AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಹೆಸರಿಗೆ ಮಾತ್ರ ಚೆಕ್​ಪೋಸ್ಟ್; ತಪಾಸಣೆ ನಡೆಸದೆ ಸಿಬ್ಬಂದಿ ನಿರ್ಲಕ್ಷ್ಯ

ಮಹಾರಾಷ್ಟ್ರ ಹಾಗೂ ಕರ್ನಾಟಕ ಸಂಪರ್ಕಿಸುವ ವಿಜಾಪುರದ 11 ರಸ್ತೆಗಳಲ್ಲಿ ಕೊರೊನಾ ಕುರಿತ ತಪಾಸಣೆ ನೆಪಮಾತ್ರಕ್ಕೆ ನಡೆಯುತ್ತಿದೆ. ಕೊವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆಯೇ ಇಲಾಖೆಗಳ ನಿರ್ಲಕ್ಷ್ಯಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಹೆಸರಿಗೆ ಮಾತ್ರ ಚೆಕ್​ಪೋಸ್ಟ್; ತಪಾಸಣೆ ನಡೆಸದೆ ಸಿಬ್ಬಂದಿ ನಿರ್ಲಕ್ಷ್ಯ
ಚೆಕ್​ಪೋಸ್ಟ್ ಸಮೀಪದ ದೃಶ್ಯ
TV9 Web
| Edited By: |

Updated on: Dec 05, 2021 | 6:09 PM

Share

ವಿಜಯಪುರ: ಕೊರೊನಾ (Corona) ಮೂರನೇ ಅಲೆ ಹಾಗೂ ಒಮಿಕ್ರಾನ್ ವೈರಸ್ (Omicron Virus) ಭೀತಿಯ ಕಾರಣ ರಾಜ್ಯದ ಗಡಿಭಾಗಗಳಲ್ಲಿ ಚೆಕ್​ಪೋಸ್ಟ್ ಸ್ಥಾಪಿಸಲಾಗಿದೆ. ವಿಜಯಪುರದಿಂದ (Vijayapura) ಮಹಾರಾಷ್ಟ್ರವನ್ನು (Maharastra) ಸಂಪರ್ಕಿಸುವ 11 ರಸ್ತೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ ಚೆಕ್ ಪೋಸ್ಟ್ ಸ್ಥಾಪಿಸಿದೆ. ಆದರೆ ಹೆಸರಿಗೆ ಮಾತ್ರ ಚೆಕ್ ಪೋಸ್ಟ್​ಗಳು ಕಾರ್ಯನಿರ್ವಹಿಸುತ್ತಿವೆ. ಚೆಕ್​​ಪೋಸ್ಟ್​ಗಳಿದ್ದರೂ ನೆರೆಯ ಮಹಾರಾಷ್ಟ್ರದಿಂದ ವಿಜಯಪುರ ನಗರದತ್ತ ಗಣನೀಯ ಪ್ರಮಾಣದಲ್ಲಿ ಜನರು ಆಗಮಿಸುತ್ತಿದ್ದಾರೆ. ಆದರೆ ಚೆಕ್ ಪೋಸ್ಟ್​​ಗಳಲ್ಲಿ (Check Post) ಯಾವುದೇ ತಪಾಸಣೆ ಮಾಡದೆ ಸಂಬಂಧಿಸಿದ ಇಲಾಖೆಗಳ ಸಿಬ್ಬಂದಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ.

ವಿಜಯಪುರ ತಾಲೂಕಿನ ಸಿದ್ದಾಪುರ ಗ್ರಾಮದ ಬಳಿಯಿರುವ ಚೆಕ್ ಪೋಸ್ಟ್​​ನಲ್ಲಿ ತಪಾಸಣೆ ನಡೆಸಲಾಗುತ್ತಿಲ್ಲ. ಕಂದಾಯ, ಆರೋಗ್ಯ ಇಲಾಖೆ, ಪೊಲೀಸ್ ಸಿಬ್ಬಂದಿ ಚೆಕ್​ ಪೋಸ್ಟ್​ನಲ್ಲಿ ಗೈರಾಗಿದ್ದಾರೆ. ಜನರು ಯಾವುದೇ ಅಂಜಿಕೆಯಿಲ್ಲದೇ ಮಹಾರಾಷ್ಟ್ರದಿಂದ ಓಡಾಡುತ್ತಿದ್ದಾರೆ. ಕೊರೊನಾ ಎರಡೂ ಲಸಿಕೆ ಹಾಕಿಸಿಕೊಂಡವರಿಗೆ ಅಥವಾ ಕೊರೊನಾ ನೆಗೆಟಿವ್ ರಿಪೋರ್ಟ್ ಇದ್ದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

Vijayapura check post no check

ಚೆಕ್​ಪೋಸ್ಟ್ ಸಮೀಪದ ದೃಶ್ಯ

ಎರಡೂ ಡೋಸ್ ವ್ಯಾಕ್ಸಿನ್ ಅಥವಾ, ನೆಗೆಟಿವ್ ರಿಪೋರ್ಟ್ ಇರದವರಿಗೆ ಕರ್ನಾಟಕ ಪ್ರವೇಶವನ್ನು ನಿಷೇಧಿಸಲಾಗಿದೆ. ಆದರೆ ಚೆಕ್​ಪೋಸ್ಟ್​​ಗಳಲ್ಲಿ ತಪಾಸಣೆ ಮಾಡುವವರೇ ಮಾಯವಾಗಿದ್ದಾರೆ. ಕೆಲ ಸಮಯದ ಬಳಿಕ ಚೆಕ್ ಪೋಸ್ಟ್​​ನತ್ತ ಆಗಮಿಸಿದ ಪೊಲೀಸ್ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ನೆಪ‌ ಮಾತ್ರಕ್ಕೆ ತಪಾಸಣೆ ನಡೆಸುತ್ತಿದ್ದಾರೆ.

ಇಲಾಖೆಗಳ ನಿರ್ಲಕ್ಷದಿಂದ ಗಡಿ ಭಾಗಗಳ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಚೆಕ್​ಪೋಸ್ಟ್​ಗಳಲ್ಲಿ ಕಠಿಣ ನಿಯಮ ಪಾಲನೆಯಾಗಬೇಗದೇ, ಅವುಗಳನ್ನು ನಿರ್ಲಕ್ಷಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲಾಡಳಿತ ಕೂಡಲೇ ಈ ಕುರಿತು ಗಮನ ಹರಿಸಬೇಕೆಂದು ಜನರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:

ಆನೇಕಲ್: ತಾಲೂಕಿನಲ್ಲಿ ಕೊರೊನಾ ಸ್ಫೋಟ; ಅದಾಗ್ಯೂ ಸಮಾವೇಶದಲ್ಲಿ ಕೊವಿಡ್ ನಿಯಮಾವಳಿ ಮರೆತ ಬಿಜೆಪಿ ನಾಯಕರು!

ನಾಗಾಲ್ಯಾಂಡ್​​ನಲ್ಲಿ 13 ಮಂದಿ ಕೂಲಿಕಾರ್ಮಿಕರು ಬಲಿಯಾಗಿದ್ದು ಭದ್ರತಾ ಪಡೆಯ ಗುಂಡಿನ ದಾಳಿಗೆ; ಪ್ರಮಾದದ ಬಗ್ಗೆ ವಿಷಾದವಿದೆ ಎಂದ ಸೇನೆ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?