AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲ್ಲು ನೋವೆಂದು ಆಸ್ಪತ್ರೆಗೆ ಬಂದ ಕಳ್ಳರು: ವೈದ್ಯೆಯೊಂದಿಗೆ ಮಾತನಾಡುತ್ತ ಚಿನ್ನದ ಸರ ಕದ್ದು ಪರಾರಿ

ಜುಲೈ 30ರಂದು ವಿಜಯಪುರದ ಕಾಳಿಕಾನಗರದ ಪಾಟೀಲ್ ಕ್ಲಿನಿಕ್​ನಲ್ಲಿ ರೋಗಿ ನೆಪದಲ್ಲಿ ಆಸ್ಪತ್ರೆಗೆ ಬಂದು ವೈದ್ಯೆಯ 11 ಗ್ರಾಂ ಚಿನ್ನದ ಮಾಂಗಲ್ಯ ಸರ ಎಗರಿಸಿ ಖದೀಮರು ಪರಾರಿಯಾಗಿರುವಂತಹ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆದರ್ಶನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಲ್ಲು ನೋವೆಂದು ಆಸ್ಪತ್ರೆಗೆ ಬಂದ ಕಳ್ಳರು: ವೈದ್ಯೆಯೊಂದಿಗೆ ಮಾತನಾಡುತ್ತ ಚಿನ್ನದ ಸರ ಕದ್ದು ಪರಾರಿ
ಹಲ್ಲು ನೋವೆಂದು ಆಸ್ಪತ್ರೆಗೆ ಬಂದ ಕಳ್ಳರು: ವೈದ್ಯೆಯೊಂದಿಗೆ ಮಾತನಾಡುತ್ತ ಚಿನ್ನದ ಸರ ಕದ್ದು ಪರಾರಿ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Aug 02, 2024 | 10:23 PM

Share

ವಿಜಯಪುರ, ಆಗಸ್ಟ್​ 2: ರೋಗಿ ವೇಶದಲ್ಲಿ ಆಸ್ಪತ್ರೆಗೆ ತೆರಳಿ ವೈದ್ಯೆಯ (doctor) ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಹೊಂಡು ಖದೀಮರು (Thieves) ಪರಾರಿ ಆಗಿರುವಂತಹ ಘಟನೆ ಕಳೆದ ಜುಲೈ 30 ರಂದು ಕಾಳಿಕಾ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ತಡವಾಗಿ ಬೆಳಕಿಗೆ ಬಂದಿದೆ. ಆ ಮೂಲಕ ನಗರದಲ್ಲಿ ಮತ್ತೆ ಸರಗಳ್ಳರ ಹಾವಳಿ ಶುರುವಾಗಿದೆ. ಆದರ್ಶನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಖದೀಮರ ಪತ್ತೆಗೆ ಬಲೆ ಬಿಸಿದ್ದಾರೆ.

ಜುಲೈ 30 ರಂದು ಇಬ್ಬರು ಖದೀಮರು ಬೈಕ್ ಮೇಲೆ ಆಸ್ಪತ್ರೆಯ ಬಳಿ ಬಂದಿದ್ದು, ಇಬ್ಬರ ಪೈಕಿ ಓರ್ವನು ಆಸ್ಪತ್ರೆಯೊಳಗೆ ಹೋದರೆ ಮತ್ತೋರ್ವ ಬೈಕ್ ಮೇಲೆ ಕಾಯುತ್ತಾ ನಿಂತಿದ್ದ. ಹಲ್ಲು ನೋವು ಎಂದು ರೋಗಿಯ ಸೋಗಿನಲ್ಲಿ ಖದೀಮ ಎಂಟ್ರಿ ಕೊಟ್ಟಿದ್ದು, ಇಂಗ್ಲಿಷ್​​ನಲ್ಲಿ ಮಾತನಾಡುತ್ತ ಪಾಟೀಲ್ ಕ್ಲಿನಿಕ್ ವೈದ್ಯೆ ಡಾ.ಸರೋಜಿನಿ ಪಾಟೀಲ್ ಎಂಬುವರ 11 ಗ್ರಾಂ ಚಿನ್ನದ ಸರ ಕಸಿದು ಎಸ್ಕೇಪ್ ಆಗಿದ್ದಾನೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಪತ್ನಿಯಿಂದಲೇ ಪತಿಯ ಭೀಕರ ಹತ್ಯೆ; ಕಾರಣವೇನು ಗೊತ್ತಾ?

ವೈದ್ಯೆಯ ಸರ ಕಿತ್ತುಕೊಂಡು ಓಡಿದ ಓರ್ವ ಕಳ್ಳತನನ್ನು ಮತ್ತೋರ್ವ ಆತನನ್ನು ಬೈಕ್​ನಲ್ಲಿ ಪಿಕ್​ಅಪ್ ಮಾಡಿಕೊಂಡು ಪರಾರಿ ಆಗಿದ್ದಾರೆ. ವೈದ್ಯೆ ಸರೋಜಿನಿ ಕೂಗುತ್ತಾ ಹೊರಗಡೆ ಬರುವಷ್ಟರಲ್ಲಿ ಇಬ್ಬರು ಪರಾರಿ ಆಗಿದ್ದರು.

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ಆಟೋ ಕದ್ದೊಯ್ದ ಕಳ್ಳರು

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಪ್ರಗತಿನಗರ 7ನೇ ಕ್ರಾಸ್ ನಿವಾಸಿ ಪುಟ್ಟರಾಜು ಎಂಬುವವರು ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಆಟೋ ಬೆಳಗಾಗುವುದರೊಳಗೆ ಮಾಯವಾಗಿತ್ತು. ಸಮೀಪದ ಅಂಗಡಿಯ ಸಿಸಿ ಕ್ಯಾಮರಾದಲ್ಲಿ ಪರಿಶೀಲನೆ ನಡೆಸಿದಾಗ ಕಳ್ಳರ ಕೈಚಳಕ ಪತ್ತೆಯಾಗಿತ್ತು.

ಇದನ್ನೂ ಓದಿ: ಗಂಡನ ಮೇಲಿನ ಸಿಟ್ಟಿಗೆ ಸ್ನೇಹಿತನ ಜತೆ ಸೇರಿ ಸ್ವಂತ ಮಗನನ್ನೇ ಕಿಡ್ನ್ಯಾಪ್ ಮಾಡಿದ ತಾಯಿ

ಬಾಡಿಗೆಗೆ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದೆ. ಇದೀಗ ಜೀವನಕ್ಕೆ ಆಧಾರವಾಗಿದ್ದ ಆಟೋ ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಪೊಲೀಸರ ಆದಷ್ಟು ಬೇಗ ಹುಡುಕಿ ಕೊಟ್ಟರೆ ಜೀವನಕ್ಕೆ ನೆರವಾಗುತ್ತದೆ ಎಂದು ಆಟೋ ಕಳೆದುಕೊಂಡ ಪುಟ್ಟರಾಜು ತನ್ನ ಅಳಲು ತೋಡಿಕೊಂಡಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:18 pm, Fri, 2 August 24

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ