AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವಿನ ಮಾರಕ ಕಾಯಿಲೆ ಚಿಕಿತ್ಸೆಗಾಗಿ ಮತಾಂತರ ನಿರ್ಧಾರ! ಟಿವಿ9 ವರದಿಯ ಬಳಿಕ ಬದಲಾಯ್ತು ಬಡ ಕುಟುಂಬದ ಜೀವನ

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಪಟ್ಟಣದ ಈರಣ್ಣ ಹಾಗೂ ಸವಿತಾ ದಂಪತಿಗೆ ಮೂರು ಜನ ಮಕ್ಕಳು. ಇಬ್ಬರು ಹೆಣ್ಣು ಹಾಗೂ ಓರ್ವ ಗಂಡು ಮಗು. ಈರಣ್ಣ ಡಾಬವೊಂದರಲ್ಲಿ ಕೆಲ್ಸ ಮಾಡ್ತಿದ್ರೆ, ಸವಿತಾ ನಿತ್ಯ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಇಂತಹ ಕಡುಬಡತನದಲ್ಲಿರೋ ಈ ದಂಪತಿಯ ಮೂರು ವರ್ಷದ ಮಗನಿಗೆ ಎದುರಾಗಿದ್ದು, ಥೆಲಿಸೇಮಿಯಾ ರೋಗ.

ಮಗುವಿನ ಮಾರಕ ಕಾಯಿಲೆ ಚಿಕಿತ್ಸೆಗಾಗಿ ಮತಾಂತರ ನಿರ್ಧಾರ! ಟಿವಿ9 ವರದಿಯ ಬಳಿಕ ಬದಲಾಯ್ತು ಬಡ ಕುಟುಂಬದ ಜೀವನ
ಬಡ ಕುಟುಂಬಕ್ಕೆ ಕಾಡಿದ ಮಾರಕ ಕಾಯಿಲೆಯ ಚಿಕಿತ್ಸೆಗಾಗಿ ಮತಾಂತರ ನಿರ್ಧಾರ! ಟಿವಿ9 ವರದಿಯ ಬಳಿಕ ಬದಲಾಯ್ತು ಬಡ ಕುಟುಂಬದ ಜೀವನ
TV9 Web
| Updated By: ಆಯೇಷಾ ಬಾನು|

Updated on:Mar 30, 2022 | 3:49 PM

Share

ವಿಜಯಪುರ: ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ ದಂಪತಿ ತಮ್ಮ ಮಗನ ಚಿಕಿತ್ಸೆಗೆ ಲಕ್ಷ ಲಕ್ಷ ಹಣ ಹೊಂದಿಸಲಾಗದೇ ನಿತ್ಯವೂ ಪರದಾಡುತ್ತಿದ್ದಾರೆ. ಈ ಕುಟುಂಬ ನಿತ್ಯ ದುಡಿದ್ರೇನೆ ಆ ದಿನದ ಸಂಸಾರ ಸಾಗೋದು. ಇಂತಹ ಸ್ಥಿತಿಯಲ್ಲೂ ಆ ದಂಪತಿಯ ಮಗನಿಗೆ ಬಂದೆರಗಿದ ಮಾರಕ ಕಾಯಿಲೆ, ಮತಾಂತರ ನಿರ್ಧಾರಕ್ಕೆ ತಂದು ನಿಲ್ಲಿಸಿತ್ತು. ಆದ್ರೆ ಟಿವಿ9 ಪ್ರಸಾರ ಮಾಡಿದ ವರದಿಯಿಂದ ಆ ಕುಟುಂಬವೀಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಪಟ್ಟಣದ ಈರಣ್ಣ ಹಾಗೂ ಸವಿತಾ ದಂಪತಿಗೆ ಮೂರು ಜನ ಮಕ್ಕಳು. ಇಬ್ಬರು ಹೆಣ್ಣು ಹಾಗೂ ಓರ್ವ ಗಂಡು ಮಗು. ಈರಣ್ಣ ಡಾಬವೊಂದರಲ್ಲಿ ಕೆಲ್ಸ ಮಾಡ್ತಿದ್ರೆ, ಸವಿತಾ ನಿತ್ಯ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಇಂತಹ ಕಡುಬಡತನದಲ್ಲಿರೋ ಈ ದಂಪತಿಯ ಮೂರು ವರ್ಷದ ಮಗನಿಗೆ ಎದುರಾಗಿದ್ದು, ಥೆಲಿಸೇಮಿಯಾ ರೋಗ. ಈ ರೋಗ ಗುಣಪಡಿಸಬೇಕು ಅಂದ್ರೆ ಸುಮಾರು 10 ರಿಂದ 15 ಲಕ್ಷ ರೂಪಾಯಿ ಖರ್ಚಾಗುತ್ತೆ ಅಂತ ವೈದ್ಯರು ಹೇಳಿದ್ದಾರೆ. ಹಣಕ್ಕಾಗಿ ಸ್ನೇಹಿತರು ಹಾಗೂ ಸಂಬಂಧಿಕರ ಬಳಿ ಅಂಗಲಾಚಿದ್ದಾರೆ. ಯಾರಿದಂಲೂ ಹಣದ ಸಹಾಯವಾಗಿಲ್ಲ. ಕೊನೆಗೆ ಮತಾಂತರವಾದ್ರೆ ಹಣದ ಸಹಾಯ ಸಿಗುತ್ತೆ ಅಂತಾ ಅದ್ಯಾರೋ ಹೇಳಿದ ಮಾತು ಕೇಳಿ ಮಗನ ಚಿಕಿತ್ಸೆಗೆ ಹಣ ಹೊಂದಿಸುವ ಸಲುವಾಗಿ ಮತಾಂತರಕ್ಕೆ ಮುಂದಾಗಿದ್ರು.

ದಂಪತಿ ಹಣಕ್ಕಾಗಿ ಮತಾಂತರವಾಗ್ತಿರೋ ಬಗ್ಗೆ ಟಿವಿ9 ತಂಡ ಸುದ್ದಿ ಪ್ರಸಾರ ಮಾಡಿತ್ತು. ವರದಿ ಪ್ರಸಾರವಾಗ್ತಿದ್ದಂತೆ ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಆಧ್ಯಕ್ಷ, ಮಾಜಿ ಸಚಿವ ಎಂ.ಬಿ ಪಾಟೀಲ್, ಮಗುವಿಗೆ ತಮ್ಮ ಆಸ್ಪತ್ರೆಯಿಂದ ಉಚಿತ ಚಿಕಿತ್ಸೆ ನೀಡಿ ಗುಣಪಡಿಸುವುದಾಗಿ ಭರವಸೆ ನೀಡಿದ್ರು. ಕೂಡಲೇ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೂ ಸೂಚಿಸಿದ್ರು. ಸದ್ಯ ಪುಟ್ಟ ಬಾಲಕನಿಗೆ ಬಿ.ಎಂ ಪಾಟೀಲ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಮಗನಿಗೆ ಉಚಿತ ಚಿಕಿತ್ಸೆ ಸಿಗುತ್ತಿರೋದ್ರಿಂದ ದಂಪತಿ ನಿಟ್ಟುಸಿರು ಬಿಟ್ಟಿದ್ದು, ಮತಾಂತರವಾಗುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಒಟ್ನಲ್ಲಿ ಬಡತನದ ಬೇಗೆಯಿಂದ ಬಳಲಿಚಿಕಿತ್ಸೆಗೆ ಹಣ ಹೊಂದಿಸಲಾಗದೆ ಪರದಾಡುತ್ತಿದ್ದ ಕುಟುಂಬದಲ್ಲೀಗ ನಗು ಮೂಡಿದೆ. ಮಗ ಹುಷಾರಾಗ್ತಾನೆ. ಎಲ್ಲರಂತೆ ಈತ ಕೂಡ ಆಡಿ ನಲಿಯುತ್ತಾನೆ ಅನ್ನೋ ಆಶಾ ಭಾವ ದಂಪತಿಯಲ್ಲಿ ಮನೆ ಮಾಡಿದೆ.

ವರದಿ: ಅಶೋಕ ಯಡಳ್ಳಿ, ಟಿವಿ9 ವಿಜಯಪುರ

ಇದನ್ನೂ ಓದಿ: Lakhimpur Kheri ನಿಮ್ಮ ನಿಲುವೇನು?; ಲಖಿಂಪುರ ಖೇರಿ ಪ್ರಕರಣದ ಆರೋಪಿಗೆ ಜಾಮೀನು ರದ್ದು ಕೋರಿ ಯುಪಿ ಸರ್ಕಾರ ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್

ಬಿಜೆಪಿಗೆ ಮತ ಹಾಕಬೇಡಿ ಎಂದು ಬೆದರಿಕೆ ಹಾಕಿದ್ದ ಟಿಎಂಸಿ ಶಾಸಕನ ವಿರುದ್ಧ ಚುನಾವಣಾ ಆಯೋಗದ ಕ್ರಮ; ಪ್ರಚಾರದಿಂದ ನಿರ್ಬಂಧ

Published On - 3:42 pm, Wed, 30 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ