AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KBJNL ಎಡ ದಂಡೆ ಕಾಲುವೆಯಲ್ಲಿ ಘೋರ ದುರಂತ: ಒಂದೇ ಕುಟುಂಬದ ಮೂವರು ನಾಪತ್ತೆ

ಕೆಬಿಜೆಎನ್ಎಲ್ ಎಡ ದಂಡೆ ಕಾಲುವೆಯಲ್ಲಿ ಘೋರ ದುರಂತವೊಂದು ನಡೆದಿದೆ. ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ನಾಪತ್ತೆಯಾಗಿದ್ದಾರೆ. ಮುದ್ದೇಬಿಹಾಳ ಪಟ್ಟಣದ ಆಶ್ರಯ ಕಾಲೋನಿಯ ಸುಡಗಾಡು ಸಿದ್ದ ಸಮುದಾಯದ ಬಾಲಕರು ಹಾಗೂ ಯುವತಿ ನಾಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಶೋಧ ಕಾರ್ಯ ನಡೆಸಿದ್ದಾರೆ.

KBJNL  ಎಡ ದಂಡೆ ಕಾಲುವೆಯಲ್ಲಿ ಘೋರ ದುರಂತ: ಒಂದೇ ಕುಟುಂಬದ ಮೂವರು ನಾಪತ್ತೆ
Kbjnl Left Canal
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Nov 11, 2025 | 5:00 PM

Share

ವಿಜಯಪುರ, (ನವೆಂಬರ್ 11): ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ನಾಪತ್ತೆಯಾಗಿರುವ ಘಟನೆ ವಿಜಯಪುರ (Vijayapura)  ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಶಿರೋಳ ಗ್ರಾಮದಲ್ಲಿ ನಡೆದಿದೆ. ಮುದ್ದೇಬಿಹಾಳ ಪಟ್ಟಣದ ಆಶ್ರಯ ಕಾಲೋನಿಯ ಸುಡಗಾಡು ಸಿದ್ದ ಸಮುದಾಯದ ಬಸಮ್ಮ ಕೊಣ್ಣೂರು(21), ಸಂತೋಷ(16), ರವಿ ಕೊಣ್ಣೂರು(15) ಎನ್ನುವರು ಕಾಲು ಜಾರಿ ಶಿರೋಳ ಬಳಿ ಕೆಬಿಜೆಎನ್ಎಲ್ ಎಡದಂಡೆ ಕಾಲುವೆಗೆ ಬಿದ್ದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆದಿದೆ.

ಸುಡಗಾಡು ಸಿದ್ದ ಸಮುದಾಯಕ್ಕೆ ಸೇರಿದ ಬಸಮ್ಮ ಕೊಣ್ಣೂರು, ಸಂತೋಷ, ರವಿ ಇಂದು (ನವೆಂಬರ್ 11) ಕೆಬಿಜೆಎನ್ಎಲ್ ಎಡ ದಂಡೆ ಕಾಲುವೆಗೆ ಹೋಗಿದ್ದ ವೇಳೆ ಕಾಲು ಜಾರಿ ಬಿದ್ದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಹಾಗೂ ಗ್ನಿಶಾಮಕ ದಳ ಸಿಬ್ಬಂದಿಗ ದೌಡಾಯಿಸಿ ನಾಪತ್ತೆಯಾದವರ ಪತ್ತೆಗೆ ಶೋಧ ನಡೆಸಿದ್ದಾರೆ.

ತೆಪ್ಪ ಮುಳುಗಿ ಓರ್ವ ಮೀನುಗಾರ ಸಾವು

 ಚಾಮರಾಜನಗರ: ತೆಪ್ಪ ಮುಳುಗಿ ಓರ್ವ ಮೀನುಗಾರ ಸಾವನ್ನಪ್ಪಿದ್ದು, ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಸುವರ್ಣಾವತಿ ಜಲಾಶಯದಲ್ಲಿ ನಡೆದಿದೆ. ಅಟ್ಟಗುಳಿಪುರ ಗ್ರಾಮದ ನಿವಾಸಿ ಶಿವಸ್ವಾಮಿ(32) ಮೃತ ದುರ್ದೈವಿ. ಇನ್ನು ಸ್ನೇಹಿತ ದಿಲೀಪ್, ತೆಪ್ಪ ಮುಳುಗಿದ ನಂತರ ಈಜಿ ದಡ ಸೇರಿದ್ದಾರೆ. ಸುವರ್ಣಾವತಿ ಜಲಾಶಯದಲ್ಲಿ ಮೀನು ಹಿಡಿಯಲು ಹೋಗಿದ್ದ ವೇಳೆ ತೆಪ್ಪ ಮುಳುಗಿದೆ. ಸ್ಥಳಕ್ಕೆ ಚಾಮರಾಜನಗರ ಪೂರ್ವ ಠಾಣೆ ಪೊಲೀಸರ ಭೇಟಿ ನೀಡಿದ್ದು, ಶಿವಸ್ವಾಮಿ ಮೃತದೇಹಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ.

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More