದ ಗಡಿ ಭಾಗಗಳ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಚೆಕ್​ಪೋಸ್ಟ್​ಗಳಲ್ಲಿ ಕಠಿಣ ನಿಯಮ ಪಾಲನೆಯಾಗಬೇಗದೇ, ಅವುಗಳನ್ನು ನಿರ್ಲಕ್ಷಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲಾಡಳಿತ ಕೂಡಲೇ ಈ ಕುರಿತು ಗಮನ ಹರಿಸಬೇಕೆಂದು ಜನರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:

ಆನೇಕಲ್: ತಾಲೂಕಿನಲ್ಲಿ ಕೊರೊನಾ ಸ್ಫೋಟ; ಅದಾಗ್ಯೂ ಸಮಾವೇಶದಲ್ಲಿ ಕೊವಿಡ್ ನಿಯಮಾವಳಿ ಮರೆತ ಬಿಜೆಪಿ ನಾಯಕರು!

ನಾಗಾಲ್ಯಾಂಡ್​​ನಲ್ಲಿ 13 ಮಂದಿ ಕೂಲಿಕಾರ್ಮಿಕರು ಬಲಿಯಾಗಿದ್ದು ಭದ್ರತಾ ಪಡೆಯ ಗುಂಡಿನ ದಾಳಿಗೆ; ಪ್ರಮಾದದ ಬಗ್ಗೆ ವಿಷಾದವಿದೆ ಎಂದ ಸೇನೆ

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ