Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಮಂಗಳಮುಖಿಯನ್ನು ಬೆತ್ತಲೆಗೊಳಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಎರಚಿ ಹಲ್ಲೆ

ಮಂಗಳಮುಖಿ ಅಂತ ಹೇಳಿಕೊಂಡು ಹಣ ಕೇಳುತ್ತೀಯಾ ಅಂತ ವಿಜಯಪುರ ನಗರದ ಮಹಲ್ ಹೋಟೆಲ್ ಮುಂಭಾಗ ಏಳೆಂಟು ಜನ ಮಂಗಳಮುಖಿಯರು ಸೇರಿ ಮತ್ತೊಬ್ಬ ಮಂಗಳಮುಖಿಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆ. 15 ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ವಿಜಯಪುರ: ಮಂಗಳಮುಖಿಯನ್ನು ಬೆತ್ತಲೆಗೊಳಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಎರಚಿ ಹಲ್ಲೆ
ಮಂಗಳಮುಖಿ ಮೇಲೆ ಹಲ್ಲೆ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ವಿವೇಕ ಬಿರಾದಾರ

Updated on:Jul 31, 2024 | 3:02 PM

ವಿಜಯಪುರ, ಜುಲೈ 31: ಸಾರ್ವಜನಿಕ ಸ್ಥಳದಲ್ಲಿ ಮಂಗಳಮುಖಿಯನ್ನು (Transgender) ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ (Vijayapura) ನಗರ ಬಸ್ ನಿಲ್ದಾಣ ಬಳಿಯ ಲಲಿತ ಮಹಲ್ ಹೋಟೆಲ್ ಮುಂಭಾಗ ಘಟನೆ ನಡೆದಿದೆ. ಮಂಗಳಮುಖಿ ಅಂತ ಹೇಳಿಕೊಂಡು ಹಣ ಕೇಳುತ್ತೀಯಾ ಅಂತ ಏಳೆಂಟು ಮಂಗಳಮುಖಿಯರು ಪ್ಯಾಂಟ್, ಶರ್ಟ್ ಬಿಚ್ಚಿ ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಒದ್ದು, ಖಾರದಪುಡಿ ಎರಚಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಅಂಗಲಾಚಿ ಬೇಡಿಕೊಂಡರು ಸಹ ಮಂಗಳಮುಖಿಯರು ಬಿಡುತ್ತಿಲ್ಲ. ಅಲ್ಲದೆ ಮಂಗಳಮುಖಿಯರು ತಮ್ಮ ಮರ್ಮಾಂಗ ತೋರಿಸಿ ವಿಕೃತಿ ಮೆರೆದಿದ್ದಾರೆ. ಮಂಗಳಮುಖಿಯರು ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. 15 ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.

ಹಣದ ವಿಚಾರವಾಗಿ ವ್ಯಕ್ತಿ ಮೇಲೆ ಹಲ್ಲೆ

ಚಿಕ್ಕೋಡಿ: ಹಣದ ವಿಚಾರವಾಗಿ ನಡು ರಸ್ತೆಯಲ್ಲಿ ವ್ಯಕ್ತಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕನದಾಳ ಗ್ರಾಮದಲ್ಲಿ ನಡೆದಿದೆ. ರೋಹಿತ್ ವಡ್ಡರ್ ಹಲ್ಲೆಗೊಳಗಾದ ವ್ಯಕ್ತಿ. ನಾಗಪ್ಪ ವಡ್ಡರ ಎಂಬಾತನ ಬಳಿ‌ ರೋಹಿತ್​ ವಡ್ಡರ್​ ಎರಡು ಸಾವಿರ ಸಾಲ ಪಡೆದಿದ್ದನು.

ಇದನ್ನೂ ಓದಿ: ಮೊಬೈಲ್​ ಕಳ್ಳತನ: ಅಬ್ದುಲ್ ರಜಾಕ್ ಬಂಧನ

ತೆಗೆದುಕೊಂಡ ಹಣಕ್ಕೆ ಬಡ್ಡಿ ಕೊಡಲು ವಿಳಂಬವಾಗಿದ್ದಕ್ಕೆ ಅವಾಚ್ಯವಾಗಿ ನಿಂದಿಸಿ ಕಲ್ಲಿನಿಂದ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಹಲ್ಲೆಗೊಳಗಾದ ರೋಹಿತ್ ವಡ್ಡರ್​ನನ್ನು ಹಾರೂಗೇರಿ ಗ್ರಾಮದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಾಲ್ಕು ವರ್ಷದ ಬಾಲಕನ ಮೇಲೆ ನಾಯಿ ದಾಳಿ

ವಿಜಯನಗರ: ನಾಲ್ಕು ವರ್ಷದ ಬಾಲಕನ ಮೇಲೆ ನಾಯಿ ದಾಳಿ ಮಾಡಿರುವ ಘಟನೆ ಹೊಸಪೇಟೆ ಪಟ್ಟಣದ ಚಿತ್ತವಾಡ್ಗಿಯಲ್ಲಿ ನಡೆದಿದೆ. ಹೊಸಪೇಟೆಯ ಕಾಕರ ಓಣಿಯ 4 ವರ್ಷದ ಪರಶುರಾಮನ ಕೆನ್ನೆ, ಕಾಲಿಗೆ ಶ್ವಾನ ಕಚ್ಚಿದೆ. ಬಾಲಕನನ್ನು ಹೊಸಪೇಟೆಯ ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಾಸಕ ಗವಿಯಪ್ಪ ಭೇಟಿ ನೀಡಿ, ಬಾಲಕನ ಆರೋಗ್ಯ ವಿಚಾರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Wed, 31 July 24

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ