ಹಲ್ಲು ನೋವೆಂದು ಆಸ್ಪತ್ರೆಗೆ ಬಂದ ಕಳ್ಳರು: ವೈದ್ಯೆಯೊಂದಿಗೆ ಮಾತನಾಡುತ್ತ ಚಿನ್ನದ ಸರ ಕದ್ದು ಪರಾರಿ

ಜುಲೈ 30ರಂದು ವಿಜಯಪುರದ ಕಾಳಿಕಾನಗರದ ಪಾಟೀಲ್ ಕ್ಲಿನಿಕ್​ನಲ್ಲಿ ರೋಗಿ ನೆಪದಲ್ಲಿ ಆಸ್ಪತ್ರೆಗೆ ಬಂದು ವೈದ್ಯೆಯ 11 ಗ್ರಾಂ ಚಿನ್ನದ ಮಾಂಗಲ್ಯ ಸರ ಎಗರಿಸಿ ಖದೀಮರು ಪರಾರಿಯಾಗಿರುವಂತಹ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆದರ್ಶನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಲ್ಲು ನೋವೆಂದು ಆಸ್ಪತ್ರೆಗೆ ಬಂದ ಕಳ್ಳರು: ವೈದ್ಯೆಯೊಂದಿಗೆ ಮಾತನಾಡುತ್ತ ಚಿನ್ನದ ಸರ ಕದ್ದು ಪರಾರಿ
ಹಲ್ಲು ನೋವೆಂದು ಆಸ್ಪತ್ರೆಗೆ ಬಂದ ಕಳ್ಳರು: ವೈದ್ಯೆಯೊಂದಿಗೆ ಮಾತನಾಡುತ್ತ ಚಿನ್ನದ ಸರ ಕದ್ದು ಪರಾರಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Aug 02, 2024 | 10:23 PM

ವಿಜಯಪುರ, ಆಗಸ್ಟ್​ 2: ರೋಗಿ ವೇಶದಲ್ಲಿ ಆಸ್ಪತ್ರೆಗೆ ತೆರಳಿ ವೈದ್ಯೆಯ (doctor) ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಹೊಂಡು ಖದೀಮರು (Thieves) ಪರಾರಿ ಆಗಿರುವಂತಹ ಘಟನೆ ಕಳೆದ ಜುಲೈ 30 ರಂದು ಕಾಳಿಕಾ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ತಡವಾಗಿ ಬೆಳಕಿಗೆ ಬಂದಿದೆ. ಆ ಮೂಲಕ ನಗರದಲ್ಲಿ ಮತ್ತೆ ಸರಗಳ್ಳರ ಹಾವಳಿ ಶುರುವಾಗಿದೆ. ಆದರ್ಶನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಖದೀಮರ ಪತ್ತೆಗೆ ಬಲೆ ಬಿಸಿದ್ದಾರೆ.

ಜುಲೈ 30 ರಂದು ಇಬ್ಬರು ಖದೀಮರು ಬೈಕ್ ಮೇಲೆ ಆಸ್ಪತ್ರೆಯ ಬಳಿ ಬಂದಿದ್ದು, ಇಬ್ಬರ ಪೈಕಿ ಓರ್ವನು ಆಸ್ಪತ್ರೆಯೊಳಗೆ ಹೋದರೆ ಮತ್ತೋರ್ವ ಬೈಕ್ ಮೇಲೆ ಕಾಯುತ್ತಾ ನಿಂತಿದ್ದ. ಹಲ್ಲು ನೋವು ಎಂದು ರೋಗಿಯ ಸೋಗಿನಲ್ಲಿ ಖದೀಮ ಎಂಟ್ರಿ ಕೊಟ್ಟಿದ್ದು, ಇಂಗ್ಲಿಷ್​​ನಲ್ಲಿ ಮಾತನಾಡುತ್ತ ಪಾಟೀಲ್ ಕ್ಲಿನಿಕ್ ವೈದ್ಯೆ ಡಾ.ಸರೋಜಿನಿ ಪಾಟೀಲ್ ಎಂಬುವರ 11 ಗ್ರಾಂ ಚಿನ್ನದ ಸರ ಕಸಿದು ಎಸ್ಕೇಪ್ ಆಗಿದ್ದಾನೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಪತ್ನಿಯಿಂದಲೇ ಪತಿಯ ಭೀಕರ ಹತ್ಯೆ; ಕಾರಣವೇನು ಗೊತ್ತಾ?

ವೈದ್ಯೆಯ ಸರ ಕಿತ್ತುಕೊಂಡು ಓಡಿದ ಓರ್ವ ಕಳ್ಳತನನ್ನು ಮತ್ತೋರ್ವ ಆತನನ್ನು ಬೈಕ್​ನಲ್ಲಿ ಪಿಕ್​ಅಪ್ ಮಾಡಿಕೊಂಡು ಪರಾರಿ ಆಗಿದ್ದಾರೆ. ವೈದ್ಯೆ ಸರೋಜಿನಿ ಕೂಗುತ್ತಾ ಹೊರಗಡೆ ಬರುವಷ್ಟರಲ್ಲಿ ಇಬ್ಬರು ಪರಾರಿ ಆಗಿದ್ದರು.

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ಆಟೋ ಕದ್ದೊಯ್ದ ಕಳ್ಳರು

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಪ್ರಗತಿನಗರ 7ನೇ ಕ್ರಾಸ್ ನಿವಾಸಿ ಪುಟ್ಟರಾಜು ಎಂಬುವವರು ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಆಟೋ ಬೆಳಗಾಗುವುದರೊಳಗೆ ಮಾಯವಾಗಿತ್ತು. ಸಮೀಪದ ಅಂಗಡಿಯ ಸಿಸಿ ಕ್ಯಾಮರಾದಲ್ಲಿ ಪರಿಶೀಲನೆ ನಡೆಸಿದಾಗ ಕಳ್ಳರ ಕೈಚಳಕ ಪತ್ತೆಯಾಗಿತ್ತು.

ಇದನ್ನೂ ಓದಿ: ಗಂಡನ ಮೇಲಿನ ಸಿಟ್ಟಿಗೆ ಸ್ನೇಹಿತನ ಜತೆ ಸೇರಿ ಸ್ವಂತ ಮಗನನ್ನೇ ಕಿಡ್ನ್ಯಾಪ್ ಮಾಡಿದ ತಾಯಿ

ಬಾಡಿಗೆಗೆ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದೆ. ಇದೀಗ ಜೀವನಕ್ಕೆ ಆಧಾರವಾಗಿದ್ದ ಆಟೋ ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಪೊಲೀಸರ ಆದಷ್ಟು ಬೇಗ ಹುಡುಕಿ ಕೊಟ್ಟರೆ ಜೀವನಕ್ಕೆ ನೆರವಾಗುತ್ತದೆ ಎಂದು ಆಟೋ ಕಳೆದುಕೊಂಡ ಪುಟ್ಟರಾಜು ತನ್ನ ಅಳಲು ತೋಡಿಕೊಂಡಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:18 pm, Fri, 2 August 24

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ