ವಿಜಯಪುರ: ಮಂಗಳಮುಖಿಯನ್ನು ಬೆತ್ತಲೆಗೊಳಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಎರಚಿ ಹಲ್ಲೆ

ಮಂಗಳಮುಖಿ ಅಂತ ಹೇಳಿಕೊಂಡು ಹಣ ಕೇಳುತ್ತೀಯಾ ಅಂತ ವಿಜಯಪುರ ನಗರದ ಮಹಲ್ ಹೋಟೆಲ್ ಮುಂಭಾಗ ಏಳೆಂಟು ಜನ ಮಂಗಳಮುಖಿಯರು ಸೇರಿ ಮತ್ತೊಬ್ಬ ಮಂಗಳಮುಖಿಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆ. 15 ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ವಿಜಯಪುರ: ಮಂಗಳಮುಖಿಯನ್ನು ಬೆತ್ತಲೆಗೊಳಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಎರಚಿ ಹಲ್ಲೆ
ಮಂಗಳಮುಖಿ ಮೇಲೆ ಹಲ್ಲೆ
Edited By:

Updated on: Jul 31, 2024 | 3:02 PM

ವಿಜಯಪುರ, ಜುಲೈ 31: ಸಾರ್ವಜನಿಕ ಸ್ಥಳದಲ್ಲಿ ಮಂಗಳಮುಖಿಯನ್ನು (Transgender) ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ (Vijayapura) ನಗರ ಬಸ್ ನಿಲ್ದಾಣ ಬಳಿಯ ಲಲಿತ ಮಹಲ್ ಹೋಟೆಲ್ ಮುಂಭಾಗ ಘಟನೆ ನಡೆದಿದೆ. ಮಂಗಳಮುಖಿ ಅಂತ ಹೇಳಿಕೊಂಡು ಹಣ ಕೇಳುತ್ತೀಯಾ ಅಂತ ಏಳೆಂಟು ಮಂಗಳಮುಖಿಯರು ಪ್ಯಾಂಟ್, ಶರ್ಟ್ ಬಿಚ್ಚಿ ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಒದ್ದು, ಖಾರದಪುಡಿ ಎರಚಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಅಂಗಲಾಚಿ ಬೇಡಿಕೊಂಡರು ಸಹ ಮಂಗಳಮುಖಿಯರು ಬಿಡುತ್ತಿಲ್ಲ. ಅಲ್ಲದೆ ಮಂಗಳಮುಖಿಯರು ತಮ್ಮ ಮರ್ಮಾಂಗ ತೋರಿಸಿ ವಿಕೃತಿ ಮೆರೆದಿದ್ದಾರೆ. ಮಂಗಳಮುಖಿಯರು ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. 15 ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.

ಹಣದ ವಿಚಾರವಾಗಿ ವ್ಯಕ್ತಿ ಮೇಲೆ ಹಲ್ಲೆ

ಚಿಕ್ಕೋಡಿ: ಹಣದ ವಿಚಾರವಾಗಿ ನಡು ರಸ್ತೆಯಲ್ಲಿ ವ್ಯಕ್ತಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕನದಾಳ ಗ್ರಾಮದಲ್ಲಿ ನಡೆದಿದೆ. ರೋಹಿತ್ ವಡ್ಡರ್ ಹಲ್ಲೆಗೊಳಗಾದ ವ್ಯಕ್ತಿ. ನಾಗಪ್ಪ ವಡ್ಡರ ಎಂಬಾತನ ಬಳಿ‌ ರೋಹಿತ್​ ವಡ್ಡರ್​ ಎರಡು ಸಾವಿರ ಸಾಲ ಪಡೆದಿದ್ದನು.

ಇದನ್ನೂ ಓದಿ: ಮೊಬೈಲ್​ ಕಳ್ಳತನ: ಅಬ್ದುಲ್ ರಜಾಕ್ ಬಂಧನ

ತೆಗೆದುಕೊಂಡ ಹಣಕ್ಕೆ ಬಡ್ಡಿ ಕೊಡಲು ವಿಳಂಬವಾಗಿದ್ದಕ್ಕೆ ಅವಾಚ್ಯವಾಗಿ ನಿಂದಿಸಿ ಕಲ್ಲಿನಿಂದ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಹಲ್ಲೆಗೊಳಗಾದ ರೋಹಿತ್ ವಡ್ಡರ್​ನನ್ನು ಹಾರೂಗೇರಿ ಗ್ರಾಮದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಾಲ್ಕು ವರ್ಷದ ಬಾಲಕನ ಮೇಲೆ ನಾಯಿ ದಾಳಿ

ವಿಜಯನಗರ: ನಾಲ್ಕು ವರ್ಷದ ಬಾಲಕನ ಮೇಲೆ ನಾಯಿ ದಾಳಿ ಮಾಡಿರುವ ಘಟನೆ ಹೊಸಪೇಟೆ ಪಟ್ಟಣದ ಚಿತ್ತವಾಡ್ಗಿಯಲ್ಲಿ ನಡೆದಿದೆ. ಹೊಸಪೇಟೆಯ ಕಾಕರ ಓಣಿಯ 4 ವರ್ಷದ ಪರಶುರಾಮನ ಕೆನ್ನೆ, ಕಾಲಿಗೆ ಶ್ವಾನ ಕಚ್ಚಿದೆ. ಬಾಲಕನನ್ನು ಹೊಸಪೇಟೆಯ ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಾಸಕ ಗವಿಯಪ್ಪ ಭೇಟಿ ನೀಡಿ, ಬಾಲಕನ ಆರೋಗ್ಯ ವಿಚಾರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Wed, 31 July 24

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us