AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಹೆಸರಿಗೆ ಮಾತ್ರ ಚೆಕ್​ಪೋಸ್ಟ್; ತಪಾಸಣೆ ನಡೆಸದೆ ಸಿಬ್ಬಂದಿ ನಿರ್ಲಕ್ಷ್ಯ

ಮಹಾರಾಷ್ಟ್ರ ಹಾಗೂ ಕರ್ನಾಟಕ ಸಂಪರ್ಕಿಸುವ ವಿಜಾಪುರದ 11 ರಸ್ತೆಗಳಲ್ಲಿ ಕೊರೊನಾ ಕುರಿತ ತಪಾಸಣೆ ನೆಪಮಾತ್ರಕ್ಕೆ ನಡೆಯುತ್ತಿದೆ. ಕೊವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆಯೇ ಇಲಾಖೆಗಳ ನಿರ್ಲಕ್ಷ್ಯಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಹೆಸರಿಗೆ ಮಾತ್ರ ಚೆಕ್​ಪೋಸ್ಟ್; ತಪಾಸಣೆ ನಡೆಸದೆ ಸಿಬ್ಬಂದಿ ನಿರ್ಲಕ್ಷ್ಯ
ಚೆಕ್​ಪೋಸ್ಟ್ ಸಮೀಪದ ದೃಶ್ಯ
TV9 Web
| Edited By: |

Updated on: Dec 05, 2021 | 6:09 PM

Share

ವಿಜಯಪುರ: ಕೊರೊನಾ (Corona) ಮೂರನೇ ಅಲೆ ಹಾಗೂ ಒಮಿಕ್ರಾನ್ ವೈರಸ್ (Omicron Virus) ಭೀತಿಯ ಕಾರಣ ರಾಜ್ಯದ ಗಡಿಭಾಗಗಳಲ್ಲಿ ಚೆಕ್​ಪೋಸ್ಟ್ ಸ್ಥಾಪಿಸಲಾಗಿದೆ. ವಿಜಯಪುರದಿಂದ (Vijayapura) ಮಹಾರಾಷ್ಟ್ರವನ್ನು (Maharastra) ಸಂಪರ್ಕಿಸುವ 11 ರಸ್ತೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ ಚೆಕ್ ಪೋಸ್ಟ್ ಸ್ಥಾಪಿಸಿದೆ. ಆದರೆ ಹೆಸರಿಗೆ ಮಾತ್ರ ಚೆಕ್ ಪೋಸ್ಟ್​ಗಳು ಕಾರ್ಯನಿರ್ವಹಿಸುತ್ತಿವೆ. ಚೆಕ್​​ಪೋಸ್ಟ್​ಗಳಿದ್ದರೂ ನೆರೆಯ ಮಹಾರಾಷ್ಟ್ರದಿಂದ ವಿಜಯಪುರ ನಗರದತ್ತ ಗಣನೀಯ ಪ್ರಮಾಣದಲ್ಲಿ ಜನರು ಆಗಮಿಸುತ್ತಿದ್ದಾರೆ. ಆದರೆ ಚೆಕ್ ಪೋಸ್ಟ್​​ಗಳಲ್ಲಿ (Check Post) ಯಾವುದೇ ತಪಾಸಣೆ ಮಾಡದೆ ಸಂಬಂಧಿಸಿದ ಇಲಾಖೆಗಳ ಸಿಬ್ಬಂದಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ.

ವಿಜಯಪುರ ತಾಲೂಕಿನ ಸಿದ್ದಾಪುರ ಗ್ರಾಮದ ಬಳಿಯಿರುವ ಚೆಕ್ ಪೋಸ್ಟ್​​ನಲ್ಲಿ ತಪಾಸಣೆ ನಡೆಸಲಾಗುತ್ತಿಲ್ಲ. ಕಂದಾಯ, ಆರೋಗ್ಯ ಇಲಾಖೆ, ಪೊಲೀಸ್ ಸಿಬ್ಬಂದಿ ಚೆಕ್​ ಪೋಸ್ಟ್​ನಲ್ಲಿ ಗೈರಾಗಿದ್ದಾರೆ. ಜನರು ಯಾವುದೇ ಅಂಜಿಕೆಯಿಲ್ಲದೇ ಮಹಾರಾಷ್ಟ್ರದಿಂದ ಓಡಾಡುತ್ತಿದ್ದಾರೆ. ಕೊರೊನಾ ಎರಡೂ ಲಸಿಕೆ ಹಾಕಿಸಿಕೊಂಡವರಿಗೆ ಅಥವಾ ಕೊರೊನಾ ನೆಗೆಟಿವ್ ರಿಪೋರ್ಟ್ ಇದ್ದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

Vijayapura check post no check

ಚೆಕ್​ಪೋಸ್ಟ್ ಸಮೀಪದ ದೃಶ್ಯ

ಎರಡೂ ಡೋಸ್ ವ್ಯಾಕ್ಸಿನ್ ಅಥವಾ, ನೆಗೆಟಿವ್ ರಿಪೋರ್ಟ್ ಇರದವರಿಗೆ ಕರ್ನಾಟಕ ಪ್ರವೇಶವನ್ನು ನಿಷೇಧಿಸಲಾಗಿದೆ. ಆದರೆ ಚೆಕ್​ಪೋಸ್ಟ್​​ಗಳಲ್ಲಿ ತಪಾಸಣೆ ಮಾಡುವವರೇ ಮಾಯವಾಗಿದ್ದಾರೆ. ಕೆಲ ಸಮಯದ ಬಳಿಕ ಚೆಕ್ ಪೋಸ್ಟ್​​ನತ್ತ ಆಗಮಿಸಿದ ಪೊಲೀಸ್ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ನೆಪ‌ ಮಾತ್ರಕ್ಕೆ ತಪಾಸಣೆ ನಡೆಸುತ್ತಿದ್ದಾರೆ.

ಇಲಾಖೆಗಳ ನಿರ್ಲಕ್ಷದಿಂದ ಗಡಿ ಭಾಗಗಳ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಚೆಕ್​ಪೋಸ್ಟ್​ಗಳಲ್ಲಿ ಕಠಿಣ ನಿಯಮ ಪಾಲನೆಯಾಗಬೇಗದೇ, ಅವುಗಳನ್ನು ನಿರ್ಲಕ್ಷಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲಾಡಳಿತ ಕೂಡಲೇ ಈ ಕುರಿತು ಗಮನ ಹರಿಸಬೇಕೆಂದು ಜನರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:

ಆನೇಕಲ್: ತಾಲೂಕಿನಲ್ಲಿ ಕೊರೊನಾ ಸ್ಫೋಟ; ಅದಾಗ್ಯೂ ಸಮಾವೇಶದಲ್ಲಿ ಕೊವಿಡ್ ನಿಯಮಾವಳಿ ಮರೆತ ಬಿಜೆಪಿ ನಾಯಕರು!

ನಾಗಾಲ್ಯಾಂಡ್​​ನಲ್ಲಿ 13 ಮಂದಿ ಕೂಲಿಕಾರ್ಮಿಕರು ಬಲಿಯಾಗಿದ್ದು ಭದ್ರತಾ ಪಡೆಯ ಗುಂಡಿನ ದಾಳಿಗೆ; ಪ್ರಮಾದದ ಬಗ್ಗೆ ವಿಷಾದವಿದೆ ಎಂದ ಸೇನೆ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?